AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Viral Photo: ಇಲ್ಲಿ ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು; ಮಗಳ ರಕ್ಷಣೆಗೆ ಸ್ವತಃ ಕೊಡೆ ಹಿಡಿದು ನಿಂತ ಅಪ್ಪ
ಮಳೆಯಲ್ಲಿ‌ ನೆನೆದೇ ಆನ್​ಲೈನ್ ಕ್ಲಾಸಿಗೆ ಕೂರಬೇಕು!
TV9 Web
| Edited By: |

Updated on:Jun 22, 2021 | 4:04 PM

Share

ಕೊರೊನಾ ವೈರಸ್​ ಸಾಂಕ್ರಾಮಿಕದಿಂದಾಗಿ ಆನ್​ಲೈನ್​ ಕ್ಲಾಸ್​ಗಳು ನಡೆಯುತ್ತಿವೆ. ನೆಟ್​ವರ್ಕ್​ ಹುಡುಕುತ್ತಾ ಅಲ್ಲೆಲ್ಲೋ ದೂದರ ಬೆಟ್ಟವೇರಿ ಸಿಗ್ನಲ್​ಗಾಗಿ ಪರದಾಡುವ ಪರಿಸ್ಥಿತಿ ಅದೆಷ್ಟೋ ವಿದ್ಯಾರ್ಥಿಗಳದ್ದು.. ಅದರಲ್ಲಿಯೂ ಮಳೆಯ ಆರ್ಭಟ ಜೋರಾಗಿಯೇ ಇರುವುದರರಿಂದ ಸಿಗ್ನಲ್​ ಹುಡುಕುತ್ತಾ ಅದೆಷ್ಟೋ ದೂರ ಕ್ರಮಿಸಿ ಶಾಲಾಭ್ಯಾಸ ಮಾಡುತ್ತಿದ್ದಾರೆ. ಭಾರೀ ಮಳೆಯಲ್ಲಿ ರಸ್ತೆಯ ಅಂಚಿನಲ್ಲಿ ಕೂತು ಪಾಠ ಕೇಳುತ್ತಿರುವ ವಿದ್ಯಾರ್ಥಿಯ ಫೋಟೋವೊಂದು ವೈರಲ್​ ಆಗಿದೆ. ಈ ಮಧ್ಯೆ, ಮಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ವಿದ್ಯಾರ್ಥಿಯ ತಂದೆ ಕೊಡೆ ಹಿಡಿದು ಮಗಳನ್ನು ಮಳೆಯಿಂದ ರಕ್ಷಿಸುತ್ತಿರುವ ಫೋಟೋ ಮನಕಲಕುವಂತಿದೆ.

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ವಿದ್ಯಾರ್ಥಿಯ ಮನೆಯಲ್ಲಿ ಸಿಗ್ನಲ್​ ಕೊರತೆ ಇರುವ ಕಾರಣ ಅವಳು ರಸ್ತೆಯಂಚಿನಲ್ಲಿ ಕೂತು ಪಾಠ ಕೇಳುವ ಪರಿಸ್ಥಿತಿ ಇದೆ. ಹಳ್ಳಿಯನ್ನು ಬಿಟ್ಟು ನೆಟ್​ವರ್ಕ್​ಗಾಗಿ ಅದೆಷ್ಟೋ ದೂರ ಬಂದು ಅಭ್ಯಾಸ ಕಲಿಯಬೇಕಿದೆ. ಆರ್ಭಟಿಸುತ್ತಿರುವ ಮಳೆಯಲ್ಲಿಯೂ ಆಕೆ ಶ್ರದ್ಧೆಯಿಂದ ಪಾಠ ಕೇಳುತ್ತಿರುವುದು ಜತೆಗೆ ಮಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ತಂದೆ ಕೊಡೆ ಹಿಡಿದು ನಿಂತಿರುವ ಫೋಟೋ ವೈರಲ್​ ಆಗಿದೆ.

ನಾನು ಬಿಎ ಪದವಿ ಓದುತ್ತಿದ್ದೇನೆ. ನನ್ನ ಊರಿನಲ್ಲಿ ನೆಟ್​ವರ್ಕ್​ ಸಿಗುವುದಿಲ್ಲ. ಇಂಟರ್​ನೆಟ್​ ಇಲ್ಲದೇ ಕಷ್ಟವಾಗುತ್ತಿದೆ. ಜತೆಗೆ ವಿದ್ಯಾಭ್ಯಾಸಕ್ಕಾಗಿ ಆನ್​ಲೈನ್​ ತರಗತಿಗಳನ್ನು ಪಡೆಯಲೇಬೇಕಾಗಿದೆ. ಕೊರೊನಾ ವೈರಸ್​ ಪ್ರಾರಂಭವಾದಾಗಿನಿಂದ 30-40 ವಿದ್ಯಾರ್ಥಿಗಳು ಇಲ್ಲಿಗೆ ಬಂದು ಪಾಠ ಕೇಳುತ್ತಾರೆ ಎಂದು ವಿದ್ಯಾರ್ಥಿನಿ ಅಭಿಪ್ರಾಯ ಹಂಚಿಕೊಂಡಿದ್ದಾಳೆ.

ಮಳೆಗಾಲದಲ್ಲಿಯೂ ಸಹ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗೆ ಇಲ್ಲಿಗೆ ಬಂದು ಪಾಠ ಕೇಳುತ್ತೇವೆ. ನಂತರ ಊಟಕ್ಕೆ ಹೋಗಿ ಪುನಃ ಮತ್ತೆ ಬಂದು ಪಾಠ ಕೇಳುತ್ತೇವೆ. ಬೇರೆ ಎಲ್ಲೂ ನೆಟ್​ವರ್ಕ್ ಇಲ್ಲದ ಕಾರಣ ಈ ಜಾಗಕ್ಕೆ ಬಂದು ಪಾಠ ಕೆಳುತ್ತಿದ್ದೇವೆ ಎಂದು ಇಂಡಿಯಾ ಟುಡೇ ಸುದ್ದಿ ಮಾಧ್ಯಮದೊಡನೆ ವಿದ್ಯಾರ್ಥಿನಿ ಮಾಹಿತಿ ಹಂಚಿಕೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳೂ ಸಹ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಅವರಲ್ಲಿ ಯಾವ ಕಾರಣಕ್ಕೂ ಶಿಕ್ಷಣದ ಮೇಲಿನ ಒಲವು ಕಡಿಮೆಯಾಗಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮಳೆಗಾಲದಲ್ಲಿ ಮರಗಳು ಬೀಳುವುದನ್ನು ನಿಯಂತ್ರಿಸಲು ಮುಂಬೈನಲ್ಲಿ ವಿನೂತನ ಕ್ರಮ; ಟ್ರೀ ಸರ್ಜನ್​​ಗಳನ್ನು ನೇಮಕ ಮಾಡಿದ ಬಿಎಂಸಿ

ನಾಲ್ಕನೆಯ ದಿನವೂ ವರುಣನ ಅವಕೃಪೆ ಇದೆಯಾ? ಇನ್ನೂ 4 ದಿನ ಮಳೆಯಾಗುತ್ತದಾ? ಹೇಗಿದೆ ಸೌಥಾಂಪ್ಟನ್​ ಮಳೆ ಮೈದಾನ..?

Published On - 3:44 pm, Mon, 21 June 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ