Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಭೇಟಿಗೆ ವಿರೋಧ; ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಖಾಲಿ ಕುರ್ಚಿಗೆ ಚೀಟಿ ಅಂಟಿಸಿ ಪಂಥಾಹ್ವಾನ ಮಾಡಿದ್ದು, ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ಬಗ್ಗೆ ನಮಗೆ ತಿಳಿಸ ಬನ್ನಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧರಣಿನಿರತ ರೈತರು ಒತ್ತಾಯಿಸಿದ್ದಾರೆ.

ಅಮಿತ್ ಶಾ ಭೇಟಿಗೆ ವಿರೋಧ; ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
ಡಿಸಿ ಕಚೇರಿ ಎದುರು ರೈತರ ಪ್ರತಿಭಟನೆ
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 17, 2021 | 11:53 AM

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ವಿರೋಧಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲಾಗಿ ರೈತರು ಪ್ರತಿಭಟನೆ ನಡೆಸಿದ್ದು, ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ.

ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ರೈತ ಹೋರಾಟಗಾರರು ಆಗಮಿಸಿದ್ದು, ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಮೇಲೆ ಗಾಂಧೀಜಿ ಫೋಟೊ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಅರೆಬೆತ್ತಲಾಗಿ ಡಿಸಿ ಕಚೇರಿ ಎದುರು ಧರಣಿ ಕುಳಿತ ರೈತರು ರಸ್ತೆ ಮಧ್ಯದಲ್ಲಿಯೇ ಉಪಹಾರ ಸೇವಿಸಿದ್ದಾರೆ. ಖಾಲಿ ಕುರ್ಚಿಗೆ ಚೀಟಿ ಅಂಟಿಸಿ ಪಂಥಾಹ್ವಾನ ಮಾಡಿದ್ದು, ಕೇಂದ್ರ ಕೃಷಿ ತಿದ್ದಪಡಿ ಕಾಯ್ದೆ ಬಗ್ಗೆ ನಮಗೆ ತಿಳಿಸಿ ಬನ್ನಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾರಿಗೆ ಧರಣಿನಿರತ ರೈತರು ಒತ್ತಾಯಿಸಿದ್ದಾರೆ.

ರಸ್ತೆ ಮಧ್ಯೆ ಕುಳಿತು ಊಟ ಮಾಡುತ್ತಿರುವ ರೈತರು

ಗಾಂಧೀಜಿ ಫೋಟೊ ಮತ್ತು ಕುರ್ಚಿ ಇಟ್ಟು ಪ್ರತಿಭಟನೆ

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಪಂಜಾಬ್​ ರೈತರ Delhi Chaloಗೆ ರಾಜ್ಯದ ಅನ್ನದಾತರ ಬೆಂಬಲ