Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

ಟೊಮ್ಯಾಟೋ ದರ ಕುಸಿತ ಕಂಡಿರುವುದರಿಂದ ಬಾಗಲಕೋಟೆ ಹುನಗುಂದ ಪಟ್ಟಣದ ರೈತರು ಆಕ್ರೋಶ ಹೊರಹಾಕಿದ್ದಾರೆ.

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ
ದರ ಕುಸಿತ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಟೊಮ್ಯಾಟೋ ಚೆಲ್ಲಿ ಆಕ್ರೋಶ ಹೊರಹಾಕಿದ ರೈತರು
Follow us
shruti hegde
|

Updated on: Apr 06, 2021 | 1:32 PM

ಬಾಗಲಕೋಟೆ: ಕಷ್ಟಪಟ್ಟು ದುಡಿದು ಗಿಡಗಳಿಗೆ ಆರೈಕೆ ಮಾಡಿ, ಉತ್ತಮ ಬೆಳೆಗೆ ಕಾಯುವ ರೈತರಿಗೆ ಬಹುತೇಕ ಸಂದರ್ಭದಲ್ಲಿ ನಿರಾಶೆಯೇ ಎದುರಾಗುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಇತ್ತ ಬೆಳೆ ಕೈಗೆ ಬರುವಾಗ ಅತ್ತ ಮಾರುಕಟ್ಟೆಯಲ್ಲಿ ಒಂದೇ ಸಮನೆ ಬೆಲೆ ಕುಸಿದರೆ ರೈತರ ಕಷ್ಟ ಕೇಳುವವರು ಯಾರು? ಎಂಬಂತಾಗಿದೆ ಪರಿಸ್ಥಿತಿ. ಇದೀಗ ಏಕಾಏಕಿ ಟೊಮ್ಯಾಟೋ ದರ ಕುಸಿತ ಕಂಡಿರುವುದರಿಂದ ಮಾರುಕಟ್ಟೆಯಲ್ಲಿ ಯಾರೂ ಟೊಮ್ಯಾಟೋ ಕೊಳ್ಳಲು ಮುಂದಾಗುತ್ತಿಲ್ಲ ಎಂದು ಜಿಲ್ಲೆಯ ಹುನಗುಂದ ಪಟ್ಟಣದ ರೈತರು ಆಕ್ರೋಶ ಹೊರಹಾಕಿದ್ದಾರೆ.

ಬೆಳಗಲ್ ಗ್ರಾಮದ ಪರಶುರಾಮ ರತ್ನಾಕರ್ ರಸ್ತೆಗೆ ಟೊಮ್ಯಾಟೋ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಗಾಲಾದ ರೈತರು ಆರೈಕೆ ಮಾಡಿ ಬೆಳೆದ ಎಲ್ಲಾ ಟೊಮ್ಯಾಟೋಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೊಮ್ಯಾಟೋ ದರ ಕುಸಿದಿದೆ, ಇದರಿಂದ ನಾನು ಬೆಳೆದ ಟ್ಯೊಮಾಟೋವನ್ನು ಮಾರುಕಟ್ಟೆಯಲ್ಲಿ ಯಾರೂ ಕೊಳ್ಳುತ್ತಿಲ್ಲ ಎಂದು ರೈತ ಬೇಸರ ವ್ಯಕ್ತಪಡಿಸಿದ್ದಾರೆ.

ಮನೆಯಿಂದ ಪ್ರಯಾಣ ಬೆಳೆಸಿ ಮಾರುಕಟ್ಟೆಗೆ ತಂದ ಟೊಮ್ಯಾಟೊವನ್ನು ಹಿಂದಿರುಗಿ ತೆಗೆದುಕೊಂಡು ಹೋಗಲು ಮನಸ್ಸು ಒಪ್ಪಲಿಲ್ಲ. ಆದ್ದರಿಂದ ರಸ್ತೆಯಲ್ಲಿ ಇಟ್ಟಿದ್ದೇನೆ. ಬಡವರೆಲ್ಲ ಟೊಮ್ಯಾಟೋವನ್ನು ಆಯ್ದು ಕೊಂಡೊಯ್ಯುತ್ತಿದ್ದಾರೆ. ನಾನು ಅವರಲ್ಲಿ ಒಂದು ರೂಪಾಯಿಯನ್ನೂ ನಿರೀಕ್ಷಿಸುವುದಿಲ್ಲ. ದರ ಕುಸಿತ ಕಂಡಿರುವುದರಿಂದ ರೈತರಿಗೆ ಜೀವನ ನಡೆಸಲು ಭೀಕರ ಪರಿಸ್ಥಿತಿ ಎದುರಾಗಿದೆ. ಬೆಳೆದ ಬೆಲೆಗೆ ಉತ್ತಮ ಮಾರುಕಟ್ಟೆ ಬೇಕು. ಸರ್ಕಾರ ಈ ಕುರಿತು ಗಮನ ಹರಿಸಬೇಕು ಎಂದು ರೈತರು ತಮ್ಮ ಅಳಲನ್ನು ಹೊರಹಾಕಿದ್ದಾರೆ.

ಇದನ್ನೂ ಒದಿ: Health Tips: ನೀವು ಟೊಮ್ಯಾಟೊ ಪ್ರಿಯರಾ?- ಮಿತಿಮೀರಿ ತಿನ್ನುತ್ತಿದ್ದರೆ ಎಚ್ಚರ.. ನಿಮ್ಮ ಆರೋಗ್ಯವನ್ನೇ ಹಾಳುಗೆಡವಬಹುದು ಈ ಕೆಂಪುಹಣ್ಣು

ನಿಮ್ಮ ಸಮೃದ್ಧ ಸೌಂದರ್ಯದ ಆರೈಕೆಗೆ ಇಲ್ಲಿದೆ ಮನೆಮದ್ದು

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ