AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

ಪತ್ನಿಯ ಮೇಲೆ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಕತ್ತು ಹಿಸುಕಿ ಗಂಡ ಮತ್ತು ಮಗ ಕೊಲೆ ಮಾಡಿದ್ದರು. ಕೊಲೆ ಮಾಡಿ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ, ಮಗ ಗ್ರಾಮಸ್ಥರಿಗೆ ನಂಬಿಸಿದ್ದರು. ಬಳಿಕ ತರಾತುರಿಯಲ್ಲಿ ಮಹಾದೇವಿ ಅಂತ್ಯಕ್ರಿಯೆ ಮಾಡಿದ್ದರು.

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್
ಮಹಿಳೆ ಅತ್ಯಕ್ರಿಯೆ ಮಾಡಿದ ಸ್ಥಳ
TV9 Web
| Edited By: |

Updated on: Jun 11, 2021 | 8:11 AM

Share

ಬಾಗಲಕೋಟೆ: ತುಂಗಳ ಗ್ರಾಮದಲ್ಲಿ ಮಹಾದೇವಿ ವಡ್ರಾಲ(40) ಹತ್ಯೆ ಕೇಸ್ಗೆ ಸಂಬಂಧಿಸಿ ಸಾವಳಗಿ ಠಾಣೆ ಪೊಲೀಸರು ಪತಿ, ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಜೂನ್ 7 ರಂದು ಮಹಾದೇವಿ ಹತ್ಯೆಯಾಗಿತ್ತು.

ಪತ್ನಿಯ ಮೇಲೆ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಕತ್ತು ಹಿಸುಕಿ ಗಂಡ ಮತ್ತು ಮಗ ಕೊಲೆ ಮಾಡಿದ್ದರು. ಕೊಲೆ ಮಾಡಿ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ, ಮಗ ಗ್ರಾಮಸ್ಥರಿಗೆ ನಂಬಿಸಿದ್ದರು. ಬಳಿಕ ತರಾತುರಿಯಲ್ಲಿ ಮಹಾದೇವಿ ಅಂತ್ಯಕ್ರಿಯೆ ಮಾಡಿದ್ದರು. ಇಷ್ಟೆಲ್ಲಾ ಆದ ಬಳಿಕ ಗ್ರಾಮಸ್ಥರಿಗೆ ತರಾತುರಿಯ ಅಂತ್ಯಕ್ರಿಯೆ ನೋಡಿ ಅನುಮಾನ ಶುರುವಾಗಿತ್ತು. ಕೊನೆಗೆ ಕೊಲೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಅನಾಮಿಕ ಕರೆ ಬಂದಿದೆ. ಈ ಅನಾಮಿಕ ಕರೆ ಆಧರಿಸಿ ಪೊಲೀಸರು ಪ್ರಕರಣವನ್ನು ಬಯಲು ಮಾಡಿದ್ದಾರೆ. ಸಾವಳಗಿ ಪೊಲೀಸರು ಹಾಗೂ ಜಮಖಂಡಿ ಸಿಪಿಐ ತನಿಖೆ ನಡೆಸಿ ಪತಿ ಹನುಮಂತ ವಡ್ರಾಲ ಹಾಗೂ 14 ವರ್ಷದ ಮಗನನ್ನು ಅರೆಸ್ಟ್ ಮಾಡಿದ್ದಾರೆ.

ಖಚಿತತೆಗಾಗಿ ಶವದ ಮೂಳೆ ಡಿಎನ್ಎ ಟೆಸ್ಟ್ ಮಾಡಿಸಿ ಹಾಗೂ ಬಳೆ ಮೂಲಕ ಶವ ಮಹಾದೇವಿಯದ್ದೇ ಎಂದು ಪೊಲೀಸರು ದೃಢಪಡಿಸಿಕೊಂಡಿದ್ದಾರೆ. ಕೊಲೆಗೈದ ಪತಿ ಹನುಮಂತ ವಡ್ರಾಲ ಹಾಗೂ ಅಪ್ರಾಪ್ತ ಮಗನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

bgk murder

ಹೆಂಡತಿಯನ್ನು ಕೊಲೆ ಮಾಡಿದ ಹನುಮಂತ ವಡ್ರಾಲ

ಇದನ್ನೂ ಓದಿ: ಕ್ರಿಕೆಟ್ ಆಟದಲ್ಲಿ ಮುನಿಸು, ಬುದ್ಧಿವಾದ ಹೇಳಿದ್ದಕ್ಕೆ ದ್ವೇಷ; ಕೊಲೆಗೆ ಯತ್ನಿಸಿ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ