AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ
ಜಯಮ್ಮ, ಕೆಂಪಚಾರಿ ದಂಪತಿ
ಆಯೇಷಾ ಬಾನು
ಆಯೇಷಾ ಬಾನು|

Updated on:May 04, 2021 | 10:02 AM

Share

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಕೊವಿಡ್ ಸೋಂಕಿಗೆ 54 ವರ್ಷದ ತಮ್ಮಯ್ಯಚಾರಿ ಬಲಿಯಾಗಿದ್ದು ಮಗನ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಆಘಾತ ತಡೆಯಲಾಗದೇ ಹೆತ್ತವರೂ ಮೃತಪಟ್ಟಿದ್ದಾರೆ.

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ತಮ್ಮಯ್ಯಚಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೂರು ದಿನಗಳ ಹಿಂದೆಯೇ ತಮ್ಮಯ್ಯಚಾರಿ ಮೃತಪಟ್ಟಿದ್ದರು. ಈ ವಿಷಯವನ್ನು ಹೆತ್ತವರಿಂದ ಕುಟುಂಬಸ್ಥರು ಬಚ್ಚಿಟ್ಟಿದ್ದರು. ಇನ್ನು ಕೆಮ್ಮು ಜ್ವರದಿಂದ ಬಳಲುತ್ತಿದ್ದ ಕೆಂಪಚಾರಿಯನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಗ ಸತ್ತು ಮೂರು ದಿನದ ಬಳಿಕ ಅಂದ್ರೆ ನಿನ್ನೆ ಮಗನ ಸಾವಿನ ವಿಚಾರ ಆತನ ತಂದೆ ತಾಯಿಗೆ ಸಂಬಂಧಿಕರು ತಿಳಿಸಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತದಿಂದ ತಾಯಿ ಜಯಮ್ಮ ಬಳಿಕ ತಂದೆ ಕೆಂಪಚಾರಿ ಮೃತಪಟ್ಟಿದ್ದಾರೆ. ಮಹಾಮಾರಿ ಕೊರೊನಾ ತನ್ನ ಪ್ರಭಾವದಿಂದ ಮೂವರನ್ನು ಬಲಿ ಪಡೆದಿದೆ.

ಇದನ್ನೂ ಓದಿ: ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಂಟುಂಬಸ್ಥರಿಗೆ ಹಸ್ತಾಂತರ

Published On - 9:59 am, Tue, 4 May 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ