Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ
ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು!
Follow us
| Updated By: shruti hegde

Updated on:Jun 22, 2021 | 4:04 PM

ಕೊರೊನಾ ವೈರಸ್​ ಸಾಂಕ್ರಾಮಿಕದಿಂದಾಗಿ ಆನ್​ಲೈನ್​ ಕ್ಲಾಸ್​ಗಳು ನಡೆಯುತ್ತಿವೆ. ನೆಟ್​ವರ್ಕ್​ ಹುಡುಕುತ್ತಾ ಅಲ್ಲೆಲ್ಲೋ ದೂದರ ಬೆಟ್ಟವೇರಿ ಸಿಗ್ನಲ್​ಗಾಗಿ ಪರದಾಡುವ ಪರಿಸ್ಥಿತಿ ಅದೆಷ್ಟೋ ವಿದ್ಯಾರ್ಥಿಗಳದ್ದು.. ಅದರಲ್ಲಿಯೂ ಮಳೆಯ ಆರ್ಭಟ ಜೋರಾಗಿಯೇ ಇರುವುದರರಿಂದ ಸಿಗ್ನಲ್​ ಹುಡುಕುತ್ತಾ ಅದೆಷ್ಟೋ ದೂರ ಕ್ರಮಿಸಿ ಶಾಲಾಭ್ಯಾಸ ಮಾಡುತ್ತಿದ್ದಾರೆ. ಭಾರೀ ಮಳೆಯಲ್ಲಿ ರಸ್ತೆಯ ಅಂಚಿನಲ್ಲಿ ಕೂತು ಪಾಠ ಕೇಳುತ್ತಿರುವ ವಿದ್ಯಾರ್ಥಿಯ ಫೋಟೋವೊಂದು ವೈರಲ್​ ಆಗಿದೆ. ಈ ಮಧ್ಯೆ, ಮಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ವಿದ್ಯಾರ್ಥಿಯ ತಂದೆ ಕೊಡೆ ಹಿಡಿದು ಮಗಳನ್ನು ಮಳೆಯಿಂದ ರಕ್ಷಿಸುತ್ತಿರುವ ಫೋಟೋ ಮನಕಲಕುವಂತಿದೆ.

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ವಿದ್ಯಾರ್ಥಿಯ ಮನೆಯಲ್ಲಿ ಸಿಗ್ನಲ್​ ಕೊರತೆ ಇರುವ ಕಾರಣ ಅವಳು ರಸ್ತೆಯಂಚಿನಲ್ಲಿ ಕೂತು ಪಾಠ ಕೇಳುವ ಪರಿಸ್ಥಿತಿ ಇದೆ. ಹಳ್ಳಿಯನ್ನು ಬಿಟ್ಟು ನೆಟ್​ವರ್ಕ್​ಗಾಗಿ ಅದೆಷ್ಟೋ ದೂರ ಬಂದು ಅಭ್ಯಾಸ ಕಲಿಯಬೇಕಿದೆ. ಆರ್ಭಟಿಸುತ್ತಿರುವ ಮಳೆಯಲ್ಲಿಯೂ ಆಕೆ ಶ್ರದ್ಧೆಯಿಂದ ಪಾಠ ಕೇಳುತ್ತಿರುವುದು ಜತೆಗೆ ಮಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ತಂದೆ ಕೊಡೆ ಹಿಡಿದು ನಿಂತಿರುವ ಫೋಟೋ ವೈರಲ್​ ಆಗಿದೆ.

ನಾನು ಬಿಎ ಪದವಿ ಓದುತ್ತಿದ್ದೇನೆ. ನನ್ನ ಊರಿನಲ್ಲಿ ನೆಟ್​ವರ್ಕ್​ ಸಿಗುವುದಿಲ್ಲ. ಇಂಟರ್​ನೆಟ್​ ಇಲ್ಲದೇ ಕಷ್ಟವಾಗುತ್ತಿದೆ. ಜತೆಗೆ ವಿದ್ಯಾಭ್ಯಾಸಕ್ಕಾಗಿ ಆನ್​ಲೈನ್​ ತರಗತಿಗಳನ್ನು ಪಡೆಯಲೇಬೇಕಾಗಿದೆ. ಕೊರೊನಾ ವೈರಸ್​ ಪ್ರಾರಂಭವಾದಾಗಿನಿಂದ 30-40 ವಿದ್ಯಾರ್ಥಿಗಳು ಇಲ್ಲಿಗೆ ಬಂದು ಪಾಠ ಕೇಳುತ್ತಾರೆ ಎಂದು ವಿದ್ಯಾರ್ಥಿನಿ ಅಭಿಪ್ರಾಯ ಹಂಚಿಕೊಂಡಿದ್ದಾಳೆ.

ಮಳೆಗಾಲದಲ್ಲಿಯೂ ಸಹ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗೆ ಇಲ್ಲಿಗೆ ಬಂದು ಪಾಠ ಕೇಳುತ್ತೇವೆ. ನಂತರ ಊಟಕ್ಕೆ ಹೋಗಿ ಪುನಃ ಮತ್ತೆ ಬಂದು ಪಾಠ ಕೇಳುತ್ತೇವೆ. ಬೇರೆ ಎಲ್ಲೂ ನೆಟ್​ವರ್ಕ್ ಇಲ್ಲದ ಕಾರಣ ಈ ಜಾಗಕ್ಕೆ ಬಂದು ಪಾಠ ಕೆಳುತ್ತಿದ್ದೇವೆ ಎಂದು ಇಂಡಿಯಾ ಟುಡೇ ಸುದ್ದಿ ಮಾಧ್ಯಮದೊಡನೆ ವಿದ್ಯಾರ್ಥಿನಿ ಮಾಹಿತಿ ಹಂಚಿಕೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮಳೆಗಾಲದಲ್ಲಿ ಮರಗಳು ಬೀಳುವುದನ್ನು ನಿಯಂತ್ರಿಸಲು ಮುಂಬೈನಲ್ಲಿ ವಿನೂತನ ಕ್ರಮ; ಟ್ರೀ ಸರ್ಜನ್​​ಗಳನ್ನು ನೇಮಕ ಮಾಡಿದ ಬಿಎಂಸಿ

ನಾಲ್ಕನೆಯ ದಿನವೂ ವರುಣನ ಅವಕೃಪೆ ಇದೆಯಾ? ಇನ್ನೂ 4 ದಿನ ಮಳೆಯಾಗುತ್ತದಾ? ಹೇಗಿದೆ ಸೌಥಾಂಪ್ಟನ್​ ಮಳೆ ಮೈದಾನ..?

Published On - 3:44 pm, Mon, 21 June 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ