AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಿ ಸಂಸ್ಕರಣ ಘಟಕ ಸ್ಥಾಪಿಸದೇ ನಿರ್ಲಕ್ಷ್ಯ; ಸರ್ಕಾರಿ ಕಾಟನ್ ಮಿಲ್​ಗಳಿಲ್ಲದೆ ಯಾದಗಿರಿ ಹತ್ತಿ ಬೆಳೆಗಾರರ ಪರದಾಟ

ಯಾದಗಿರಿ ಜಿಲ್ಲೆಯ ಅರ್ಧ ಭಾಗದಷ್ಟು ರೈತರು ಹತ್ತಿ ಬೆಳೆಯನ್ನೇ ಸಾಮಾನ್ಯವಾಗಿ ಬೆಳೆಯುತ್ತಾರೆ. ಭೀಮ ಮತ್ತು ಕೃಷ್ಣ ನದಿಗಳು ಇರುವ ಕಾರಣಕ್ಕೆ ಮತ್ತು ಈ ಜಮೀನುಗಳಲ್ಲಿ ಹತ್ತಿ ಬೆಳೆ ಹೆಚ್ಚು ಇಳುವರಿ ಬರುತ್ತದೆ ಎನ್ನುವ ಕಾರಣಕ್ಕೆ ಹತ್ತಿ ಬೆಳೆಯನ್ನ ಬೆಳೆಯುತ್ತಾರೆ.

ಹತ್ತಿ ಸಂಸ್ಕರಣ ಘಟಕ ಸ್ಥಾಪಿಸದೇ ನಿರ್ಲಕ್ಷ್ಯ; ಸರ್ಕಾರಿ ಕಾಟನ್ ಮಿಲ್​ಗಳಿಲ್ಲದೆ ಯಾದಗಿರಿ ಹತ್ತಿ ಬೆಳೆಗಾರರ ಪರದಾಟ
ಹತ್ತಿ ಮಾರಾಟಕ್ಕೆ ಸರ್ಕಾರಿ ಮಾರುಕಟ್ಟೆ ಇಲ್ಲದೆ ರೈತರಲ್ಲಿ ಆತಂಕ
preethi shettigar
| Edited By: |

Updated on:Mar 05, 2021 | 12:19 PM

Share

ಯಾದಗಿರಿ: ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹತ್ತಿ ಬೆಳೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿ ಮುಂಗಾರು ಹಂಗಾಮಿನಲ್ಲಿ 15,27,98 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದ್ದು, ನೀರಾವರಿ 54,666 ಮತ್ತು ಖುಷ್ಕಿ ಜಮೀನಿನಲ್ಲಿ 98,132 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಈ ನಿಟ್ಟಿನಲ್ಲಿ ಹತ್ತಿ ಕಳೆದ ವರ್ಷಕ್ಕಿಂತ ಶೇಕಡಾ 10ರಷ್ಟು ಹೆಚ್ಚಳವಾಗಿದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯುವ ಹತ್ತಿಗೆ ಸೂಕ್ತ ಮಾರುಕಟ್ಟೆ ಇಲ್ಲದಿರುವುದು ಸದ್ಯ ಸಮಸ್ಯೆಯಾಗಿದೆ.

ಯಾದಗಿರಿ ಜಿಲ್ಲೆಯ ಅರ್ಧ ಭಾಗದಷ್ಟು ರೈತರು ಹತ್ತಿ ಬೆಳೆಯನ್ನೇ ಸಾಮಾನ್ಯವಾಗಿ ಬೆಳೆಯುತ್ತಾರೆ. ಭೀಮಾ ಮತ್ತು ಕೃಷ್ಣಾ ನದಿಗಳು ಇರುವ ಕಾರಣಕ್ಕೆ ಮತ್ತು ಈ ಜಮೀನುಗಳಲ್ಲಿ ಹತ್ತಿ ಬೆಳೆ ಹೆಚ್ಚು ಇಳುವರಿ ಬರುತ್ತದೆ ಎನ್ನುವ ಕಾರಣಕ್ಕೆ ಹತ್ತಿ ಬೆಳೆಯನ್ನ ಬೆಳೆಯುತ್ತಾರೆ. ಆದರೆ ಹತ್ತಿ ಬೆಳೆದ ಜಿಲ್ಲೆಯ ರೈತರಿಗೆ ಹತ್ತಿ ಮಾರಾಟ ಮಾಡಲು ರಾಯಚೂರಿನಲ್ಲಿರುವ ಸರ್ಕಾರದ ಕಾಟನ್ ಮಿಲ್​ಗೆ ಹೋಗಬೇಕಾಗಿದೆ.

ಹತ್ತಿ ಸಂಸ್ಕರಣ ಘಟಕ ಇಲ್ಲ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚಾಗಿ ಬೆಳೆಯುವ ಹತ್ತಿಗೆ ಸೂಕ್ತ ಸಂಸ್ಕರಣ ಘಟಕ ಇಲ್ಲದ ಕಾರಣ ನಷ್ಟಕ್ಕೊಳಗಾಗುತ್ತಿದ್ದಾರೆ. ಸರ್ಕಾರ ಖರೀದಿ ಕೇಂದ್ರ ತೆಗೆಯುವ ಮುನ್ನ ಸಿಕ್ಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದು ರೈತರಿಗೆ ನಷ್ಟ ಉಂಟು ಮಾಡುತ್ತಿದೆ.

cotton market

ಹತ್ತಿ ಇಳುವರಿ ಹೆಚ್ಚಿದ್ದರು ಮಾರುಕಟ್ಟೆ ಇಲ್ಲ

ಸರ್ಕಾರಕ್ಕೆ ನಷ್ಟ: ರಾಜ್ಯದ ಎಲ್ಲಾ ಭಾಗಗಳಲ್ಲಿ ಸರ್ಕಾರಿ ಕಾಟನ್ ಮಿಲ್​ಗಳಿಲ್ಲ. ಹೀಗಾಗಿ ಸರ್ಕಾರಕ್ಕೆ ಇದರಿಂದ ವರ್ಷದಿಂದ ವರ್ಷಕ್ಕೆ ಸಾಕಷ್ಟು ನಷ್ಟವಾಗುತ್ತಿದೆ. ಸರ್ಕಾರದಿಂದಲೇ ಹತ್ತಿ ಸಂಸ್ಕರಣ ಘಟಕ ಆರಂಭಿಸಿದರೆ ರೈತರು ಯಾವಾಗ ಬೇಕು ಆವಾಗ ತಾವು ಬೆಳೆದ ಹತ್ತಿಯನ್ನ ಮಾರಾಟ ಮಾಡಬಹುದು. ಆದರೆ ಸರ್ಕಾರ ಈ ಗೋಜಿಗೆ ಹೋಗದೆ ರೈತರಿಗೂ ನಷ್ಟ ಅನುಭವಿಸುವಂತೆ ಮಾಡಿ ಖುದ್ದು ಸರ್ಕಾರವು ನಷ್ಟದಲ್ಲಿ ಮುಳುಗುತ್ತಿದೆ.

cotton market

ಹತ್ತಿ ಜಮೀನಿನ ದೃಶ್ಯ

ನಮ್ಮ ಜಿಲ್ಲೆಯ ರೈತರು ವರ್ಷದಿಂದ ವರ್ಷಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹತ್ತಿ ಬೆಳೆಯನ್ನ ಬೆಳೆಯುತ್ತಿದ್ದಾರೆ. ಇನ್ನು ಸರ್ಕಾರ ಕಾಟನ್ ಮಿಲ್ ಇಲ್ಲದ ಕಾರಣಕ್ಕೆ ರಾಯಚೂರಿಗೆ ಹೋಗಬೇಕಾಗಿದೆ. ಆದರೆ ದೂರದ ಊರಿಗೆ ಏಕೆ ಹೋಗಬೇಕು ಎಂದು ರೈತರು ಸಿಕ್ಕ ಬೆಲೆಗೆ ಇಲ್ಲೇ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಕೂಡಲೇ ಸರ್ಕಾರ ಜಿಲ್ಲೆಯಲ್ಲಿ ಹತ್ತಿ ಸಂಸ್ಕರಣ ಘಟಕ ಆರಂಭಿಸಬೇಕು ಎಂದು ರೈತ ಮುಖಂಡ ಲಕ್ಷ್ಮೀಕಾಂತ ಪಾಟೀಲ್ ಆಗ್ರಹಿಸಿದ್ದಾರೆ.

cotton market

ಹತ್ತಿ ಗಿಡ

ಸರ್ಕಾರದ ಹತ್ತಿ ಖರೀದಿ ಕೇಂದ್ರ ತಡವಾಗಿ ತೆಗೆಯುತ್ತದೆ. ಹೀಗಾಗಿ ರೈತರು ಪರ್ಯಾಯವಾಗಿ ಖಾಸಗಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಲಾಸ್ ಆಗುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಹತ್ತಿ ಜಿನ್ನಿಂಗ್ ಫ್ಯಾಕ್ಟರಿ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಅಧಿಕಾರಿ ಭೀಮರಾಯ ಮಸಲಿ ಹೇಳಿದ್ದಾರೆ.

ಇದನ್ನೂ ಓದಿ: ಅಚ್ಚರಿಗೆ ಕಾರಣವಾದ ಕಲಬುರಗಿ ಜೋಳ ಬೆಳೆ: ಜೋಳದ ಬೀಜಕ್ಕೆ ಬಂತು ಬಲು ಡಿಮ್ಯಾಂಡ್

Published On - 12:16 pm, Fri, 5 March 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ