ಟ್ರ್ಯಾಕ್ಟರ್ ಮೆರವಣಿಗೆಗೆ ಬೆಂಬಲ ಸೂಚಿಸಿ ಚಾಮರಾಜನಗರದಿಂದ ದೆಹಲಿಗೆ ರೈತರ ರಥಯಾತ್ರೆ

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಮಂಜೇಗೌಡ ಅವರು ಹೊಂಡರಬಾಳು ಬಳಿಯ ಅಮೃತಭೂಮಿಯಲ್ಲಿ ರಥಯಾತ್ರೆಗೆ ಚಾಲನೆ ನೀಡಿದ್ದಾರೆ.

ಟ್ರ್ಯಾಕ್ಟರ್ ಮೆರವಣಿಗೆಗೆ ಬೆಂಬಲ ಸೂಚಿಸಿ ಚಾಮರಾಜನಗರದಿಂದ ದೆಹಲಿಗೆ ರೈತರ ರಥಯಾತ್ರೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ

Updated on: Jan 20, 2021 | 2:43 PM

ಚಾಮರಾಜನಗರ: ಜ.26ರಂದು ದೆಹಲಿಯಲ್ಲಿ ನಡೆಯಲಿರುವ ರೈತರ ಟ್ರ್ಯಾಕ್ಟರ್ ಮೆರವಣಿಗೆಗೆ ಬೆಂಬಲ ಸೂಚಿಸಿ ಅಮೃತಭೂಮಿಯಿಂದ ದೆಹಲಿಗೆ ರಥಯಾತ್ರೆ ತೆರಳಿದೆ. ರೈತ ಚೇತನ ಪ್ರೊಫೆಸರ್ ನಂಜುಂಡಸ್ವಾಮಿ ಸಮಾಧಿಯಿಂದ ಬೆಳಗ್ಗೆ 10 ಗಂಟೆಗೆ ರಥಯಾತ್ರೆ ಆರಂಭವಾಗಿದೆ.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಮಂಜೇಗೌಡ ಅವರು ಹೊಂಡರಬಾಳು ಬಳಿಯ ಅಮೃತಭೂಮಿಯಲ್ಲಿ ರಥಯಾತ್ರೆಗೆ ಚಾಲನೆ ನೀಡಿದ್ದಾರೆ.

ಹಾಸನ, ಮೈಸೂರು ಸೇರಿದಂತೆ ಚಾಮರಾಜನಗರ ಜಿಲ್ಲೆಯ ರೈತರು ಕೂಡ ರಥಯಾತ್ರೆಗೆ ಸಾಥ್ ನೀಡಿದ್ದು ಈ ರಥಯಾತ್ರೆ ಜ.25ರಂದು ದೆಹಲಿ ತಲುಪಲಿದೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

Published On - 2:35 pm, Wed, 20 January 21

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us