AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಹಳ್ಳ ಹಿಡಿದ ಗಂಗಾ ಕಲ್ಯಾಣ ಯೋಜನೆ; ಹೋರಾಟದ ಎಚ್ಚರಿಕೆ ನೀಡಿದ ರೈತರು

ಈಗಾಗಲೇ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಮಾತ್ರವಲ್ಲದೇ ಹೊಳಲ್ಕೆರೆ ತಾಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠಕ್ಕೆ ತೆರಳಿ ಸಾಣೇಹಳ್ಳಿ ಶಾಖಾಮಠದ ಡಾ.ಪಂಡಿತಾರಾಧ್ಯ ಸ್ವಾಮೀಜಿ ಅವರಿಗೂ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗದಲ್ಲಿ ಹಳ್ಳ ಹಿಡಿದ ಗಂಗಾ ಕಲ್ಯಾಣ ಯೋಜನೆ; ಹೋರಾಟದ ಎಚ್ಚರಿಕೆ ನೀಡಿದ ರೈತರು
ಹೊಲಗಳಿಗೆ ನೀರಿಲ್ಲದೆ ರೈತರು ಪರದಾಡುತ್ತಿದ್ದಾರೆ
sandhya thejappa
|

Updated on: Mar 18, 2021 | 1:50 PM

Share

ಚಿತ್ರದುರ್ಗ: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಜಿಲ್ಲೆಯಲ್ಲೇ ರೈತರಿಗೆ ಗಂಗಾ ಕಲ್ಯಾಣ ಯೋಜನೆ ಫಲ ಸಿಗುತ್ತಿಲ್ಲ. ರೈತರಿಗೆ ಸಹಾಯ ನೀಡುವಲ್ಲಿಯೂ ಸಹ ಶಾಸಕರು ರಾಜಕಾರಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ನೂರು ವರ್ಷಗಳಲ್ಲಿ ಸುಮಾರು 70 ವರ್ಷ ಕಾಲ ಬರ ಎದುರಿಸಿದ ಜಿಲ್ಲೆ ಚಿತ್ರದುರ್ಗ. ಮಳೆ ಆಧಾರಿತ ಕೃಷಿ ಮಾಡುವ ಇಲ್ಲಿನ ರೈತರು ಅನೇಕ ಸಲ ಕೈ ಸುಟ್ಟುಕೊಂಡಿದ್ದಾರೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆಯ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಪಡೆದು ಕೃಷಿ ಕಾಯಕದ ಆಸೆ ಹೊತ್ತವರಿಗೆ ಶಾಸಕರೇ ವಿಲನ್ ಆಗಿದ್ದಾರಂತೆ.

ಕೊಳವೆ ಬಾವಿ ಕೊರೆಸುವುದನ್ನು ಬಿಜೆಪಿ ಶಾಸಕ ಎಂ.ಚಂದ್ರಪ್ಪ ತಡೆ ಹಿಡಿದಿದ್ದಾರೆ: ರೈತರ ಆಕ್ರೋಶ 2016-17, 2017-18ರಲ್ಲೇ 660 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ಈವರೆಗೆ 236 ಜನ ರೈತರ ಜಮೀನಿನಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗಿದೆ. ಇನ್ನುಳಿದ 424 ರೈತರಿಗೆ ಕೊಳವೆ ಬಾವಿ ಕೊರೆಸುವುದನ್ನು ಬಿಜೆಪಿ ಶಾಸಕ ಎಂ.ಚಂದ್ರಪ್ಪ ತಡೆ ಹಿಡಿದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಹೊಳಲ್ಕೆರೆಯ ಕಾಂಗ್ರೆಸ್ ಹೆಚ್.ಆಂಜನೇಯ ಕಾಲದಲ್ಲಿ ಆಗಿದ್ದ ಆಯ್ಕೆ ಪಟ್ಟಿ ಎಂಬ ಕಾರಣಕ್ಕೆ ತಡೆಹಿಡಿದು ರಾಜಕಾರಣ ಮಾಡುತ್ತಿದ್ದಾರೆ. ಮಾರ್ಚ್ ತಿಂಗಳು ಮುಗಿದರೆ ಸರ್ಕಾರದ ಅನುದಾನ ವಾಪಸ್ ಹೋಗುತ್ತದೆ. ಅದಕ್ಕೆ ಯಾರು ಹೊಣೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನೀರಿನ ವ್ಯವಸ್ಥೆಯಿಲ್ಲದೆ ಬೆಳೆ ಇಳುವರಿ ಕಡಿಮೆಯಾಗುತ್ತಿದೆ

ಹೋರಾಟದ ಎಚ್ಚರಿಕೆ ಈಗಾಗಲೇ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಮಾತ್ರವಲ್ಲದೇ ಹೊಳಲ್ಕೆರೆ ತಾಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠಕ್ಕೆ ತೆರಳಿ ಸಾಣೇಹಳ್ಳಿ ಶಾಖಾಮಠದ ಡಾ.ಪಂಡಿತಾರಾಧ್ಯ ಸ್ವಾಮೀಜಿ ಅವರಿಗೂ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಶಾಸಕರಿಗೆ ಈ ಬಗ್ಗೆ ತಿಳಿಸಿ ರೈತರಿಗೆ ಕೊಳವೆ ಬಾವಿ ಕೊರೆಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಅಂತೆಯೇ ಶಾಸಕರು ರೈತರಿಗೆ ಕೊಳವೆ ಬಾವಿ ನೀಡುವಲ್ಲಿ ರಾಜಕಾರಣ ಮಾಡುತ್ತಿದ್ದು, ರೈತರನ್ನು ಕಡೆಗಣೆಸುತ್ತಿದ್ದಾರೆಂದು ಸಿಎಂ ಬಿ.ಎಸ್.ಯಡಿಯೂರಪ್ಪಗೆ ದೂರು ರವಾನಿಸಿ, ಕೂಡಲೇ ಶಾಸಕರಿಗೆ ಈ ಬಗ್ಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಅಂತೆಯೇ ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಕೊಳವೆ ಬಾವಿ

ಇದನ್ನೂ ಓದಿ

ಬಾಗಲಕೋಟೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ; ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Bigg Boss Kannada: ರಘುಗೆ ವೋಟ್​ ಹಾಕಿ ಅಂತಿದ್ದಾರಾ ದ್ರಾವಿಡ್​, ಶಿವಣ್ಣ, ಪುನೀತ್​, ಡಾಲಿ? ಇದಪ್ಪಾ ಕ್ರಿಯೇಟಿವಿಟಿ ಅಂದ್ರೆ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್