AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಂಗಲ್ ಕಾಟ: ಮಂಗಳೂರಿನಲ್ಲಿ ಅಲೆಗಳ ಅಬ್ಬರ, ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶ, ಕೊಡಗಿನಲ್ಲೂ ಆತಂಕ

ಫೆಂಗಲ್‌ ಸೈಕ್ಲೋನ್ ಪರಿಣಾಮ ಸುರಿಯುತ್ತಿರುವ ಅಕಾಲಿಕ ಮಳೆ ಕರ್ನಾಟಕದ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಮಂಗಳೂರಿನಲ್ಲಿ ಅರಬ್ಬೀ ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶವಾಗಿದೆ. ಕೋಲಾರದಲ್ಲಿ ರಾಗಿ ಪೈರು ಹೊಲದಲ್ಲೇ ಕೊಳೆಯುತ್ತಿದೆ. ರಾಜ್ಯದಲ್ಲಿ ಎಲ್ಲೆಲ್ಲಿ ಏನೇನಾಯ್ತು ಎಂಬ ವಿವರ ಇಲ್ಲಿದೆ.

ಫೆಂಗಲ್ ಕಾಟ: ಮಂಗಳೂರಿನಲ್ಲಿ ಅಲೆಗಳ ಅಬ್ಬರ, ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶ, ಕೊಡಗಿನಲ್ಲೂ ಆತಂಕ
ಕೋಲಾರದಲ್ಲಿ ರಾಗಿ ಪೈರು ನಾಶವಾಗಿರುವುದು
TV9 Web
| Updated By: Ganapathi Sharma|

Updated on: Dec 02, 2024 | 2:51 PM

Share

ಬೆಂಗಳೂರು, ಡಿಸೆಂಬರ್ 2: ಫೆಂಗಲ್‌ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಮೈಸೂರಿನಲ್ಲಿಯೂ ಜಿಟಿ ಜಿಟಿ ಮಳೆಯಾಗುತ್ತಿದ್ದು, ಮೈಸೂರಿನ ಜನರು ಹೈರಾಣಾಗಿದ್ದಾರೆ. ಮೈಸೂರಿನಲ್ಲಿ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಆದರೆ, ಮೈಸೂರು ವಿವಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕಾದ ಅನಿವಾರ್ಯತೆ ಉಂಟಾಗಿತ್ತು.

ಮಂಗಳೂರಿನಲ್ಲಿ ಅಲೆಗಳ ಅಬ್ಬರ

ಬಂಗಾಳಕೊಲ್ಲಿಯ ಫೆಂಗಲ್ ಚಂಡಮಾರುತದ ಪರಿಣಾಮ ಅರಬ್ಬೀ ಸಮುದ್ರಕ್ಕೂ ತಟ್ಟಿದೆ. ದಕ್ಷಿಣ ಕನ್ನಡದ ಸೋಮೇಶ್ವರ, ಬಟ್ಟಪಾಡಿಯ ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಗಂಟೆಗೆ 30ರಿಂದ 35 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ರಾಗಿ ಬೆಳೆ ನಾಶ

ಚಿಕ್ಕಬಳ್ಳಾಪುರದಲ್ಲಿ ಹಾಸುಹೊಕ್ಕಾಗಿ ಬೆಳೆದಿದ್ದ ರಾಗಿ ಬೆಳೆಯನ್ನು ಮಳೆ ನಾಶಪಡಿಸಿದೆ. ನಿರಂತರವಾಗಿ ಮಳೆಯಾಗುತ್ತಿದ್ದು, ರಾಗಿ ಬೆಳೆ ಜಮೀನಿನಲ್ಲೇ ಹಾಳಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತದ ಸ್ಥಿತಿ ನಿರ್ಮಾಣವಾಗಿದೆ.

ಜಿಟಿ ಜಿಟಿ ಮಳೆಯಿಂದ ಕ್ಯಾರೆಟ್, ಬೀಟ್‌ರೂಟ್, ಹೂಕೋಸು, ಆಲೂಗಡ್ಡೆಯೂ ಕೊಳೆಯುವ ಸ್ಥಿತಿಗೆ ಬಂದಿದೆ. ಹಿರೇಕಾಯಿ, ಹಾಗಲಕಾಯಿ, ಸೊರೇಕಾಯಿ, ಬದನೆಕಾಯಿ ಮತ್ತು ಬೀನ್ಸ್‌ಗೆ ರೋಗಬಾಧೆ ತಟ್ಟುವ ಆತಂಕ ಎದುರಾಗಿದೆ. ತಂಪಾದ ವಾತಾವರಣ ಇರುವುದರಿಂದ ಔಷಧ ಸಿಂಪಡಣೆಗೂ ಅಡ್ಡಿಯಾಗುತ್ತಿದೆ. ಹೂವಿನ ತೋಟವೂ ಜಲಯಮವಾಗಿದ್ದು, ರೋಜ, ಸೇವಂತಿ, ಚೆಂಡು ಹೂವು ಬೆಳೆ ಮಳೆಯಿಂದ ನಾಶವಾಗಿವೆ.

ಕೋಲಾರದಲ್ಲೂ ಕೊಳೆಯುತ್ತಿದೆ ರಾಗಿ ಪೈರು

ಕೋಲಾರದಲ್ಲೂ ಭಾರಿ ಮಳೆಯಿಂದಾಗಿ ರಾಗಿ ಪೈರು ಹೊಲದಲ್ಲೇ ಕೊಳೆಯುತ್ತಿದೆ. ಮಳೆಯಿಂದ ರಾಗಿ ತೆನೆ ಮೊಳಕೆಯೊಡೆಯುತ್ತಿದ್ದು ರೈತರು ಕಂಗಾಲಾಗಿದ್ದಾರೆ.

ಕೊಡಗಿನಲ್ಲಿ ಕಾಫಿ, ಭತ್ತ ನಾಶದ ಆತಂಕ

ಕೊಡಗಿನಲ್ಲೂ ತುಂತುರು ಮಳೆಯಾಗುತ್ತಿದ್ದು, ಕಾಫಿ ಮತ್ತು ಭತ್ತದ ಬೆಳೆ ನಾಶವಾಗುವ ಆತಂಕ ಎದುರಾಗಿದೆ. ಕೊಯ್ಲಿಗೆ ಬಂದಿರುವ ಕಾಫಿ ಮತ್ತು ಭತ್ತ ಗದ್ದೆಯಲ್ಲೇ ಮೊಳಕೆ ಒಡೆಯುತ್ತಿದ್ದು, ರೋಗದ ಆತಂಕ ಬಂದೊದಗಿದೆ. ಇದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ ಕೆಲವಡೆ ಇನ್ನೂ 2 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಸೇರಿ ಕರ್ನಾಟಕದ ಕೆಲವಡೆ ಇನ್ನೂ 2 ದಿನ ಮಳೆ ಮುನ್ಸೂಚನೆ ನೀಡಿದ್ದು, ರೈತರನ್ನು ಕಂಗಾಲಾಗಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ