Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧೆಡೆ ಬಣವೆ, ಜಮೀನಿಗೆ ಬೆಂಕಿ; ಅಪಾರ ಪ್ರಮಾಣದ ಬೆಳೆ ನಾಶ

ಈಶಪ್ಪ ಕುಂಬಾರ, ಬಸಪ್ಪ ಮಡಿವಾಳರ ಸೇರಿದಂತೆ ಹಲವು ರೈತರ ಬಣವಿಗಳಿಗೆ ಬೆಂಕಿ ಬಿದ್ದಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ವಿವಿಧೆಡೆ ಬಣವೆ, ಜಮೀನಿಗೆ ಬೆಂಕಿ; ಅಪಾರ ಪ್ರಮಾಣದ ಬೆಳೆ ನಾಶ
ಬಣವೆ ಬೆಂಕಿಗೆ ಆಹುತಿಯಾಗುತ್ತಿರುವುದನ್ನು ನೋಡುತ್ತಿರುವ ರೈತ
Follow us
TV9 Web
| Updated By: ganapathi bhat

Updated on:Apr 05, 2022 | 12:47 PM

ಚಿತ್ರದುರ್ಗ: ಜಿಲ್ಲೆಯ ಕೋನಾಪುರ ಬಳಿ ಆಕಸ್ಮಿಕ ಬೆಂಕಿಗೆ 20 ಬಣವೆ ಬೆಂಕಿಗಾಹುತಿಯಾಗಿವೆ. ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರದ ಸೇಂಗಾ ಹೊಟ್ಟಿನ 20 ಬಣವೆಗಳು ಬೆಂಕಿಗೆ ಸುಟ್ಟು ಹೋಗಿವೆ. ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗದಗ: ರೈತರು ಸಂಗ್ರಹಿಸಿಟ್ಟಿದ್ದ 12 ಬಣವೆಗಳಿಗೆ ಬೆಂಕಿ ಬಿದ್ದ ಘಟನೆ ಜಿಲ್ಲೆಯ ಬೆಟಗೇರಿಯ ಬಣ್ಣದ ನಗರದಲ್ಲಿ ಸಂಭವಿಸಿದೆ. ಪಕ್ಕದಲ್ಲಿರುವ ಸ್ಮಶಾನದಿಂದ ಕಿಡಿ ತಾಕಿ ಅಗ್ನಿ ಅವಘಡ ಘಟಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಈಶಪ್ಪ ಕುಂಬಾರ, ಬಸಪ್ಪ ಮಡಿವಾಳರ ಸೇರಿದಂತೆ ಹಲವು ರೈತರ ಬಣವಿಗಳಿಗೆ ಬೆಂಕಿ ಬಿದ್ದಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

CHITRADURGA BANAVE FIRE

ಚಿತ್ರದುರ್ಗದಲ್ಲಿ ಬಣವೆ ಬೆಂಕಿಗಾಹುತಿ

ರಾಮನಗರ: ಕಿಡಿಗೇಡಿಗಳ ಕೃತ್ಯದಿಂದ ಜಮೀನಿಗೆ ಬೆಂಕಿ ಬಿದ್ದು, ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಟೆಕೊಪ್ಪ ಎಂಬಲ್ಲಿ ಇಂದು (ಏಪ್ರಿಲ್ 5) ಸಂಭವಿಸಿದೆ. ಇದರಿಂದಾಗಿ ಕೋಟೆಕೊಪ್ಪ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿದೆ.

ಕೆಂಪಶಿವನಯ್ಯ ಎಂಬುವವರಿಗೆ ಸೇರಿದ ಜಮೀನಿಗೆ ಬೆಂಕಿ ಬಿದ್ದಿದೆ. ಮಾವಿನ ಗಿಡ, ತೆಂಗಿನ ಮರ, ನಿಂಬೆಗಿಡ, ತೇಗದ ಮರ ಜೊತೆಗೆ ಜಮೀನಿನಲ್ಲಿದ್ದ ಒಂದು ಶೆಡ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೋಲಾರದಿಂದ ವಿದೇಶಕ್ಕೆ ಸುವಾಸೆನೆಯ ದ್ರವ್ಯ ರಫ್ತು; ಧವನ ಬೆಳೆದು ಲಾಭ ಗಳಿಸುತ್ತಿರುವ ರೈತರು

ಇದನ್ನೂ ಓದಿ: ಪ್ರಧಾನಿ ಮೋದಿ ಬಳಿ ಸೆಲೆಬ್ರಿಟಿಗಳ ಬರ್ತ್ ​ಡೇ ವಿಶ್ ಮಾಡಲು ಸಮಯವಿದೆ, ರೈತರಿಗಾಗಿ ಸಮಯವಿಲ್ಲ: ಸತೀಶ್​ ಜಾರಕಿಹೊಳಿ

Published On - 11:09 pm, Mon, 5 April 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು