AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ
ಜಯಮ್ಮ, ಕೆಂಪಚಾರಿ ದಂಪತಿ
ಆಯೇಷಾ ಬಾನು
|

Updated on:May 04, 2021 | 10:02 AM

Share

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಕೊವಿಡ್ ಸೋಂಕಿಗೆ 54 ವರ್ಷದ ತಮ್ಮಯ್ಯಚಾರಿ ಬಲಿಯಾಗಿದ್ದು ಮಗನ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಆಘಾತ ತಡೆಯಲಾಗದೇ ಹೆತ್ತವರೂ ಮೃತಪಟ್ಟಿದ್ದಾರೆ.

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ತಮ್ಮಯ್ಯಚಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೂರು ದಿನಗಳ ಹಿಂದೆಯೇ ತಮ್ಮಯ್ಯಚಾರಿ ಮೃತಪಟ್ಟಿದ್ದರು. ಈ ವಿಷಯವನ್ನು ಹೆತ್ತವರಿಂದ ಕುಟುಂಬಸ್ಥರು ಬಚ್ಚಿಟ್ಟಿದ್ದರು. ಇನ್ನು ಕೆಮ್ಮು ಜ್ವರದಿಂದ ಬಳಲುತ್ತಿದ್ದ ಕೆಂಪಚಾರಿಯನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಗ ಸತ್ತು ಮೂರು ದಿನದ ಬಳಿಕ ಅಂದ್ರೆ ನಿನ್ನೆ ಮಗನ ಸಾವಿನ ವಿಚಾರ ಆತನ ತಂದೆ ತಾಯಿಗೆ ಸಂಬಂಧಿಕರು ತಿಳಿಸಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತದಿಂದ ತಾಯಿ ಜಯಮ್ಮ ಬಳಿಕ ತಂದೆ ಕೆಂಪಚಾರಿ ಮೃತಪಟ್ಟಿದ್ದಾರೆ. ಮಹಾಮಾರಿ ಕೊರೊನಾ ತನ್ನ ಪ್ರಭಾವದಿಂದ ಮೂವರನ್ನು ಬಲಿ ಪಡೆದಿದೆ.

ಇದನ್ನೂ ಓದಿ: ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಂಟುಂಬಸ್ಥರಿಗೆ ಹಸ್ತಾಂತರ

Published On - 9:59 am, Tue, 4 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?