AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಕುಸಿತದಿಂದಾಗಿ ಕಂಗಾಲಾದ ರೈತರು; ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರಲ್ಲಿ ಹೆಚ್ಚಿದ ಆತಂಕ

ನಾವು ಬೆಲೆ ಕುಸಿತದಿಂದಾಗಿ ಸಂಕಷ್ಟದಲ್ಲಿದ್ದರೂ ಅಧಿಕಾರಿಗಳು ಮತ್ತು ಸರ್ಕಾರ ಮಾತ್ರ ತೆಂಗು ಬೆಳೆಗಾರರ ಬಗ್ಗೆ ಈವರೆಗೆ ತಲೆ ಕೆಡಿಸಿಕೊಂಡಿಲ್ಲ. ಯಾವುದೇ ಬೆಂಬಲ ಬೆಲೆ ಘೋಷಣೆ ಅಥವಾ ಪರಿಹಾರದ ಬಗ್ಗೆ ಯೋಚಿಸಿಲ್ಲ ಎಂದು ತೆಂಗು ಬೆಳೆಗಾರರಾದ ಉಜ್ಜನಿಸ್ವಾಮಿ ಹೇಳಿದ್ದಾರೆ.

ಬೆಲೆ ಕುಸಿತದಿಂದಾಗಿ ಕಂಗಾಲಾದ ರೈತರು; ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರಲ್ಲಿ ಹೆಚ್ಚಿದ ಆತಂಕ
ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರಲ್ಲಿ ಹೆಚ್ಚಿದ ಆತಂಕ
TV9 Web
| Edited By: |

Updated on: Jun 09, 2021 | 2:59 PM

Share

ಚಿತ್ರದುರ್ಗ : ಕೊರೊನಾ ಎರಡನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಲಾಕ್​ಡೌನ್​ ಘೋಷಿಸಿದೆ. ಇದರಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಆದರೆ ಲಾಕ್​ಡೌನ್​ನಿಂದಾಗಿ ವ್ಯಾಪಾರ, ವ್ಯವಹಾರ ನಿಂತಿದ್ದು, ದಿನಗೂಲಿಕಾರರು, ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸದ್ಯ ಇಂತಹದ್ದೇ ಪರಿಸ್ಥಿತಿ ಚಿತ್ರದುರ್ಗ ಜಿಲ್ಲೆಯ ತೆಂಗು ಬೆಳೆಗಾರರು ಮತ್ತು ವ್ಯಾಪಾರಸ್ಥರದ್ದಾಗಿದೆ. ಜಮೀನಿನಲ್ಲಿ ಬೆವರು ಸುರಿಸಿ ಬೆಳೆದ ತೆಂಗು ಭರ್ಜರಿ ಬೆಳೆ ಬಂದಿದೆ. ಆದರೆ ಬೆಲೆ ಕುಸಿತದಿಂದಾಗಿ ತೆಂಗು ಬೆಳೆಗಾರರು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ.

ಕೋಟೆನಾಡು ಚಿತ್ರದುರ್ಗ, ಹೊಸದುರ್ಗ, ಹಿರಿಯೂರು ಮತ್ತು ಹೊಳಲ್ಕೆರೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ತೆಂಗು ಬೆಳೆಯಲಾಗುತ್ತದೆ. ಸುಮಾರು 30ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಾಗಿದೆ. ಆದರೆ ಕಳೆದ ಒಂದೂವರೆ ವರ್ಷದಿಂದ ಕೊರೊನಾ ಹೆಚ್ಚಾಗುತ್ತಿದ್ದು, ಲಾಕ್ ಡೌನ್ ಪರಿಣಾಮ ಬೆಳೆಗಾರರು ಕಂಗಾಲಾಗಿದ್ದಾರೆ. ಈ ಮೊದಲು ಕ್ವಿಂಟಲ್​ಗೆ 43 ಸಾವಿರ ರೂಪಾಯಿ ವರೆಗೆ ಮಾರಾಟವಾಗುತ್ತಿದ್ದ ತೆಂಗು ಬೆಳೆ, ಈಗ 27 ಸಾವಿರಕ್ಕೆ ಕುಸಿದಿದೆ. ಹೀಗಾಗಿ, ರೈತರು ಕಂಗಾಲಾಗಿದ್ದು ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ನಾವು ಬೆಲೆ ಕುಸಿತದಿಂದಾಗಿ ಸಂಕಷ್ಟದಲ್ಲಿದ್ದರೂ ಅಧಿಕಾರಿಗಳು ಮತ್ತು ಸರ್ಕಾರ ಮಾತ್ರ ತೆಂಗು ಬೆಳೆಗಾರರ ಬಗ್ಗೆ ಈವರೆಗೆ ತಲೆ ಕೆಡಿಸಿಕೊಂಡಿಲ್ಲ. ಯಾವುದೇ ಬೆಂಬಲ ಬೆಲೆ ಘೋಷಣೆ ಅಥವಾ ಪರಿಹಾರದ ಬಗ್ಗೆ ಯೋಚಿಸಿಲ್ಲ ಎಂದು ತೆಂಗು ಬೆಳೆಗಾರರಾದ ಉಜ್ಜನಿಸ್ವಾಮಿ ಹೇಳಿದ್ದಾರೆ.

ಇನ್ನು ಈ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಕೇಳಿದರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆಂದಷ್ಟೇ ಹೇಳುತ್ತಿದ್ದಾರೆ. ಒಟ್ಟಾರೆಯಾಗಿ ಕೊರೊನಾ ಸಂದಿಗ್ಧ ಸಮಯದಲ್ಲಿ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಲೆ ಕುಸಿತ, ಅಸಾಗಣೆ ವ್ಯವಸ್ಥೆ ಹಾಗೂ ಕೊಳ್ಳುವವರಿಲ್ಲದೆ ಕಂಗಾಲಾಗಿದ್ದಾರೆ. ಹೀಗಾಗಿ, ಸರ್ಕಾರ ಈ ಬಗ್ಗೆ ಅದಷ್ಟು ಬೇಗ ಕ್ರಮಕೈಗೊಂಡು, ರೈತರ ನೆರವಿಗೆ ಧಾವಿಸಬೇಕಿದೆ.

ಇದನ್ನೂ ಓದಿ:

ಲಾಕ್​ಡೌನ್​ನಿಂದ ಬೆಳೆದ ಬೆಳೆಗೆ ಬೆಲೆ ಇಲ್ಲ; ಹೊಲದಲ್ಲಿಯೇ ಬದನೆಕಾಯಿಯನ್ನು ನಾಶ ಮಾಡಿದ ಬೆಳಗಾವಿ ರೈತ

ಚಿಕ್ಕಮಗಳೂರು ರೈತರಲ್ಲಿ ಆತಂಕ; ಲಾಕ್​ಡೌನ್ ಹಿನ್ನೆಲೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಕಂಗಾಲು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!