AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

ಟೊಮ್ಯಾಟೋ ದರ ಕುಸಿತ ಕಂಡಿರುವುದರಿಂದ ಬಾಗಲಕೋಟೆ ಹುನಗುಂದ ಪಟ್ಟಣದ ರೈತರು ಆಕ್ರೋಶ ಹೊರಹಾಕಿದ್ದಾರೆ.

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ
ದರ ಕುಸಿತ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಟೊಮ್ಯಾಟೋ ಚೆಲ್ಲಿ ಆಕ್ರೋಶ ಹೊರಹಾಕಿದ ರೈತರು
shruti hegde
|

Updated on: Apr 06, 2021 | 1:32 PM

Share

ಬಾಗಲಕೋಟೆ: ಕಷ್ಟಪಟ್ಟು ದುಡಿದು ಗಿಡಗಳಿಗೆ ಆರೈಕೆ ಮಾಡಿ, ಉತ್ತಮ ಬೆಳೆಗೆ ಕಾಯುವ ರೈತರಿಗೆ ಬಹುತೇಕ ಸಂದರ್ಭದಲ್ಲಿ ನಿರಾಶೆಯೇ ಎದುರಾಗುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಇತ್ತ ಬೆಳೆ ಕೈಗೆ ಬರುವಾಗ ಅತ್ತ ಮಾರುಕಟ್ಟೆಯಲ್ಲಿ ಒಂದೇ ಸಮನೆ ಬೆಲೆ ಕುಸಿದರೆ ರೈತರ ಕಷ್ಟ ಕೇಳುವವರು ಯಾರು? ಎಂಬಂತಾಗಿದೆ ಪರಿಸ್ಥಿತಿ. ಇದೀಗ ಏಕಾಏಕಿ ಟೊಮ್ಯಾಟೋ ದರ ಕುಸಿತ ಕಂಡಿರುವುದರಿಂದ ಮಾರುಕಟ್ಟೆಯಲ್ಲಿ ಯಾರೂ ಟೊಮ್ಯಾಟೋ ಕೊಳ್ಳಲು ಮುಂದಾಗುತ್ತಿಲ್ಲ ಎಂದು ಜಿಲ್ಲೆಯ ಹುನಗುಂದ ಪಟ್ಟಣದ ರೈತರು ಆಕ್ರೋಶ ಹೊರಹಾಕಿದ್ದಾರೆ.

ಬೆಳಗಲ್ ಗ್ರಾಮದ ಪರಶುರಾಮ ರತ್ನಾಕರ್ ರಸ್ತೆಗೆ ಟೊಮ್ಯಾಟೋ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಗಾಲಾದ ರೈತರು ಆರೈಕೆ ಮಾಡಿ ಬೆಳೆದ ಎಲ್ಲಾ ಟೊಮ್ಯಾಟೋಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೊಮ್ಯಾಟೋ ದರ ಕುಸಿದಿದೆ, ಇದರಿಂದ ನಾನು ಬೆಳೆದ ಟ್ಯೊಮಾಟೋವನ್ನು ಮಾರುಕಟ್ಟೆಯಲ್ಲಿ ಯಾರೂ ಕೊಳ್ಳುತ್ತಿಲ್ಲ ಎಂದು ರೈತ ಬೇಸರ ವ್ಯಕ್ತಪಡಿಸಿದ್ದಾರೆ.

ಮನೆಯಿಂದ ಪ್ರಯಾಣ ಬೆಳೆಸಿ ಮಾರುಕಟ್ಟೆಗೆ ತಂದ ಟೊಮ್ಯಾಟೊವನ್ನು ಹಿಂದಿರುಗಿ ತೆಗೆದುಕೊಂಡು ಹೋಗಲು ಮನಸ್ಸು ಒಪ್ಪಲಿಲ್ಲ. ಆದ್ದರಿಂದ ರಸ್ತೆಯಲ್ಲಿ ಇಟ್ಟಿದ್ದೇನೆ. ಬಡವರೆಲ್ಲ ಟೊಮ್ಯಾಟೋವನ್ನು ಆಯ್ದು ಕೊಂಡೊಯ್ಯುತ್ತಿದ್ದಾರೆ. ನಾನು ಅವರಲ್ಲಿ ಒಂದು ರೂಪಾಯಿಯನ್ನೂ ನಿರೀಕ್ಷಿಸುವುದಿಲ್ಲ. ದರ ಕುಸಿತ ಕಂಡಿರುವುದರಿಂದ ರೈತರಿಗೆ ಜೀವನ ನಡೆಸಲು ಭೀಕರ ಪರಿಸ್ಥಿತಿ ಎದುರಾಗಿದೆ. ಬೆಳೆದ ಬೆಲೆಗೆ ಉತ್ತಮ ಮಾರುಕಟ್ಟೆ ಬೇಕು. ಸರ್ಕಾರ ಈ ಕುರಿತು ಗಮನ ಹರಿಸಬೇಕು ಎಂದು ರೈತರು ತಮ್ಮ ಅಳಲನ್ನು ಹೊರಹಾಕಿದ್ದಾರೆ.

ಇದನ್ನೂ ಒದಿ: Health Tips: ನೀವು ಟೊಮ್ಯಾಟೊ ಪ್ರಿಯರಾ?- ಮಿತಿಮೀರಿ ತಿನ್ನುತ್ತಿದ್ದರೆ ಎಚ್ಚರ.. ನಿಮ್ಮ ಆರೋಗ್ಯವನ್ನೇ ಹಾಳುಗೆಡವಬಹುದು ಈ ಕೆಂಪುಹಣ್ಣು

ನಿಮ್ಮ ಸಮೃದ್ಧ ಸೌಂದರ್ಯದ ಆರೈಕೆಗೆ ಇಲ್ಲಿದೆ ಮನೆಮದ್ದು

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್