AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ
ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು!
TV9 Web
| Edited By: |

Updated on:Jun 22, 2021 | 4:04 PM

Share

ಕೊರೊನಾ ವೈರಸ್​ ಸಾಂಕ್ರಾಮಿಕದಿಂದಾಗಿ ಆನ್​ಲೈನ್​ ಕ್ಲಾಸ್​ಗಳು ನಡೆಯುತ್ತಿವೆ. ನೆಟ್​ವರ್ಕ್​ ಹುಡುಕುತ್ತಾ ಅಲ್ಲೆಲ್ಲೋ ದೂದರ ಬೆಟ್ಟವೇರಿ ಸಿಗ್ನಲ್​ಗಾಗಿ ಪರದಾಡುವ ಪರಿಸ್ಥಿತಿ ಅದೆಷ್ಟೋ ವಿದ್ಯಾರ್ಥಿಗಳದ್ದು.. ಅದರಲ್ಲಿಯೂ ಮಳೆಯ ಆರ್ಭಟ ಜೋರಾಗಿಯೇ ಇರುವುದರರಿಂದ ಸಿಗ್ನಲ್​ ಹುಡುಕುತ್ತಾ ಅದೆಷ್ಟೋ ದೂರ ಕ್ರಮಿಸಿ ಶಾಲಾಭ್ಯಾಸ ಮಾಡುತ್ತಿದ್ದಾರೆ. ಭಾರೀ ಮಳೆಯಲ್ಲಿ ರಸ್ತೆಯ ಅಂಚಿನಲ್ಲಿ ಕೂತು ಪಾಠ ಕೇಳುತ್ತಿರುವ ವಿದ್ಯಾರ್ಥಿಯ ಫೋಟೋವೊಂದು ವೈರಲ್​ ಆಗಿದೆ. ಈ ಮಧ್ಯೆ, ಮಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ವಿದ್ಯಾರ್ಥಿಯ ತಂದೆ ಕೊಡೆ ಹಿಡಿದು ಮಗಳನ್ನು ಮಳೆಯಿಂದ ರಕ್ಷಿಸುತ್ತಿರುವ ಫೋಟೋ ಮನಕಲಕುವಂತಿದೆ.

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ವಿದ್ಯಾರ್ಥಿಯ ಮನೆಯಲ್ಲಿ ಸಿಗ್ನಲ್​ ಕೊರತೆ ಇರುವ ಕಾರಣ ಅವಳು ರಸ್ತೆಯಂಚಿನಲ್ಲಿ ಕೂತು ಪಾಠ ಕೇಳುವ ಪರಿಸ್ಥಿತಿ ಇದೆ. ಹಳ್ಳಿಯನ್ನು ಬಿಟ್ಟು ನೆಟ್​ವರ್ಕ್​ಗಾಗಿ ಅದೆಷ್ಟೋ ದೂರ ಬಂದು ಅಭ್ಯಾಸ ಕಲಿಯಬೇಕಿದೆ. ಆರ್ಭಟಿಸುತ್ತಿರುವ ಮಳೆಯಲ್ಲಿಯೂ ಆಕೆ ಶ್ರದ್ಧೆಯಿಂದ ಪಾಠ ಕೇಳುತ್ತಿರುವುದು ಜತೆಗೆ ಮಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ತಂದೆ ಕೊಡೆ ಹಿಡಿದು ನಿಂತಿರುವ ಫೋಟೋ ವೈರಲ್​ ಆಗಿದೆ.

ನಾನು ಬಿಎ ಪದವಿ ಓದುತ್ತಿದ್ದೇನೆ. ನನ್ನ ಊರಿನಲ್ಲಿ ನೆಟ್​ವರ್ಕ್​ ಸಿಗುವುದಿಲ್ಲ. ಇಂಟರ್​ನೆಟ್​ ಇಲ್ಲದೇ ಕಷ್ಟವಾಗುತ್ತಿದೆ. ಜತೆಗೆ ವಿದ್ಯಾಭ್ಯಾಸಕ್ಕಾಗಿ ಆನ್​ಲೈನ್​ ತರಗತಿಗಳನ್ನು ಪಡೆಯಲೇಬೇಕಾಗಿದೆ. ಕೊರೊನಾ ವೈರಸ್​ ಪ್ರಾರಂಭವಾದಾಗಿನಿಂದ 30-40 ವಿದ್ಯಾರ್ಥಿಗಳು ಇಲ್ಲಿಗೆ ಬಂದು ಪಾಠ ಕೇಳುತ್ತಾರೆ ಎಂದು ವಿದ್ಯಾರ್ಥಿನಿ ಅಭಿಪ್ರಾಯ ಹಂಚಿಕೊಂಡಿದ್ದಾಳೆ.

ಮಳೆಗಾಲದಲ್ಲಿಯೂ ಸಹ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗೆ ಇಲ್ಲಿಗೆ ಬಂದು ಪಾಠ ಕೇಳುತ್ತೇವೆ. ನಂತರ ಊಟಕ್ಕೆ ಹೋಗಿ ಪುನಃ ಮತ್ತೆ ಬಂದು ಪಾಠ ಕೇಳುತ್ತೇವೆ. ಬೇರೆ ಎಲ್ಲೂ ನೆಟ್​ವರ್ಕ್ ಇಲ್ಲದ ಕಾರಣ ಈ ಜಾಗಕ್ಕೆ ಬಂದು ಪಾಠ ಕೆಳುತ್ತಿದ್ದೇವೆ ಎಂದು ಇಂಡಿಯಾ ಟುಡೇ ಸುದ್ದಿ ಮಾಧ್ಯಮದೊಡನೆ ವಿದ್ಯಾರ್ಥಿನಿ ಮಾಹಿತಿ ಹಂಚಿಕೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮಳೆಗಾಲದಲ್ಲಿ ಮರಗಳು ಬೀಳುವುದನ್ನು ನಿಯಂತ್ರಿಸಲು ಮುಂಬೈನಲ್ಲಿ ವಿನೂತನ ಕ್ರಮ; ಟ್ರೀ ಸರ್ಜನ್​​ಗಳನ್ನು ನೇಮಕ ಮಾಡಿದ ಬಿಎಂಸಿ

ನಾಲ್ಕನೆಯ ದಿನವೂ ವರುಣನ ಅವಕೃಪೆ ಇದೆಯಾ? ಇನ್ನೂ 4 ದಿನ ಮಳೆಯಾಗುತ್ತದಾ? ಹೇಗಿದೆ ಸೌಥಾಂಪ್ಟನ್​ ಮಳೆ ಮೈದಾನ..?

Published On - 3:44 pm, Mon, 21 June 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು