AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!

ಮುಡಾ ಹಗರಣದಲ್ಲಿ ದೂರುದಾರರು ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಮೊರೆ ಹೋಗಬಹುದು ಎಂಬ ಸುಳಿವು ದೊರೆತ ಬೆನ್ನಲ್ಲೇ ಆ ವಿಚಾರದಲ್ಲಿ ಕರ್ನಾಟಕ ಸಚಿವ ಸಂಪುಟ ರಕ್ಷಣಾತ್ಮಕ ಕ್ರಮ ಕೈಗೊಂಡಿದೆ. ಸಿಬಿಐ ತನಿಖೆಗೆ ಇದ್ದ ಮುಕ್ತ ಅವಕಾಶದ ಅಧಿಸೂಚನೆಯನ್ನೇ ಹಿಂಪಡೆಯಲು ಸಚಿವ ಸಂಪುಟ ಮುಂದಾಗಿದೆ. ಇದು ಸಿಎಂ ಸಿದ್ದರಾಮಯ್ಯಗೆ ಸಿಬಿಐ ತನಿಖೆಯ ಭೀತಿ ಇರುವುದನ್ನು ಸ್ಪಷ್ಟಪಡಿಸಿದೆ.

ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!
ಪ್ರಸನ್ನ ಗಾಂವ್ಕರ್​
| Edited By: |

Updated on:Sep 27, 2024 | 9:23 AM

Share

ಬೆಂಗಳೂರು, ಸೆಪ್ಟೆಂಬರ್ 27: ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಿಬಿಐ ತನಿಖೆಯ ಭೀತಿ ಎದುರಾಗಿದೆಯೇ ಎಂಬ ಪ್ರಶ್ನೆ ಈಗ ಮೂಡಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಕೆಲವು ನಿರ್ಣಯಗಳೇ ಇದಕ್ಕೆ ಕಾರಣ. ಸಿಬಿಐ ತನಿಖೆ ಆತಂಕದಿಂದಲೇ ಕಾನೂನು ಕುಣಿಕೆಯಿಂದ ಪಾರಾಗಲು ಸಚಿವ ಸಂಪುಟ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಇದೇ ಕಾರಣಕ್ಕೆ ನೇರ ತನಿಖೆಗೆ ಸಿಬಿಐಗೆ ಅವಕಾಶ ದೊರೆಯದಂತೆ ಮಾಡುವ ನೆಟ್ಟಿನಲ್ಲಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

ಒಂದು ವೇಳೆ ದೂರುದಾರರು ಕೋರ್ಟ್ ಆದೇಶ ಪಡೆದು ನೇರವಾಗಿ ಸಿಬಿಐಗೆ ದೂರು ನೀಡಿದರೆ ತನಿಖೆ ಅಖಾಡಕ್ಕೆ ಕೇಂದ್ರ ತನಿಖಾ ಸಂಸ್ಥೆ ಧುಮುಕುವುದು ನಿಶ್ಚಿತ. ಇಂತಹದ್ದೊಂದು ಸಾಧ್ಯತೆಯನ್ನು ಗಮನಿಸಿಕೊಂಡೇ, ಸಿಬಿಐ ಮುಕ್ತ ತನಿಖೆಗೆ ಇರುವ ಅವಕಾಶವನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ತಮ್ಮ ವಿರುದ್ಧದ ಹಗರಣಗಳ ತನಿಖೆಗೆ ಸಿಬಿಐ ಮುಂದಾಗುವುದನ್ನು ತಡೆಯಲು ಸಿದ್ದರಾಮಯ್ಯ ರಕ್ಷಣಾತ್ಮಕ ಹೆಜ್ಜೆ ಇಟ್ಟಿದ್ದಾರೆ.

ಕರ್ನಾಟಕ ಸಚಿವ ಸಂಪುಟದ ತಂತ್ರವೇನು?

ರಾಜ್ಯಪಾಲರು ಕೇಳಿದ ಮಾಹಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಚಿವ ಸಂಪುಟದ ಗಮನಕ್ಕೆ ತರದೇ ನೀಡುವಂತಿಲ್ಲ. ಇಷ್ಟೇ ಅಲ್ಲದೆ, ಅನಿವಾರ್ಯ ಸಂದರ್ಭದಲ್ಲಿ ರಾಜ್ಯಪಾಲರ ಪ್ರಶ್ನೆಗೆ ಉತ್ತರ ನೀಡದೇ ಇರುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಸರ್ಕಾರ ಹಾಗೂ ಸಿಎಂ ವಿರುದ್ಧದ ರಾಜ್ಯಪಾಲರ ಅಸ್ತ್ರಗಳಿಗೆ ಸಚಿವ ಸಂಪುಟ ಪ್ರತ್ಯಸ್ತ್ರ ಹೂಡಿದೆ.

ಇಷ್ಟೇ ಅಲ್ಲದೆ, ಸಿಬಿಐ ತನಿಖೆಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ. ಸಾಮಾನ್ಯವಾಗಿ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ರಾಜ್ಯಗಳಲ್ಲಿನ ಪ್ರಕರಣಗಳನ್ನು ಮುಕ್ತವಾಗಿ ತನಿಖೆ ನಡೆಸಲು ಸಿಬಿಐಗೆ (Delhi Special Police Establishment Act, 1946 ಅಡಿಯಲ್ಲಿ) ಅವಕಾಶವಿದೆ. ಇದೀಗ ಇದಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನೇ ಹಿಂಪಡೆದರೆ ಕರ್ನಾಟಕದಲ್ಲಿ ಅಪರಾಧ ಪ್ರಕರಣಗಳ ತನಿಖೆಗೆ ಸಿಬಿಐ ಮುಕ್ತ ಅವಕಾಶ ಇಲ್ಲವಾಗಲಿದೆ.

ಸಿಬಿಐ ಎಂಟ್ರಿಗೆ ಸಚಿವ ಸಂಪುಟ ಬ್ರೇಕ್: ಕಾರಣವೇನು?

ಮಹರ್ಷಿ ವಾಲ್ಮೀಕ ನಿಗಮದಲ್ಲಿ ಕೋಟಿ ಕೋಟಿ ಅಕ್ರಮ ನಡೆದಿರುವ ಬಗ್ಗೆ ಜಾರಿ ನಿರ್ದೇಶನಾಯಲ ಈಗಾಗಲೇ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ. ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜೀನಾಮೆ‌ ನೀಡಿಯಾಗಿದೆ. ಈ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿದೆ ಎಂದು ವಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಸಿಬಿಐ ತನಿಖೆಗೆ ಯೂನಿಯನ್ ಬ್ಯಾಂಕ್ ಕೂಡ ಒತ್ತಾಯ ಮಾಡಿದೆ. ಈ ಬೆಳವಣಿಗೆಗಳಿಂದಾಗಿ ಕೇಂದ್ರ ತನಿಖಾ ಸಂಸ್ಥೆ ಸಿದ್ದರಾಮಯ್ಯರತ್ತ ಮುಖ‌ಮಾಡಬಹುದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ. ಸರ್ಕಾರದ ಮಟ್ಟದಲ್ಲಿಯೂ ಜೋರಾಗಿ ಚರ್ಚೆ ನಡೆದಿದೆ. ಅಲ್ಲದೆ‌ ಮುಡಾ ಪ್ರಕರಣದಲ್ಲೂ ದೂರುದಾರರು ಸಿಬಿಐ ಬಾಗಿಲು ತಟ್ಟಬಹುದು ಎಂಬ ಆತಂಕ ಇದೆ. ಹೀಗಾಗಿ ಸಿಬಿಐಗಿದ್ದ ಮುಕ್ತ ತನಿಖಾ ಅವಕಾಶಕ್ಕೆ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ.

ರಾಜ್ಯಪಾಲರ ನಡೆಗೆ ಸರ್ಕಾರದಿಂದ ತಿರುಗೇಟು

ಸಿಬಿಐಗಿದ್ದ ಮುಕ್ತ ತನಿಖಾ ಅವಕಾಶಕ್ಕೆ ತಡೆಯೊಡ್ಡುವ ಮೂಲಕ, ಸರ್ಕಾರದ ವಿರುದ್ದ ಪತ್ರ ಸಮರ ಶುರು ಮಾಡಿದ್ದ ರಾಜ್ಯಪಾಲರಿಗೂ ತಿರುಗೇಟು ನೀಡಲು ಸಚಿವ ಸಂಪುಟ ಮುಂದಾಗಿದೆ. ಸಿಎಂ, ಸಚಿವರ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳ ಬಳಿ ಮಾಹಿತಿ ಕೇಳುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಭಾರಿ ಮುಜಗರ ಉಂಟಾಗಿದೆ. ಹೀಗಾಗಿ ರಾಜ್ಯಪಾಲರು ಕೇಳುವ ಮಾಹಿತಿ ಸಿಎಸ್ ಕೊಡುವಂತಿಲ್ಲ. ಸಚಿವ ಸಂಪುಟದ ಗಮನಕ್ಕೆ ತರಬೇಕು, ಕ್ಯಾಬಿನೆಟ್ ಮೂಲಕವೇ ಉತ್ತರ ಹೋಗಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇ ಎನ್ನಲೇಬೇಕು ಸಿದ್ದರಾಮಯ್ಯನವರೇ: ಹೀಗೆಂದಿದ್ದೇಕೆ ಕುಮಾರಸ್ವಾಮಿ!

ಆರ್ಕಾವತಿ ಸೇರಿದಂತೆ ಯಾವುದೆ ಮಾಹಿತಿ ನೀಡಬೇಕಾದರೂ ಕ್ಯಾಬಿನೆಟ್ ಮೂಲಕವೇ ಹೋಗಬೇಕು ಎಂದು ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ, ರಾಜ್ಯಪಾಲರ ನಡೆಗೆ ಸರ್ಕಾರ ತನ್ನ ಅಸಮಾಧಾನ ಹೊರ ಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 am, Fri, 27 September 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ