AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ
ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು!
TV9 Web
| Updated By: shruti hegde|

Updated on:Jun 22, 2021 | 4:04 PM

Share

ಕೊರೊನಾ ವೈರಸ್​ ಸಾಂಕ್ರಾಮಿಕದಿಂದಾಗಿ ಆನ್​ಲೈನ್​ ಕ್ಲಾಸ್​ಗಳು ನಡೆಯುತ್ತಿವೆ. ನೆಟ್​ವರ್ಕ್​ ಹುಡುಕುತ್ತಾ ಅಲ್ಲೆಲ್ಲೋ ದೂದರ ಬೆಟ್ಟವೇರಿ ಸಿಗ್ನಲ್​ಗಾಗಿ ಪರದಾಡುವ ಪರಿಸ್ಥಿತಿ ಅದೆಷ್ಟೋ ವಿದ್ಯಾರ್ಥಿಗಳದ್ದು.. ಅದರಲ್ಲಿಯೂ ಮಳೆಯ ಆರ್ಭಟ ಜೋರಾಗಿಯೇ ಇರುವುದರರಿಂದ ಸಿಗ್ನಲ್​ ಹುಡುಕುತ್ತಾ ಅದೆಷ್ಟೋ ದೂರ ಕ್ರಮಿಸಿ ಶಾಲಾಭ್ಯಾಸ ಮಾಡುತ್ತಿದ್ದಾರೆ. ಭಾರೀ ಮಳೆಯಲ್ಲಿ ರಸ್ತೆಯ ಅಂಚಿನಲ್ಲಿ ಕೂತು ಪಾಠ ಕೇಳುತ್ತಿರುವ ವಿದ್ಯಾರ್ಥಿಯ ಫೋಟೋವೊಂದು ವೈರಲ್​ ಆಗಿದೆ. ಈ ಮಧ್ಯೆ, ಮಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ವಿದ್ಯಾರ್ಥಿಯ ತಂದೆ ಕೊಡೆ ಹಿಡಿದು ಮಗಳನ್ನು ಮಳೆಯಿಂದ ರಕ್ಷಿಸುತ್ತಿರುವ ಫೋಟೋ ಮನಕಲಕುವಂತಿದೆ.

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ವಿದ್ಯಾರ್ಥಿಯ ಮನೆಯಲ್ಲಿ ಸಿಗ್ನಲ್​ ಕೊರತೆ ಇರುವ ಕಾರಣ ಅವಳು ರಸ್ತೆಯಂಚಿನಲ್ಲಿ ಕೂತು ಪಾಠ ಕೇಳುವ ಪರಿಸ್ಥಿತಿ ಇದೆ. ಹಳ್ಳಿಯನ್ನು ಬಿಟ್ಟು ನೆಟ್​ವರ್ಕ್​ಗಾಗಿ ಅದೆಷ್ಟೋ ದೂರ ಬಂದು ಅಭ್ಯಾಸ ಕಲಿಯಬೇಕಿದೆ. ಆರ್ಭಟಿಸುತ್ತಿರುವ ಮಳೆಯಲ್ಲಿಯೂ ಆಕೆ ಶ್ರದ್ಧೆಯಿಂದ ಪಾಠ ಕೇಳುತ್ತಿರುವುದು ಜತೆಗೆ ಮಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ತಂದೆ ಕೊಡೆ ಹಿಡಿದು ನಿಂತಿರುವ ಫೋಟೋ ವೈರಲ್​ ಆಗಿದೆ.

ನಾನು ಬಿಎ ಪದವಿ ಓದುತ್ತಿದ್ದೇನೆ. ನನ್ನ ಊರಿನಲ್ಲಿ ನೆಟ್​ವರ್ಕ್​ ಸಿಗುವುದಿಲ್ಲ. ಇಂಟರ್​ನೆಟ್​ ಇಲ್ಲದೇ ಕಷ್ಟವಾಗುತ್ತಿದೆ. ಜತೆಗೆ ವಿದ್ಯಾಭ್ಯಾಸಕ್ಕಾಗಿ ಆನ್​ಲೈನ್​ ತರಗತಿಗಳನ್ನು ಪಡೆಯಲೇಬೇಕಾಗಿದೆ. ಕೊರೊನಾ ವೈರಸ್​ ಪ್ರಾರಂಭವಾದಾಗಿನಿಂದ 30-40 ವಿದ್ಯಾರ್ಥಿಗಳು ಇಲ್ಲಿಗೆ ಬಂದು ಪಾಠ ಕೇಳುತ್ತಾರೆ ಎಂದು ವಿದ್ಯಾರ್ಥಿನಿ ಅಭಿಪ್ರಾಯ ಹಂಚಿಕೊಂಡಿದ್ದಾಳೆ.

ಮಳೆಗಾಲದಲ್ಲಿಯೂ ಸಹ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗೆ ಇಲ್ಲಿಗೆ ಬಂದು ಪಾಠ ಕೇಳುತ್ತೇವೆ. ನಂತರ ಊಟಕ್ಕೆ ಹೋಗಿ ಪುನಃ ಮತ್ತೆ ಬಂದು ಪಾಠ ಕೇಳುತ್ತೇವೆ. ಬೇರೆ ಎಲ್ಲೂ ನೆಟ್​ವರ್ಕ್ ಇಲ್ಲದ ಕಾರಣ ಈ ಜಾಗಕ್ಕೆ ಬಂದು ಪಾಠ ಕೆಳುತ್ತಿದ್ದೇವೆ ಎಂದು ಇಂಡಿಯಾ ಟುಡೇ ಸುದ್ದಿ ಮಾಧ್ಯಮದೊಡನೆ ವಿದ್ಯಾರ್ಥಿನಿ ಮಾಹಿತಿ ಹಂಚಿಕೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮಳೆಗಾಲದಲ್ಲಿ ಮರಗಳು ಬೀಳುವುದನ್ನು ನಿಯಂತ್ರಿಸಲು ಮುಂಬೈನಲ್ಲಿ ವಿನೂತನ ಕ್ರಮ; ಟ್ರೀ ಸರ್ಜನ್​​ಗಳನ್ನು ನೇಮಕ ಮಾಡಿದ ಬಿಎಂಸಿ

ನಾಲ್ಕನೆಯ ದಿನವೂ ವರುಣನ ಅವಕೃಪೆ ಇದೆಯಾ? ಇನ್ನೂ 4 ದಿನ ಮಳೆಯಾಗುತ್ತದಾ? ಹೇಗಿದೆ ಸೌಥಾಂಪ್ಟನ್​ ಮಳೆ ಮೈದಾನ..?

Published On - 3:44 pm, Mon, 21 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ