AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: 15 ದಿನದ ಅಂತರದಲ್ಲಿ ತಂದೆ, ತಾಯಿ ಕೊರೊನಾಗೆ ಬಲಿ; ತಬ್ಬಲಿಯಾದ 5 ದಿನದ ಮಗು

ನಂಜುಂಡೇಗೌಡ (45) ಮತ್ತು ಮಮತಾ (31) ಮೃತ ದಂಪತಿ. ನಂಜುಂಡೇಗೌಡ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ಏಪ್ರಿಲ್ನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ನಂಜುಂಡೇಗೌಡ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ತುಂಬು ಗರ್ಭಿಣಿಯಾಗಿದ್ದ ನಂಜುಂಡೇಗೌಡ ಪತ್ನಿ ಮಮತಗೂ ಸೋಂಕು ದೃಢಪಟ್ಟಿತ್ತು.

ಮಂಡ್ಯ: 15 ದಿನದ ಅಂತರದಲ್ಲಿ ತಂದೆ, ತಾಯಿ ಕೊರೊನಾಗೆ ಬಲಿ; ತಬ್ಬಲಿಯಾದ 5 ದಿನದ ಮಗು
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on: May 15, 2021 | 2:21 PM

ಮಂಡ್ಯ: ಕೊರೊನಾ ಸೋಂಕು ತಂದೆ, ತಾಯಿ ಇಬ್ಬರನ್ನು ಕಿತ್ತುಕೊಂಡು 5 ದಿನದ ಮಗುವನ್ನು ಅನಾಥಮಾಡಿದೆ. ಕಣ್ಣು ಬಿಡುವ ಮುನ್ನವೇ ಮಗು 15 ದಿನದ ಅಂತರದಲ್ಲಿ ತಂದೆ, ತಾಯಿಯನ್ನು ಕಳೆದುಕೊಂಡು ಅನಾಥವಾಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ನಡೆದಿದೆ. ಏಪ್ರಿಲ್ 30ರಂದು ತಂದೆ ನಂಜೇಗೌಡ ಕೊವಿಡ್ಗೆ ಬಲಿಯಾಗಿದ್ದರು. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಇಂದು (ಮೇ 15) ತಾಯಿ ಸಾವನ್ನಪ್ಪಿದ್ದಾರೆ.

ನಂಜುಂಡೇಗೌಡ (45) ಮತ್ತು ಮಮತಾ (31) ಮೃತ ದಂಪತಿ. ನಂಜುಂಡೇಗೌಡ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ಏಪ್ರಿಲ್ನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ನಂಜುಂಡೇಗೌಡ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ತುಂಬು ಗರ್ಭಿಣಿಯಾಗಿದ್ದ ನಂಜುಂಡೇಗೌಡ ಪತ್ನಿ ಮಮತಗೂ ಸೋಂಕು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಹೋಂ ಐಶೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ಸಮಸ್ಯೆ ಎದುರಾದಾಗ ಮಿಮ್ಸ್ಗೆ ದಾಖಲಾಗಿದ್ದರು.

ಏಪ್ರಿಲ್ 30 ರಂದು ಚಿಕಿತ್ಸೆ ಫಲಕಾರಿಯಾಗದೆ ನಂಜುಂಡೇಗೌಡ ಮೃತಪಟ್ಟರು. ಮೇ 11ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಮತಾ ಕೂಡಾ ಚಿಕಿತ್ಸೆ ಫಲಿಸದೇ ನಿನ್ನೆ ( ಮೇ 14) ಸಂಜೆ ಸಾವನ್ನಪ್ಪಿದ್ದಾರೆ. ಮದುವೆಯಾದ 9 ವರ್ಷದ ನಂತರ ಮಗು ಜನಿಸಿದ್ದು, ಸಂತೋಷದ ಘಳಿಗೆಯಲ್ಲಿ ಕೊರೊನಾ ತಂದೆ, ತಾಯಿ ಪ್ರೀತಿಯಿಂದ ಮಗುವನ್ನು ವಂಚಿತವಾಗಿಸಿದೆ. ಮೃತ ದಂಪತಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ

ರವಿ ಡಿ. ಚೆನ್ನಣ್ಣನವರ್ ಫೊಟೋ ಹಾಕಿಕೊಂಡು ಓಡಾಡಿದ ವಾಹನ ಚಾಲಕನಿಗೆ 500 ರೂಪಾಯಿ ದಂಡ

ಕೊವಿನ್​ಗೆ ಪರ್ಯಾಯವಾಗಿ ಕರ್ನಾಟಕ ಸರ್ಕಾರದಿಂದ ಹೊಸ ಪೋರ್ಟಲ್; ಇನ್ನುಮುಂದೆ ಬೇಕೆಂದಲ್ಲಿ ಲಸಿಕೆ ಕಾಯ್ದಿರಿಸುವಂತಿಲ್ಲ

(Father and mother died due to corona 15 days apart at Mandya)

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್