ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ. ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.

ದಿಢೀರ್​​ ಈರುಳ್ಳಿ ದರ ಕುಸಿದಿದ್ದಕ್ಕೆ ರೈತರಿಂದ ಭುಗಿಲೆದ್ದ ಆಕ್ರೋಶ
ಸಾಧು ಶ್ರೀನಾಥ್​

Updated on: Dec 08, 2019 | 5:35 PM

ವಿಜಯಪುರ: ದಿಢೀರ್ ಈರುಳ್ಳಿ ದರ ಕುಸಿದಿದ್ದಕ್ಕೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಂದ ಗಲಾಟೆ ಶುರುವಾಗಿದೆ. ದಲ್ಲಾಳಿಗಳು ಉದ್ದೇಶಪೂರ್ವಕವಾಗಿ ದರ ಕಡಿಮೆ ಮಾಡಿದ್ದಾರೆ ಎಂದು ಬೆಳೆಗಾರರು ಆರೋಪಿಸಿದ್ದಾರೆ.

ಉತ್ತಮ ದರ್ಜೆಯ ಈರುಳ್ಳಿ ಕ್ವಿಂಟಾಲ್​​ಗೆ 7000 ರೂಪಾಯಿ ಇದ್ದ ಬೆಲೆ 3000 ರೂಪಾಯಿ ಕ್ವಿಂಟಾಲ್ ಗೆ ಇಳಿದಿದೆ. ಇದರಿಂದ ಕೆರಳಿದ ಈರುಳ್ಳಿ ಬೆಳೆಗಾರರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿ ಗಲಾಟೆ ಮಾಡುತ್ತಿದ್ದಾರೆ. ಈರುಳ್ಳಿಗೆ ಸೂಕ್ತ ದರ ನಿಗದಿ ಮಾಡುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ.



Published On - 4:32 pm, Sun, 8 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us