AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಕುಸಿತದಿಂದಾಗಿ ಕಂಗಾಲಾದ ರೈತರು; ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರಲ್ಲಿ ಹೆಚ್ಚಿದ ಆತಂಕ

ನಾವು ಬೆಲೆ ಕುಸಿತದಿಂದಾಗಿ ಸಂಕಷ್ಟದಲ್ಲಿದ್ದರೂ ಅಧಿಕಾರಿಗಳು ಮತ್ತು ಸರ್ಕಾರ ಮಾತ್ರ ತೆಂಗು ಬೆಳೆಗಾರರ ಬಗ್ಗೆ ಈವರೆಗೆ ತಲೆ ಕೆಡಿಸಿಕೊಂಡಿಲ್ಲ. ಯಾವುದೇ ಬೆಂಬಲ ಬೆಲೆ ಘೋಷಣೆ ಅಥವಾ ಪರಿಹಾರದ ಬಗ್ಗೆ ಯೋಚಿಸಿಲ್ಲ ಎಂದು ತೆಂಗು ಬೆಳೆಗಾರರಾದ ಉಜ್ಜನಿಸ್ವಾಮಿ ಹೇಳಿದ್ದಾರೆ.

ಬೆಲೆ ಕುಸಿತದಿಂದಾಗಿ ಕಂಗಾಲಾದ ರೈತರು; ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರಲ್ಲಿ ಹೆಚ್ಚಿದ ಆತಂಕ
ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರಲ್ಲಿ ಹೆಚ್ಚಿದ ಆತಂಕ
TV9 Web
| Edited By: |

Updated on: Jun 09, 2021 | 2:59 PM

Share

ಚಿತ್ರದುರ್ಗ : ಕೊರೊನಾ ಎರಡನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಲಾಕ್​ಡೌನ್​ ಘೋಷಿಸಿದೆ. ಇದರಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಆದರೆ ಲಾಕ್​ಡೌನ್​ನಿಂದಾಗಿ ವ್ಯಾಪಾರ, ವ್ಯವಹಾರ ನಿಂತಿದ್ದು, ದಿನಗೂಲಿಕಾರರು, ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸದ್ಯ ಇಂತಹದ್ದೇ ಪರಿಸ್ಥಿತಿ ಚಿತ್ರದುರ್ಗ ಜಿಲ್ಲೆಯ ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರದ್ದಾಗಿದೆ. ಜಮೀನಿನಲ್ಲಿ ಬೆವರು ಸುರಿಸಿ ಬೆಳೆದ ತೆಂಗು ಭರ್ಜರಿ ಬೆಳೆ ಬಂದಿದೆ. ಆದರೆ ಬೆಲೆ ಕುಸಿತದಿಂದಾಗಿ ತೆಂಗು ಬೆಳೆಗಾರರು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ.

ಕೋಟೆನಾಡು ಚಿತ್ರದುರ್ಗ, ಹೊಸದುರ್ಗ, ಹಿರಿಯೂರು ಮತ್ತು ಹೊಳಲ್ಕೆರೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ತೆಂಗು ಬೆಳೆಯಲಾಗುತ್ತದೆ. ಸುಮಾರು 30ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಾಗಿದೆ. ಆದರೆ ಕಳೆದ ಒಂದೂವರೆ ವರ್ಷದಿಂದ ಕೊರೊನಾ ಹೆಚ್ಚಾಗುತ್ತಿದ್ದು, ಲಾಕ್ ಡೌನ್ ಪರಿಣಾಮ ಬೆಳೆಗಾರರು ಕಂಗಾಲಾಗಿದ್ದಾರೆ. ಈ ಮೊದಲು ಕ್ವಿಂಟಲ್​ಗೆ 43 ಸಾವಿರ ರೂಪಾಯಿ ವರೆಗೆ ಮಾರಾಟವಾಗುತ್ತಿದ್ದ ತೆಂಗು ಬೆಳೆ, ಈಗ 27 ಸಾವಿರಕ್ಕೆ ಕುಸಿದಿದೆ. ಹೀಗಾಗಿ, ರೈತರು ಕಂಗಾಲಾಗಿದ್ದು ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ನಾವು ಬೆಲೆ ಕುಸಿತದಿಂದಾಗಿ ಸಂಕಷ್ಟದಲ್ಲಿದ್ದರೂ ಅಧಿಕಾರಿಗಳು ಮತ್ತು ಸರ್ಕಾರ ಮಾತ್ರ ತೆಂಗು ಬೆಳೆಗಾರರ ಬಗ್ಗೆ ಈವರೆಗೆ ತಲೆ ಕೆಡಿಸಿಕೊಂಡಿಲ್ಲ. ಯಾವುದೇ ಬೆಂಬಲ ಬೆಲೆ ಘೋಷಣೆ ಅಥವಾ ಪರಿಹಾರದ ಬಗ್ಗೆ ಯೋಚಿಸಿಲ್ಲ ಎಂದು ತೆಂಗು ಬೆಳೆಗಾರರಾದ ಉಜ್ಜನಿಸ್ವಾಮಿ ಹೇಳಿದ್ದಾರೆ.

ಇನ್ನು ಈ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಕೇಳಿದರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆಂದಷ್ಟೇ ಹೇಳುತ್ತಿದ್ದಾರೆ. ಒಟ್ಟಾರೆಯಾಗಿ ಕೊರೊನಾ ಸಂದಿಗ್ಧ ಸಮಯದಲ್ಲಿ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಲೆ ಕುಸಿತ, ಅಸಾಗಣೆ ವ್ಯವಸ್ಥೆ ಹಾಗೂ ಕೊಳ್ಳುವವರಿಲ್ಲದೆ ಕಂಗಾಲಾಗಿದ್ದಾರೆ. ಹೀಗಾಗಿ, ಸರ್ಕಾರ ಈ ಬಗ್ಗೆ ಅದಷ್ಟು ಬೇಗ ಕ್ರಮಕೈಗೊಂಡು, ರೈತರ ನೆರವಿಗೆ ಧಾವಿಸಬೇಕಿದೆ.

ಇದನ್ನೂ ಓದಿ:

ಲಾಕ್​ಡೌನ್​ನಿಂದ ಬೆಳೆದ ಬೆಳೆಗೆ ಬೆಲೆ ಇಲ್ಲ; ಹೊಲದಲ್ಲಿಯೇ ಬದನೆಕಾಯಿಯನ್ನು ನಾಶ ಮಾಡಿದ ಬೆಳಗಾವಿ ರೈತ

ಚಿಕ್ಕಮಗಳೂರು ರೈತರಲ್ಲಿ ಆತಂಕ; ಲಾಕ್​ಡೌನ್ ಹಿನ್ನೆಲೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಕಂಗಾಲು

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ