AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಂಠಿ ಧಾರಣೆ ಕುಸಿತ.. ಬೆಳೆಗಾರರು ಕಂಗಾಲು; ವಾಣಿಜ್ಯ ಬೆಳೆಯ ಹಿಂದೆ ಬಿದ್ದು ಕೈ ಸುಟ್ಟುಕೊಂಡ ಚಿಕ್ಕಬಳ್ಳಾಪುರ ರೈತರು

ಅಗಲಗುರ್ಕಿ ಗ್ರಾಮದ ಪ್ರಗತಿಪರ ರೈತ ರಾಮಾಂಜಿ ಎಂಬುವವರು ಇದೆ ಪ್ರಥಮ ಬಾರಿಗೆ ಒಂದಲ್ಲ ಎರಡಲ್ಲ ಬರೋಬ್ಬರಿ 6 ಎಕರೆ ಜಮೀನಿನಲ್ಲಿ 30 ಲಕ್ಷ ರೂಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿದ್ದಾರೆ. ಶುಂಠಿ ಸಹ ಫಲವತ್ತಾಗಿ ಬಂದಿದೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿದಿರುವ ಕಾರಣ ರಾಮಾಂಜಿಯ ಕನಸು ನುಚ್ಚು ನೂರಾಗಿದೆ.

ಶುಂಠಿ ಧಾರಣೆ ಕುಸಿತ.. ಬೆಳೆಗಾರರು ಕಂಗಾಲು;  ವಾಣಿಜ್ಯ ಬೆಳೆಯ ಹಿಂದೆ ಬಿದ್ದು ಕೈ ಸುಟ್ಟುಕೊಂಡ ಚಿಕ್ಕಬಳ್ಳಾಪುರ ರೈತರು
ಶುಂಠಿಯನ್ನು ಕೀಳುತ್ತಿರುವ ರೈತರು
sandhya thejappa
|

Updated on:Mar 08, 2021 | 6:34 PM

Share

ಚಿಕ್ಕಬಳ್ಳಾಪುರ: ವಿಭಿನ್ನ ಪ್ರಯತ್ನ ಮಾಡುವುದರಲ್ಲಿ ಬಯಲು ಸೀಮೆಯ ರೈತರು ಎತ್ತಿದ ಕೈ. ಮತ್ತೆ ಮತ್ತೆ  ತರಕಾರಿ, ಹಣ್ಣು ಹಂಪಲು, ಹೂ ಬೆಳೆಯುತ್ತಿದ್ದರೆ ನಿರೀಕ್ಷೆಯಷ್ಟು ಲಾಭ ಬರಲ್ಲ ಅಂತ ಈ ಬಾರಿ ವಾಣಿಜ್ಯ ಬೆಳೆ ಶುಂಠಿಯ ಮೊರೆ ಹೋಗಿದ್ದರು. ಪಾತಾಳದಿಂದ ಹನಿ ಹನಿ ನೀರು ಬಸಿದು ಶುಂಠಿ ಬೆಳೆದಿದ್ದರು. ಶುಂಠಿ ಸಹ ಫಲವತ್ತಾಗಿ ಬಂದಿತ್ತು. ಆದರೆ ಮಾರುಕಟ್ಟೆಯಲ್ಲಿ ಶುಂಠಿಯ ಬೆಲೆ ತೀವ್ರವಾಗಿ ಕುಸಿದ ಕಾರಣ ರೈತರು ಈಗ ಯಾಕಾದರೂ ಶುಂಠಿಯ ಸಹವಾಸ ಮಾಡಿದೆವೋ ಅಂತ ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ.

ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಶುಂಠಿಯನ್ನು ಎಲ್ಲಿ ಬೇಕಾದರೂ ಬೆಳೆಯಬಹುದು. ಆದರೆ ಶುಂಠಿಯ ಸಹವಾಸ ಮಾಡಿದರೆ ಅದನ್ನು ಬರೋಬ್ಬರಿ ಒಂದು ವರ್ಷ ಮಕ್ಕಳ ಹಾಗೆ ನೋಡಿಕೊಳ್ಳಬೇಕು. ಅದೃಷ್ಟ ಖುಲಾಯಿಸಿದರೆ ಕೈ ತುಂಬಾ ಜಣ ಜಣ ಕಾಂಚಣ ಎಣಿಸಬಹುದು. ಇದೆ ಆಸೆಗಣ್ಣಿನಿಂದ ಚಿಕ್ಕಬಳ್ಳಾಪುರದ ಪ್ರಗತಿಪರ ರೈತರು ಪ್ರಥಮ ಬಾರಿಗೆ ಜಿಲ್ಲೆಯಾದ್ಯಂತ ನೂರಾರು ಹೆಕ್ಟರ್​ಗಳಲ್ಲಿ ವಿಭಿನ್ನವಾಗಿ ಶುಂಠಿ ಬೆಳೆದಿದ್ದರು.

ಶುಂಠಿ ಸಹ ತುಂಬಾ ಫಲವತ್ತಾಗಿ ಬಂದಿತ್ತು. ಆದರೆ ಮಾರುಕಟ್ಟೆಯಲ್ಲಿ ಶುಂಠಿಯನ್ನು ಕೇಳುವವರೆ ಇಲ್ಲದಂತಾಗಿದೆ. 60 ಕೆಜಿಯ ಒಂದು ಮೂಟೆಯ ಶುಂಠಿಗೆ ಕೇವಲ 900 ರೂಪಾಯಿ ಸಿಗುತ್ತಿದೆ. ಇದರಿಂದ ರೈತರಿಗೆ ಕೂಲಿ ಹಣ ಸಹ ಬರುತ್ತಿಲ್ಲ. ಬೆಳೆದ ಶುಂಠಿ ಜಮೀನಿನಲ್ಲೆ ಗೊಬ್ಬರವಾಗುವುದನ್ನು ಕಂಡ ರೈತರು ಬಂದಷ್ಟಾದರೂ ಬರಲಿ ಅಂತ ಅತ್ಯಂತ ಕಡಿಮೆ ಬೆಲೆಗೆ ವರ್ತಕರಿಗೆ ಮಾರಾಟ ಮಾಡುತ್ತಿದ್ದಾರೆ.

ಫಲವತ್ತಾಗಿ ಬಂದ ಶುಂಠಿ

ಶುಂಠಿಯನ್ನು ಕೀಳುತ್ತಿರುವ ರೈತರು

ವಾಣಿಜ್ಯ ಬೆಳೆಯ ಹಿಂದೆ ಬಿದ್ದು ಕೈ ಸುಟ್ಟುಕೊಂಡ ರೈತ ತಾಲೂಕಿನ ಅಗಲಗುರ್ಕಿ ಗ್ರಾಮದ ಪ್ರಗತಿಪರ ರೈತ ರಾಮಾಂಜಿ ಎಂಬುವವರು ಇದೆ ಪ್ರಥಮ ಬಾರಿಗೆ ಒಂದಲ್ಲ ಎರಡಲ್ಲ ಬರೋಬ್ಬರಿ 6 ಎಕರೆ ಜಮೀನಿನಲ್ಲಿ 30 ಲಕ್ಷ ರೂಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿದ್ದಾರೆ. ಶುಂಠಿ ಸಹ ಫಲವತ್ತಾಗಿ ಬಂದಿದೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿದಿರುವ ಕಾರಣ ರಾಮಾಂಜಿಯ ಕನಸು ನುಚ್ಚು ನೂರಾಗಿದೆ.

ಶುಂಠಿ ಬೆಳೆದು 60 ಕೆ ಜಿ ಮೂಟೆಗೆ ನಾಲ್ಕು ಸಾವಿರ ರೂಪಾಯಿ ಹಣ ಕೊಟ್ಟು ಖರೀದಿ ಮಾಡುತ್ತೀವಿ ಅಂತ ಶುಂಠಿ ನಾಟಿ ಮಾಡಲು ಪ್ರೋತ್ಸಾಹ ನೀಡಿದ್ದ ವರ್ತಕರು ಈಗ ನಾಪತ್ತೆಯಾಗಿದ್ದಾರೆ. ಇದರಿಂದ ನೊಂದ ರಾಮಾಂಜಿ ಕಳೆದ ಎರಡು ತಿಂಗಳಿಂದ ಶುಂಠಿಯನ್ನು ಭೂಮಿಯಲ್ಲೆ ಬಿಟ್ಟಿದ್ದರು. ಕೊನೆಗೆ ಶುಂಠಿ ಕೊಳೆಯುತ್ತಿರುವ ಕಾರಣ ಬಂದಷ್ಟಾದರು ಬರಲಿ ಅಂತ ಸ್ಥಳಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಶುಂಠಿಯನ್ನು ಕೇಳಿದಷ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಬೆಳೆಯುತ್ತಿದ್ದ ಶುಂಠಿಗೆ ಭಾರಿ ಬೇಡಿಕೆಯಿತ್ತು. ಈಗ ರೈತರು ಎಲ್ಲೆಡೆ ಶುಂಠಿ ಬೆಳೆಯುತ್ತಿದ್ದಾರೆ. ಇದರಿಂದ ಅಗತ್ಯಕ್ಕಿಂತ ಹೆಚ್ಚಿಗೆ ಶುಂಠಿ ಮಾರುಕಟ್ಟೆಗೆ ಆಗಮಿಸುತ್ತಿರುವ ಕಾರಣ ಸ್ವತಃ ಶುಂಠಿ ವರ್ತಕರು ರೈತರು ಬೆಳೆದ ಶುಂಠಿ ಖರೀದಿ ಮಾಡುತ್ತಿಲ್ಲ. ಮತ್ತೊಂದೆಡೆ ಕೆಲವು ದೇಶಗಳಿಗೆ ರಫ್ತು ಆಗುತ್ತಿದ್ದ ಶುಂಠಿಯನ್ನು ಈಗ ರಫ್ತುದಾರರು ಮುಂದೆ ಬರುತ್ತಿಲ್ಲ. ಇದೆಲ್ಲದರ ಪರಿಣಾಮ ರೈತರ ಸಂಕಷ್ಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ

ರದ್ದಿ ಪೇಪರ್ ಮಾರಿ.. ಬಸ್ ನಿಲ್ದಾಣ ನಿರ್ಮಿಸಿದ ಧಾರವಾಡದ ವೀರ ಸಾವರಕರ ಗೆಳೆಯರ ಬಳಗ

ದೇವನಹಳ್ಳಿ: ಜಮೀನು ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ.. ರೈತ ಮಹಿಳೆ ಗಂಭೀರ

Published On - 6:33 pm, Mon, 8 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್