ಕರ್ನಾಟಕ ಗೃಹ ಮಂಡಳಿಗಾಗಿ ಭೂ ಸ್ವಾಧೀನಕ್ಕೆ ಪ್ಲ್ಯಾನ್​: ಸರ್ಕಾರದ ನಡೆಗೆ ಸಿಡಿದೆದ್ದ ರೈತರು

ಬೆಂಗಳೂರು ಹೊರವಲಯದಲ್ಲಿ ರೈತರ ಸಾವಿರಾರು ಎಕರೆ ಭೂಮಿಯನ್ನ ಕರ್ನಾಟಕ ಗೃಹ ಮಂಡಳಿಗಾಗಿ ಸ್ವಾಧೀನಕ್ಕೆ ಪ್ಲ್ಯಾನ್​ ಮಾಡಿರೋ ರಾಜ್ಯ ಸರ್ಕಾರದ ವಿರುದ್ಧ 5 ಗ್ರಾಮಗಳ ರೈತರಿಂದ ಸಮಾವೇಶ ನಡೆದಿದೆ. ಪ್ರಾಣ ಬೇಕಾದ್ರೂ ಬಿಡ್ತೇವೆ ಭೂಮಿ ಬಿಡಲ್ಲ ಅಂತಾ ಅನ್ನದಾತರು ಎಚ್ಚರಿಕೆ ನೀಡಿದ್ದು, ಗೃಹ ಮಂಡಳಿ ನೀಡಿದ್ದ ನೋಟಿಸ್​ ಗಳನ್ನ ಬೆಂಕಿ ಹಚ್ಚಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಗೃಹ ಮಂಡಳಿಗಾಗಿ ಭೂ ಸ್ವಾಧೀನಕ್ಕೆ ಪ್ಲ್ಯಾನ್​: ಸರ್ಕಾರದ ನಡೆಗೆ ಸಿಡಿದೆದ್ದ ರೈತರು
ರೈತರ ಪ್ರತಿಭಟನೆ
Edited By:

Updated on: Oct 05, 2025 | 2:36 PM

ಬೆಂಗಳೂರು, ಅಕ್ಟೋಬರ್​ 05: ಕರ್ನಾಟಕ ಗೃಹ ಮಂಡಳಿಗಾಗಿ ಬೆಂಗಳೂರು ಹೊರವಲಯದಲ್ಲಿ ರೈತರ ಸಾವಿರಾರು ಎಕರೆ ಭೂಮಿ ಸ್ವಾಧೀನಕ್ಕೆ (Land acquisition) ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಒಟ್ಟು 2670 ಎಕರೆ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ನಿರ್ಧರಿಸಲಾಗಿದೆ.

ದೊಡ್ಡಹೆಜ್ಜಾಜಿ, ವೆಂಕಟೇಶಪುರ, ಕಾರೇಪುರ, ಕಸಾಘಟ್ಟ ಹಾಗೂ ಅಯ್ಯನಹಳ್ಳಿ ಗ್ರಾಮಗಳ 2760 ಎಕರೆ ಭೂಸ್ವಾಧೀನಕ್ಕೆ ತೀವ್ರ ವಿರೋಧ ಕೇಳಿಬಂದಿದ್ದು, ಕೃಷಿ ಭೂಮಿ ಸ್ವಾಧೀನ ಖಂಡಿಸಿ 5 ಗ್ರಾಮಗಳ ರೈತರಿಂದ ಸಮಾವೇಶ ನಡೆದಿದೆ. ಚಿಕ್ಕಬೆಳವಂಗಲದಿಂದ ದೊಡ್ಡಬೆಳವಂಗಲದವರೆಗೆ ಪಾದಯಾತ್ರೆ ನಡೆಸಿರುವ ರೈತರು, ಗೃಹ ಮಂಡಳಿ ನೀಡಿದ್ದ ನೋಟಿಸ್​ ಗಳನ್ನ ಬೆಂಕಿ ಹಚ್ಚಿ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಟೌನ್​ ಶಿಪ್​, ಕ್ವಿನ್ ಸಿಟಿ, ಕೆಐಎಡಿಬಿಗೆ ಭೂಮಿ ಸ್ವಾಧೀನ ಮಾಡಲಾಗಿದ್ದು, ರೈತರ 10 ಸಾವಿರ ಎಕರೆ ಕೃಷಿ ಭೂಮಿ ರಾಜ್ಯ ಸರ್ಕಾರದ ಪಾಲಾಗಿದೆ. ಈಗ ಸರ್ಕಾರ ಗೃಹ ಮಂಡಳಿಗೆ ಎಂದು ಮತ್ತೆ ಭೂಸ್ವಾಧೀನಕ್ಕೆ ಮುಂದಾಗಿದ್ದು, ಪ್ರಾಣ ಬೇಕಾದ್ರೂ ಬಿಡ್ತೇವೆ ಭೂಮಿ ಬಿಡಲ್ಲ ಅಂತಾ ಅನ್ನದಾತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್​ಶಿಪ್​: ಜೆಡಿಎಸ್ ಬೆಂಬಲ ಬೆನ್ನಲ್ಲೇ ರಾಜಕೀಯ ಸ್ವರೂಪ ಪಡೆದುಕೊಂಡ ರೈತರ ಹೋರಾಟ

ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆಗೂ ವಿರೋಧ

ರಾಜ್ಯ ಸರ್ಕಾರದ, ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವಾಕಾಂಕ್ಷಿ ಯೋಜನೆ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್​ ಗೂ ಪ್ರಾರಂಭದಲ್ಲೇ ವಿರೋಧ ವ್ಯಕ್ತವಾಗಿದೆ. ರಾಮನಗರ ‌ತಾಲೂಕಿನ ಬಿಡದಿ ಬಳಿ ಸುಮಾರು 9 ಸಾವಿರ ಎಕರೆ ಪ್ರದೇಶದಲ್ಲಿ 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಗೆ ಸರ್ಕಾರ ಸಜ್ಜಾಗಿದೆ. ಆದರೆ, ಈ ಯೋಜನೆಗೆ ಭೂಮಿ ನೀಡಲ್ಲ ಎಂದು ಬಿಡದಿ ಭಾಗದ ರೈತರು ಪಟ್ಟು ಹಿಡಿದಿದ್ದಾರೆ. ಯೋಜನೆಗಾಗಿ 7,000 ಎಕರೆಗೂ ಹೆಚ್ಚು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 2025 ರ ಮಾರ್ಚ್​ ನಲ್ಲಿ ಪ್ರಾಥಮಿಕ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿತ್ತು. ರಾಮನಗರ ಜಿಲ್ಲೆಯ ರಾಮನಗರ ಮತ್ತು ಹಾರೋಹಳ್ಳಿ ತಾಲ್ಲೂಕುಗಳ ಒಂಬತ್ತು ಹಳ್ಳಿಗಳಲ್ಲಿ 7,293.44 ಎಕರೆ ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿತ್ತು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:27 pm, Sun, 5 October 25

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us