AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಂಡಾಸ್​ ಚಂಡಮಾರುತದ ಅಬ್ಬರಕ್ಕೆ ಕಂಗಾಲಾದ ರಾಜ್ಯದ ರೈತರು

ಮಾಂಡೋಸ್​ ಚಂಡಮಾರುತದಿಂದ ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ರೈತರು ಹೈರಾಣಾಗಿದ್ದಾರೆ. ನಿರಂತರ ಮಳೆಯಿಂದ ಈಗಾಗಲೇ ಬಂದ ಬೆಳೆ‌ಯನ್ನು ಕಟಾವು ಮಾಡಲಾಗದೇ ರೈತರು ಸಂಕಷ್ಟದಲ್ಲಿದ್ದಾರೆ.

ಮ್ಯಾಂಡಾಸ್​ ಚಂಡಮಾರುತದ ಅಬ್ಬರಕ್ಕೆ ಕಂಗಾಲಾದ ರಾಜ್ಯದ ರೈತರು
ಮಾಂಡೋಸ್​ ಚಂಡಮಾರುತ ಎಫೆಕ್ಟ್​
TV9 Web
| Edited By: |

Updated on:Dec 12, 2022 | 12:31 PM

Share

ಕೋಲಾರ: ರಾಜ್ಯಾದ್ಯಂತ ಸತತವಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಯಿಂದ ಟೊಮ್ಯಾಟೊ ಬೆಳೆ ನಾಶವಾಗಿವೆ. ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಬೆಳೆಗೆ ಹೂಜಿ ಮತ್ತು ವೈರಸ್ ರೋಗಗಳು ಅಟ್ಯಾಕ್ ಮಾಡಿದ್ದು, ಲಕ್ಷಾಂತರ ರೂಪಾಯಿ ಬಂಡವಾಳ‌ ಹಾಕಿದ್ದ ರೈತರು ಬೆಳೆ ನಾಶದಿಂದ ಕಂಗಾಲಾಗಿದ್ದಾರೆ. ಗಿಡದಲ್ಲಿರುವ ಟೊಮ್ಯಾಟೊ ‌ಹಣ್ಣು ಕೀಳಲು ಆಗದೇ ತೋಟದಲ್ಲಿ ಬಿಟ್ಟಿದ್ದಾರೆ ರೈತರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಮ್ಯಾಂಡಾಸ್ ಚಂಡಮಾರುತದ ಪರಿಣಾಮ ಹೂ ಗಳ ಬೆಲೆಯಲ್ಲಿ ಭಾರಿ ಕುಸಿತ.

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹೂ ಬೆಳೆದ ಬೆಳೆಗಾರರು ಆತಂಕದಲ್ಲಿದ್ದಾರೆ. ಹೂಗಳಲ್ಲಿ ಮಳೆ ಹನಿ ಸೇರಿರುವ ಹಿನ್ನಲೆ ಬೆಲೆ ಕುಸಿತವಾಗಿದ್ದು, ಹೂ ಒದ್ದೆಯಾಗಿರುವ ಕಾರಣಕ್ಕೆ ಹೂ ಕೊಂಡುಕೊಳ್ಳಲು ವರ್ತಕರು ಹಿಂದೇಟು ಹಾಕುತ್ತಿದ್ದಾರೆ. ತರೇವಾರಿ ಹೂ ಬೆಳೆ ಹಾಗೂ ಮಾರುಕಟ್ಟೆಗೆ ಖ್ಯಾತಿಯಾಗಿದ್ದ ಚಿಕ್ಕಬಳ್ಳಾಪುರ, ಸಾವಿರಾರು ಹೆಕ್ಟರ್ ಪ್ರದೇಶಗಳಲ್ಲಿ ಹೂ ಬೆಳೆಯಲಾಗುತ್ತಿತ್ತು. ಇದ್ದಕ್ಕಿದ್ದ ಹಾಗೆ ಹೂ ಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದೆ. ಕೆ.ಜಿ ರೋಜ್ ಹೂ ಗೆ 40 ರೂಪಾಯಿ, ಸೇವಂತಿಗೆ 20 ರೂಪಾಯಿ, ಚೆಂಡೂ ಹೂ ಗೆ 10 ರೂ ಸೇರಿದಂತೆ ಬಹುತೇಕ ಎಲ್ಲಾ ಹೂಗಳ ಬೆಲೆ ಕುಸಿತವಾಗಿದ್ದು, ರೈತ ಕಣ್ಣೀರು ಹಾಕುತ್ತಿದ್ದಾನೆ.

ರಾಮನಗರ ಜಿಲ್ಲೆಯಲ್ಲಿ ನಿರಂತರ ಮಳೆಗೆ ನೆಲಕಚ್ಚಿದ ರಾಗಿಬೆಳೆ

ರಾಮನಗರ: ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ರಾಗಿ ಬೆಳೆಗಾರರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದ ರಾಗಿಬೆಳೆ ನೆಲಕಚ್ಚಿದ್ದು, ತೆನೆಯಲ್ಲಿ ಮೊಳಕೆ ಬರಲು ಆರಂಭಿಸಿದೆ. ಜಿಲ್ಲೆಯಲ್ಲಿ ‌ಸುಮಾರು 65 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆ ಬೆಳೆಯಲಾಗುತ್ತಿದೆ. ಇದರ ಜೊತೆ ಮಾವು, ರೇಷ್ಮೆ ಹೆಚ್ಚಾಗಿ ಬೆಳೆಯುತ್ತಾರೆ. ಇದೀಗ ನಿರಂತರ ಮಳೆಯಿಂದಾಗಿ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ. ಇದೇ ರೀತಿ ಮಳೆ ಮುಂದುವರೆದರೆ ರಾಗಿ ಬೆಳೆ ಸಂಪೂರ್ಣ ನಾಶವಾಗಲಿದೆ.

ಇದನ್ನೂ ಓದಿ:Karnataka Weather Updates: ಡಿಸೆಂಬರ್ 16ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ನೆರೆ ರಾಜ್ಯಗಳಲ್ಲಿ ಮ್ಯಾಂಡಾಸ್ ಅಬ್ಬರದಿಂದ ರಾಯಚೂರಿನ ರೈತರು ತತ್ತರ

ರಾಯಚೂರು: ಮ್ಯಾಂಡಾಸ್ ಹೊಡೆತಕ್ಕೆ ರಾಯಚೂರಿನ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲೇ ಅತೀ ಹೆಚ್ಚು ಭತ್ತ ಬೆಳೆಯುವ ರಾಯಚೂರು ಜಿಲ್ಲೆ, ಕಟಾವಿನ ಹಂತದಲ್ಲಿದ್ದ ಭತ್ತ ಹಾಗೂ ರಾಶಿ ಮಾಡಲಾಗಿರುವ ಭತ್ತದಿಂದ ನಷ್ಟವಾಗುವ ಆತಂಕದಲ್ಲಿದ್ದಾನೆ. ಅಪಾರ ಪ್ರಮಾಣದ ಬೆಳೆ ಕಟಾವು ಮಾಡಿದ್ದ ರೈತರಲ್ಲಿ ಸಂಕಷ್ಟ ಶುರುವಾಗಿದೆ. ಏಕಾಏಕಿ ಸುರಿದ ಮಳೆಗೆ ರೈತರು ಹೈರಾಣಾಗಿದ್ದಾರೆ. ಬೆಳೆ ಕಟಾವು ಮಾಡಿ ರಾಶಿ ಮಾಡಿದ್ದ ರೈತರು ನಿರಂತರ ಮಳೆಯಿಂದ ಹತ್ತಿ ಬಿಡಿಸಲಾಗುತ್ತಿಲ್ಲ.

ಮ್ಯಾಂಡಾಸ್ ಚಂಡಮಾರುತದ ಮಳೆಗೆ ಭತ್ತ, ಹತ್ತಿ ನಾಶವಾಗುವ ಲಕ್ಷಣ ಕಾಣುತ್ತಿದೆ. ರಾಶಿ ಮಾಡಲಾಗುತ್ತಿದ್ದ ಸ್ಥಳಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕಟಾವಿನ ಹಂತಕ್ಕೆ ಬಂದಿದ್ದ ಹತ್ತಿ ಬೆಳೆಗೂ ಹಾನಿಯಾಗಿದೆ. ಹೀಗೆ ಮಳೆ‌ ಮುಂದುವರೆದರೆ ಹತ್ತಿ, ಭತ್ತದ ಬೆಲೆ ನೆಲಕಚ್ಚುವ ಸಾಧ್ಯತೆಯಿದೆ. ಇರುವ ಭತ್ತ, ಹತ್ತಿ ರಕ್ಷಣೆಗೆ ಹರಸಾಹಸ ಪಡುತ್ತಿರುವ ರೈತರು. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:10 am, Mon, 12 December 22

Follow Us
Web contact
Web contact

TV9 Kannada

Read More
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ