AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೆತ್ತವರ ಸಾವು.. ಮಂಡ್ಯದಲ್ಲಿ ಮನಕಲಕುವ ಘಟನೆ
ಜಯಮ್ಮ, ಕೆಂಪಚಾರಿ ದಂಪತಿ
ಆಯೇಷಾ ಬಾನು
|

Updated on:May 04, 2021 | 10:02 AM

Share

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಕೊವಿಡ್ ಸೋಂಕಿಗೆ 54 ವರ್ಷದ ತಮ್ಮಯ್ಯಚಾರಿ ಬಲಿಯಾಗಿದ್ದು ಮಗನ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಆಘಾತ ತಡೆಯಲಾಗದೇ ಹೆತ್ತವರೂ ಮೃತಪಟ್ಟಿದ್ದಾರೆ.

3 ದಿನ ಹಿಂದೆ ಕೊವಿಡ್‌ಗೆ ತಮ್ಮಯ್ಯಚಾರಿ ಬಲಿಯಾಗಿದ್ದರು. ಈ ಸುದ್ದಿ ಕೇಳಿ ಆಘಾತದಿಂದ ತಾಯಿ ಜಯಮ್ಮ(74) ಮೃತಪಟ್ಟಿದ್ದಾರೆ. ಪತ್ನಿ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಪತಿ ಕೆಂಪಚಾರಿ (84) ಕೂಡ ಸಾವನ್ನಪ್ಪಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ತಮ್ಮಯ್ಯಚಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೂರು ದಿನಗಳ ಹಿಂದೆಯೇ ತಮ್ಮಯ್ಯಚಾರಿ ಮೃತಪಟ್ಟಿದ್ದರು. ಈ ವಿಷಯವನ್ನು ಹೆತ್ತವರಿಂದ ಕುಟುಂಬಸ್ಥರು ಬಚ್ಚಿಟ್ಟಿದ್ದರು. ಇನ್ನು ಕೆಮ್ಮು ಜ್ವರದಿಂದ ಬಳಲುತ್ತಿದ್ದ ಕೆಂಪಚಾರಿಯನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಗ ಸತ್ತು ಮೂರು ದಿನದ ಬಳಿಕ ಅಂದ್ರೆ ನಿನ್ನೆ ಮಗನ ಸಾವಿನ ವಿಚಾರ ಆತನ ತಂದೆ ತಾಯಿಗೆ ಸಂಬಂಧಿಕರು ತಿಳಿಸಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತದಿಂದ ತಾಯಿ ಜಯಮ್ಮ ಬಳಿಕ ತಂದೆ ಕೆಂಪಚಾರಿ ಮೃತಪಟ್ಟಿದ್ದಾರೆ. ಮಹಾಮಾರಿ ಕೊರೊನಾ ತನ್ನ ಪ್ರಭಾವದಿಂದ ಮೂವರನ್ನು ಬಲಿ ಪಡೆದಿದೆ.

ಇದನ್ನೂ ಓದಿ: ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಂಟುಂಬಸ್ಥರಿಗೆ ಹಸ್ತಾಂತರ

Published On - 9:59 am, Tue, 4 May 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ