AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಬೆಳೆಯಲು ರೈತರ ನಿರಾಸಕ್ತಿ.. ಅವಸಾನದತ್ತ ಸಾಗಿದ ತಳಿ

ಹಾವೇರಿ ಜಿಲ್ಲೆಯ ಬ್ಯಾಡಗಿ ಅಂದ್ರೆ ಸಾಕು ಥಟ್ಟನೆ ನೆನಪಾಗೋದು ಮೆಣಸಿನಕಾಯಿ. ಬ್ಯಾಡಗಿ ಮೆಣಸಿನಕಾಯಿಯ ಘಾಟು ವಿಶ್ವದ ಎಲ್ಲೆಲ್ಲೂ ಹರಡಿದೆ. ಆದ್ರೆ ಅದರ ಘಾಟು, ಟೇಸ್ಟು ಈಗ ಮೊದಲಿನಂತೆ ಉಳಿದಿಲ್ಲ.

ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಬೆಳೆಯಲು ರೈತರ ನಿರಾಸಕ್ತಿ.. ಅವಸಾನದತ್ತ ಸಾಗಿದ ತಳಿ
ಬ್ಯಾಡಗಿ ಮೆಣಸಿನಕಾಯಿ
ಆಯೇಷಾ ಬಾನು
| Edited By: |

Updated on: Dec 08, 2020 | 3:27 PM

Share

ಹಾವೇರಿ: ಒಂದು ಕಾಲದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯೋದ್ರಲ್ಲಿ ಹಾವೇರಿ ಸಖತ್ ಫೇಮಸ್ ಆಗಿತ್ತು. ಇಡೀ ಜಿಲ್ಲೆಯಲ್ಲಿ ಬ್ಯಾಡಗಿ ತಳಿ ಮೆಣಸಿನಕಾಯಿ ಬೆಳೆಯಲಾಗುತ್ತಿತ್ತು. ವಿಶ್ವದಲ್ಲೆಡೆ ಸಖತ್ ಹೆಸರು ವಾಸಿಯಾಗಿತ್ತು. ಆದ್ರೆ ಈಗ ಬ್ಯಾಡಗಿ ತಳಿ ಮೆಣಸಿನಕಾಯಿ ಬೆಳೆಯೋರ ಸಂಖ್ಯೆ ತೀರಾ ಕಡಿ‌ಮೆ ಆಗಿದೆ.

ವಿಶೇಷವಾಗಿ ಮಳೆಯನ್ನೇ ಆಶ್ರಯಿಸಿ ಬೆಳೆಯುತ್ತಿದ್ದ ಈ ತಳಿ ಮೆಣಸಿನಕಾಯಿ ಸಾಕಷ್ಟು ರುಚಿಭರಿತವಾಗಿ ಇರ್ತಿತ್ತು. ನಂತರ ಧಾರವಾಡ, ಅಣ್ಣಿಗೇರಿ ಕಡೆಗಳಲ್ಲಿ ರೈತರು ಬ್ಯಾಡಗಿ ಬೆಳೆಯೋಕೆ ಶುರು ಮಾಡಿದ್ರು. ಆದ್ರೆ ಕಾರಣಗಳಿಂದ ಈ ತಳಿ ಬೆಳೆಯೋರ ಸಂಖ್ಯೆ ತೀರಾ ಕಡಿಮೆಯಾಗಿದೆ.

ಯಾಕಂದ್ರೆ ಬ್ಯಾಡಗಿ ಬೆಳೀತಿದ್ದ ಬಹುತೇಕ ರೈತರು ಹತ್ತಿ, ಮೆಕ್ಕೆಜೋಳ, ಶೇಂಗಾ, ಸೋಯಾಬಿನ್ ನಂಥಾ ಬೆಳೆಗಳನ್ನ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಹೀಗಾಗಿ ಬ್ಯಾಡಗಿ ಬೆಳೆಯೋರ ಸಂಖ್ಯೆ ತೀರಾ ಕಡಿಮೆಯಾಗಿದೆ. ಸರಕಾರ ಬ್ಯಾಡಗಿ ತಳಿಯ ಮೆಣಸಿನಕಾಯಿ ಅಭಿವೃದ್ಧಿ ಮಾಡಲು ಮುಂದಾಗಬೇಕಿದೆ ಎಂದು ಸ್ಥಳೀಯ ರೈತರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಅವಸಾನದತ್ತ ಬ್ಯಾಡಗಿ ಮೆಣಸಿನಕಾಯಿ: ಜಿಲ್ಲೆಯಲ್ಲಿ ಕೆಲವು ವರ್ಷಗಳ ಹಿಂದೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬ್ಯಾಡಗಿ ತಳಿ ಮೆಣಸಿನಕಾಯಿ ಬೆಳೆಯಲಾಗ್ತಿತ್ತು. ಹೀಗಾಗಿ ಮಾರ್ಕೆಟ್​ನಲ್ಲಿ ಸಾವಿರ ಸಾವಿರ ಚೀಲಗಟ್ಟಲೆ ಬ್ಯಾಡಗಿ ಬರ್ತಿತ್ತು. ಆದ್ರೆ ಈಗ ಕೇವಲ‌ ಬೆರಳೆಣಿಕೆಯಷ್ಟು ರೈತರು ಮಾತ್ರ ಬ್ಯಾಡಗಿ ಬೆಳೀತಿದ್ದಾರೆ. ಇದರಿಂದ ಮಾರ್ಕೆಟ್​ನಲ್ಲಿ ಬ್ಯಾಡಗಿ ಸಿಗೋದು ಕಡಿಮೆಯಾಗಿದೆ. ಅಲ್ಲದೆ ಕ್ಯಾಪ್ಸೈಸಿನ್ ಎಂಬ ಅಂಶವನ್ನು ಬ್ಯಾಡಗಿ ಹೊಂದಿದ್ದು ಅದು ಕ್ಯಾನ್ಸರ್ ರೋಗ ಬರಲು ಕಾರಣವಾಗಿದೆ ಎಂಬುದು ಜನರಲ್ಲಿ ಬೇರೂರಿದೆ.

ಇದೂ ಕೂಡ ಬೇಡಿಕೆ ಕಡಿಮೆ ಮಾಡಲು ಕಾರಣವಾಗಿದೆ. ಹೆಚ್ಚು ಬಣ್ಣ ಹಾಗೂ ಟೇಸ್ಟ್​ನಿಂದ ವಿಶ್ವದಲ್ಲಿ ಫೇಮಸ್ ಆಗಿದ್ದ ಬ್ಯಾಡಗಿ ಕುಸಿಯುತ್ತಿದೆ. ಇದರ ಬದಲು ಬೇರೆ ಬೇರೆ ತಳಿಯ ಮೆಣಸಿನಕಾಯಿಗಳು ಮಾರ್ಕೆಟ್​ನಲ್ಲಿ ದೊರೆಯುತ್ತಿವೆ. ಈಗ ಮಾರ್ಕೆಟ್​ಗೆ ಬರ್ತಿರೋ ಮೆಣಸಿನಕಾಯಿಯಲ್ಲಿ ಬ್ಯಾಡಗಿಯಂತಹ ಟೇಸ್ಟ್ ಇಲ್ಲದಾಗಿದೆ.

ಸರ್ಕಾರಕ್ಕೂ ವರ್ತಕರು ಹಾಗೂ ಸ್ಥಳೀಯ ರೈತರು ಬ್ಯಾಡಗಿ ತಳಿ ಮೆಣಸಿನಕಾಯಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡುತ್ತಲೆ ಬಂದಿದ್ದಾರೆ. ಬ್ಯಾಡಗಿ ಇತಿಹಾಸದ ಪುಟಗಳನ್ನ ಸೇರೋ ಮೊದ್ಲು ಸರ್ಕಾರ ಎಚ್ಚೆತ್ತುಕೊಂಡು ತಳಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಅಂತ ವರ್ತಕರು ಒತ್ತಾಯಿಸಿದ್ದಾರೆ.

ಬ್ಯಾಡಗಿ ಮೆಣಸಿನಕಾಯಿ ಬೆಂಗಳೂರಿನಲ್ಲಿ ಗ್ರಾಹಕರಿಗೆ ಮತ್ತಷ್ಟು ಖಾರ..

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?