AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಂಗಲ್ ಕಾಟ: ಮಂಗಳೂರಿನಲ್ಲಿ ಅಲೆಗಳ ಅಬ್ಬರ, ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶ, ಕೊಡಗಿನಲ್ಲೂ ಆತಂಕ

ಫೆಂಗಲ್‌ ಸೈಕ್ಲೋನ್ ಪರಿಣಾಮ ಸುರಿಯುತ್ತಿರುವ ಅಕಾಲಿಕ ಮಳೆ ಕರ್ನಾಟಕದ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಮಂಗಳೂರಿನಲ್ಲಿ ಅರಬ್ಬೀ ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶವಾಗಿದೆ. ಕೋಲಾರದಲ್ಲಿ ರಾಗಿ ಪೈರು ಹೊಲದಲ್ಲೇ ಕೊಳೆಯುತ್ತಿದೆ. ರಾಜ್ಯದಲ್ಲಿ ಎಲ್ಲೆಲ್ಲಿ ಏನೇನಾಯ್ತು ಎಂಬ ವಿವರ ಇಲ್ಲಿದೆ.

ಫೆಂಗಲ್ ಕಾಟ: ಮಂಗಳೂರಿನಲ್ಲಿ ಅಲೆಗಳ ಅಬ್ಬರ, ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶ, ಕೊಡಗಿನಲ್ಲೂ ಆತಂಕ
ಕೋಲಾರದಲ್ಲಿ ರಾಗಿ ಪೈರು ನಾಶವಾಗಿರುವುದು
TV9 Web
| Edited By: |

Updated on: Dec 02, 2024 | 2:51 PM

Share

ಬೆಂಗಳೂರು, ಡಿಸೆಂಬರ್ 2: ಫೆಂಗಲ್‌ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಮೈಸೂರಿನಲ್ಲಿಯೂ ಜಿಟಿ ಜಿಟಿ ಮಳೆಯಾಗುತ್ತಿದ್ದು, ಮೈಸೂರಿನ ಜನರು ಹೈರಾಣಾಗಿದ್ದಾರೆ. ಮೈಸೂರಿನಲ್ಲಿ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಆದರೆ, ಮೈಸೂರು ವಿವಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕಾದ ಅನಿವಾರ್ಯತೆ ಉಂಟಾಗಿತ್ತು.

ಮಂಗಳೂರಿನಲ್ಲಿ ಅಲೆಗಳ ಅಬ್ಬರ

ಬಂಗಾಳಕೊಲ್ಲಿಯ ಫೆಂಗಲ್ ಚಂಡಮಾರುತದ ಪರಿಣಾಮ ಅರಬ್ಬೀ ಸಮುದ್ರಕ್ಕೂ ತಟ್ಟಿದೆ. ದಕ್ಷಿಣ ಕನ್ನಡದ ಸೋಮೇಶ್ವರ, ಬಟ್ಟಪಾಡಿಯ ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಗಂಟೆಗೆ 30ರಿಂದ 35 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶ

ಚಿಕ್ಕಬಳ್ಳಾಪುರದಲ್ಲಿ ಹಾಸುಹೊಕ್ಕಾಗಿ ಬೆಳೆದಿದ್ದ ರಾಗಿ ಬೆಳೆಯನ್ನು ಮಳೆ ನಾಶಪಡಿಸಿದೆ. ನಿರಂತರವಾಗಿ ಮಳೆಯಾಗುತ್ತಿದ್ದು, ರಾಗಿ ಬೆಳೆ ಜಮೀನಿನಲ್ಲೇ ಹಾಳಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತದ ಸ್ಥಿತಿ ನಿರ್ಮಾಣವಾಗಿದೆ.

ಜಿಟಿ ಜಿಟಿ ಮಳೆಯಿಂದ ಕ್ಯಾರೆಟ್, ಬೀಟ್‌ರೂಟ್, ಹೂಕೋಸು, ಆಲೂಗಡ್ಡೆಯೂ ಕೊಳೆಯುವ ಸ್ಥಿತಿಗೆ ಬಂದಿದೆ. ಹಿರೇಕಾಯಿ, ಹಾಗಲಕಾಯಿ, ಸೊರೇಕಾಯಿ, ಬದನೆಕಾಯಿ ಮತ್ತು ಬೀನ್ಸ್‌ಗೆ ರೋಗಬಾಧೆ ತಟ್ಟುವ ಆತಂಕ ಎದುರಾಗಿದೆ. ತಂಪಾದ ವಾತಾವರಣ ಇರುವುದರಿಂದ ಔಷಧ ಸಿಂಪಡಣೆಗೂ ಅಡ್ಡಿಯಾಗುತ್ತಿದೆ. ಹೂವಿನ ತೋಟವೂ ಜಲಯಮವಾಗಿದ್ದು, ರೋಜ, ಸೇವಂತಿ, ಚೆಂಡು ಹೂವು ಬೆಳೆ ಮಳೆಯಿಂದ ನಾಶವಾಗಿವೆ.

ಕೋಲಾರದಲ್ಲೂ ಕೊಳೆಯುತ್ತಿದೆ ರಾಗಿ ಪೈರು

ಕೋಲಾರದಲ್ಲೂ ಭಾರಿ ಮಳೆಯಿಂದಾಗಿ ರಾಗಿ ಪೈರು ಹೊಲದಲ್ಲೇ ಕೊಳೆಯುತ್ತಿದೆ. ಮಳೆಯಿಂದ ರಾಗಿ ತೆನೆ ಮೊಳಕೆಯೊಡೆಯುತ್ತಿದ್ದು ರೈತರು ಕಂಗಾಲಾಗಿದ್ದಾರೆ.

ಕೊಡಗಿನಲ್ಲಿ ಕಾಫಿ, ಭತ್ತ ನಾಶದ ಆತಂಕ

ಕೊಡಗಿನಲ್ಲೂ ತುಂತುರು ಮಳೆಯಾಗುತ್ತಿದ್ದು, ಕಾಫಿ ಮತ್ತು ಭತ್ತದ ಬೆಳೆ ನಾಶವಾಗುವ ಆತಂಕ ಎದುರಾಗಿದೆ. ಕೊಯ್ಲಿಗೆ ಬಂದಿರುವ ಕಾಫಿ ಮತ್ತು ಭತ್ತ ಗದ್ದೆಯಲ್ಲೇ ಮೊಳಕೆ ಒಡೆಯುತ್ತಿದ್ದು, ರೋಗದ ಆತಂಕ ಬಂದೊದಗಿದೆ. ಇದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ ಕೆಲವಡೆ ಇನ್ನೂ 2 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಸೇರಿ ಕರ್ನಾಟಕದ ಕೆಲವಡೆ ಇನ್ನೂ 2 ದಿನ ಮಳೆ ಮುನ್ಸೂಚನೆ ನೀಡಿದ್ದು, ರೈತರನ್ನು ಕಂಗಾಲಾಗಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ