AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ಬೆಲೆ ಏರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ರೈತರ ಪ್ರತಿಭಟನೆ

ಹಾಲು ಉತ್ಪಾದಕರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಹೈನುಗಾರಿಕೆ ನಂಬಿಕೊಂಡ ರೈತರಿಗೆ ಕೂಡಲೇ ಸ್ಪಂದಿಸಬೇಕು. ಹಾಲು ಉತ್ಪಾದನೆಗೆ ಈಗಿರುವ ಬೆಲೆ ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಫ್ರೀಡಂ ಪಾರ್ಕ್​ನಲ್ಲಿ 11 ಗಂಟೆಗೆ ಹಸುಗಳನ್ನು ತಂದು ಸ್ಥಳದಲ್ಲೇ ಹಾಲು ಕರೆದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಹಾಲಿನ ಬೆಲೆ ಏರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ರೈತರ ಪ್ರತಿಭಟನೆ
ಹಾಲಿನ ದರ ಏರಿಸುವಂತೆ ರೈತರ ಒತ್ತಾಯ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 01, 2021 | 12:46 PM

Share

ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ 40 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಇಂದು ರೈತರು ಧರಣಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಶೇಕಡಾ 50ರಷ್ಟು ಜನರು ಹೈನೋದ್ಯಮ ನಂಬಿದ್ದಾರೆ. ಪೆಟ್ರೋಲ್, ಡೀಸೆಲ್ ಸೇರಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಫೀಡ್, ಬೂಸಾ, ಹಿಂಡಿ, ಚೆಕ್ಕೆ ಬೆಲೆಯೂ ಏರಿಕೆಯಾಗಿದೆ. ಆದರೆ ಕೆಎಂಎಫ್(ಹಾಲು ಉತ್ಪಾದಕರ ಸಂಘ) ಮಾತ್ರ ಒಂದು ಲೀಟರ್ ಹಾಲಿಗೆ 26 ರೂಪಾಯಿ ನೀಡುತ್ತಿದೆ. ಹೀಗಾಗಿ ಹಾಲಿನ ಬೆಲೆ ಹೆಚ್ಚು ಮಾಡಬೇಕು ಎಂದು ರೈತರಿಂದ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ.

ಬೇಸಿಗೆ ಆರಂಭ ಹಿನ್ನೆಲೆ ಹಸುಗಳಿಗೆ ಮೇವು ಸಿಗುವುದೂ ಕಷ್ಟವಾಗುತ್ತದೆ. ಹೀಗಾಗಿ ಹಸುಗಳಿಗೆ ಮೇವು ಖರೀದಿ ಮಾಡಬೇಕಾಗುತ್ತದೆ. ಕಡಿಮೆ ಹಾಲಿನ ಬೆಲೆಗೆ ಹೇಗೆ ಇವುಗಳನ್ನು ಸಂಭಾಳಿಸುವುದು ಎನ್ನುವುದು ಸದ್ಯ ರೈತರಲ್ಲಿ ಇರುವ ಗೊಂದಲವಾಗಿದೆ. ಇನ್ನೂ ಕೆಲವರಿಗೆ ಮಾತ್ರ 5 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ.ಇದರಿಂದ ಹೈನೋದ್ಯಮ ಸಂಕಷ್ಟಕ್ಕೆ ಸಿಲುಕುವಂತಾಗಿದ್ದು, ಶೀಘ್ರವೇ ಹಾಲಿನ ಬೆಲೆಯನ್ನು 40 ರೂಪಾಯಿಗೆ ನಿಗದಿ ಮಾಡಿ ಎಂದು ರೈತರು ಒತ್ತಾಯಿಸಿದ್ದಾರೆ.

ಹಾಲು ಉತ್ಪಾದಕರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಹೈನುಗಾರಿಕೆ ನಂಬಿಕೊಂಡ ರೈತರಿಗೆ ಕೂಡಲೇ ಸ್ಪಂದಿಸಬೇಕು. ಹಾಲು ಉತ್ಪಾದನೆಗೆ ಈಗಿರುವ ಬೆಲೆ ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಫ್ರೀಡಂ ಪಾರ್ಕ್​ನಲ್ಲಿ 11 ಗಂಟೆಗೆ ಹಸುಗಳನ್ನು ತಂದು ಸ್ಥಳದಲ್ಲೇ ಹಾಲು ಕರೆದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಒಟ್ಟಾರೆಯಾಗಿ ದಿನ ಬಳಕೆ ವಸ್ತುಗಳ ಮೇಲೆ ಮತ್ತು ಪೆಟ್ರೋಲ್ ಹಾಗೂ ಡಿಸೇಲ್​ಗಳ ಮೇಲಿನ ಬೆಲೆ ಏರಿಕೆಯ ಬೆನ್ನಲೆ ರೈತರು ಹಾಲಿನ ಬೆಲೆಯನ್ನೂ ಏರಿಕೆ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಈ ಪ್ರತಿಭಟನೆಗೆ ಯಾವ ರೀತಿ ಸ್ಪಂದಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಚಾಮರಾಜನಗರ ಹಾಲು ಒಕ್ಕೂಟದಲ್ಲಿ ಭ್ರಷ್ಟಾಚಾರ ಆರೋಪ: ಎಚ್ಚೆತ್ತುಕೊಂಡ ಸರ್ಕಾರ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?