AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಆರ್ಥಿಕ ಸ್ಥಿತಿ ಬುಡಮೇಲಾಗಿದೆ: ಬೆಂಗಳೂರು ರೈತ ಸಮಾವೇಶದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

ಸರ್ಕಾರ ಹಗಲು ದರೋಡೆ ನೀತಿ ರೂಪಿಸುತ್ತಿದೆ. ಈ ದೇಶದ ಎಲ್ಲಾ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಖಾಸಗಿ ಕಂಪನಿಗಳ ಕೈಗೆ ಹೋಗಬೇಕೆಂದು ಅವರ ಉದ್ದೇಶ. ಕೃಷಿಕರು ಹಳ್ಳಿಗಳಲ್ಲಿ ಉಳಿಯಲು ಸಾಧ್ಯವಾಗುತ್ತಿಲ್ಲ ಎಂದು ಸಮಾವೇಶದಲ್ಲಿ ರೈತ ಮುಖಂಡ ಕೋಡಿಹಳ್ಳಿ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರ ಆರ್ಥಿಕ ಸ್ಥಿತಿ ಬುಡಮೇಲಾಗಿದೆ: ಬೆಂಗಳೂರು ರೈತ ಸಮಾವೇಶದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ
ಕೋಡಿಹಳ್ಳಿ ಚಂದ್ರಶೇಖರ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 6:51 PM

Share

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ರಾಜಧಾನಿಯಲ್ಲೂ ಸಮಾವೇಶ ನಡೆಸಲಾಗಿದೆ. ಇಂದು (ಮಾರ್ಚ್ 22) ಫ್ರೀಡಂಪಾರ್ಕ್ ಬಳಿ ರೈತರು ಸಮಾವೇಶ ಸೇರಿದ್ದಾರೆ. ಈಗ ರೈತರ ಆರ್ಥಿಕ ನೀತಿ ಬುಡಮೇಲು ಆಗಿದೆ. ಮೊದಲು ಇಂಪಿರಿಯಲ್ ಬ್ಯಾಂಕ್ ಇತ್ತು, ಇದರಿಂದ ಕೃಷಿ ಉತ್ಪನ್ನಗಳ ಬೆಲೆ ಸಮಾನವಾಗಿತ್ತು. ಇವತ್ತು ಆರ್​ಬಿಐ ಬಂದು ಎಲ್ಲಾ ತಲೆಕೆಳಗಾಗಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಸರ್ಕಾರ ಹಗಲು ದರೋಡೆ ನೀತಿ ರೂಪಿಸುತ್ತಿದೆ. ಈ ದೇಶದ ಎಲ್ಲಾ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಖಾಸಗಿ ಕಂಪನಿಗಳ ಕೈಗೆ ಹೋಗಬೇಕೆಂದು ಅವರ ಉದ್ದೇಶ. ಕೃಷಿಕರು ಹಳ್ಳಿಗಳಲ್ಲಿ ಉಳಿಯಲು ಸಾಧ್ಯವಾಗುತ್ತಿಲ್ಲ ಎಂದು ಸಮಾವೇಶದಲ್ಲಿ ರೈತ ಮುಖಂಡ ಕೋಡಿಹಳ್ಳಿ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರಿಂದ ಮನವಿ ಸ್ವೀಕರಿಸಿದ ಸಚಿವ ಬಿ.ಸಿ.ಪಾಟೀಲ್ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂಪಾರ್ಕ್ ಪಕ್ಕದ ಕಾಳಿದಾಸ ರಸ್ತೆಯಲ್ಲಿ ಸಮಾವೇಶ ನಡೆಯಿತು. ಈ ವೇಳೆ, ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತ ಮುಖಂಡರಿಂದ ಮನವಿ ಸ್ವೀಕರಿಸಿದರು. ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಮನಕ್ಕೆ ತರುತ್ತೇನೆ. ಈಗಲೇ ವಿಧಾನಸೌಧಕ್ಕೆ ತೆರಳಿ ನಿಮ್ಮ ಮನವಿ ಸಲ್ಲಿಸುತ್ತೇನೆ. ನಿಮ್ಮ ಮನವಿಯ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಪಾಟೀಲ್ ಹೇಳಿದರು. ರೈತರ ಮನವಿ ಸ್ವೀಕರಿಸಿ ಅವರು ವೇದಿಕೆಯಿಂದ ತೆರಳಿದರು.

ರಾಜ್ಯ ರೈತ ನಾಯಕರು ಮತ್ತು ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಎಲ್ಲಾ ವಿಷಯಗಳನ್ನು ಹೇಳಿದ್ದಾರೆ. ಸಿಎಂ ಆದೇಶದಂತೆ ರೈತರಿಂದ ಮನವಿ ಪತ್ರ ಪಡೆದಿದ್ದೇನೆ. ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಮುಂದಿನ ಕ್ರಮ ಏನು ಅನ್ನೋದು ಮುಖ್ಯಮಂತ್ರಿಗಳ ವಿವೇಚನೆ ಬಿಟ್ಟಿದ್ದು ಎಂದು ರೈತರಿಂದ ಮನವಿ ಪತ್ರ ಪಡೆದ ಬಳಿಕ ಕೃಷಿ ಸಚಿವ ಬಿ.ಸಿ.ಪಾಟಿಲ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿವಿನ ವ್ಯಾಪಾರದ ವಿರುದ್ಧ ನಾವು ಹೋರಾಡುತ್ತಿದ್ದೇವೆ, ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ; ಕೇಂದ್ರದ ವಿರುದ್ಧ ರಾಕೇಶ್ ಟಿಕಾಯತ್, ಯುದ್ವೀರ್ ಸಿಂಗ್ ವಾಗ್ದಾಳಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್​ಗೆ ಸ್ವಾಗತ

Published On - 11:10 pm, Mon, 22 March 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?