AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ
ಜಯಮ್ಮ, ಕೆಂಪಚಾರಿ ದಂಪತಿ
Follow us
ಆಯೇಷಾ ಬಾನು
|

Updated on:May 04, 2021 | 10:02 AM

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಕೊವಿಡ್ ಸೋಂಕಿಗೆ 54 ವರ್ಷದ ತಮ್ಮಯ್ಯಚಾರಿ ಬಲಿಯಾಗಿದ್ದು ಮಗನ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಆಘಾತ ತಡೆಯಲಾಗದೇ ಹೆತ್ತವರೂ ಮೃತಪಟ್ಟಿದ್ದಾರೆ.

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ತಮ್ಮಯ್ಯಚಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೂರು ದಿನಗಳ ಹಿಂದೆಯೇ ತಮ್ಮಯ್ಯಚಾರಿ ಮೃತಪಟ್ಟಿದ್ದರು. ಈ ವಿಷಯವನ್ನು ಹೆತ್ತವರಿಂದ ಕುಟುಂಬಸ್ಥರು ಬಚ್ಚಿಟ್ಟಿದ್ದರು. ಇನ್ನು ಕೆಮ್ಮು ಜ್ವರದಿಂದ ಬಳಲುತ್ತಿದ್ದ ಕೆಂಪಚಾರಿಯನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಗ ಸತ್ತು ಮೂರು ದಿನದ ಬಳಿಕ ಅಂದ್ರೆ ನಿನ್ನೆ ಮಗನ ಸಾವಿನ ವಿಚಾರ ಆತನ ತಂದೆ ತಾಯಿಗೆ ಸಂಬಂಧಿಕರು ತಿಳಿಸಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತದಿಂದ ತಾಯಿ ಜಯಮ್ಮ ಬಳಿಕ ತಂದೆ ಕೆಂಪಚಾರಿ ಮೃತಪಟ್ಟಿದ್ದಾರೆ. ಮಹಾಮಾರಿ ಕೊರೊನಾ ತನ್ನ ಪ್ರಭಾವದಿಂದ ಮೂವರನ್ನು ಬಲಿ ಪಡೆದಿದೆ.

ಇದನ್ನೂ ಓದಿ: ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಂಟುಂಬಸ್ಥರಿಗೆ ಹಸ್ತಾಂತರ

Published On - 9:59 am, Tue, 4 May 21

ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು