AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ, ಯಾರಿಗೆ ಬೀಳುತ್ತೆ ವಿಜಯ ಮಾಲೆ?

ಇಂದು ಹೊರಬೀಳಲಿರೋ ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದತ್ತಲೇ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಸ್ಥಳೀಯ ಸಂಸ್ಥೆಗಳ ಪಲಿತಾಂಶ ನೇರ ಪರಿಣಾಮ ಬೀರದಿದ್ರೂ, ಸ್ಥಳೀಯ ಮಟ್ಟದಲ್ಲಿ ಪಕ್ಷದ ಬಲಾಬಲ ಇದರ ಆಧಾರದಲ್ಲೇ ನಿರ್ಧಾರವಾಗಲಿದೆ.

58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ, ಯಾರಿಗೆ ಬೀಳುತ್ತೆ ವಿಜಯ ಮಾಲೆ?
58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ, ಯಾರಿಗೆ ಬೀಳುತ್ತೆ ವಿಜಯ ಮಾಲೆ?
TV9 Web
| Edited By: |

Updated on: Dec 30, 2021 | 8:36 AM

Share

ಬೆಂಗಳೂರು: ರಾಜ್ಯದಲ್ಲಿ ಡಿ.27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಇದು ಮೂರೂ ಪಕ್ಷಗಳಿಗೆ ಬಹಳ ಮುಖ್ಯವಾಗಿದೆ. ತಳಮಟ್ಟದಲ್ಲಿ ಪಕ್ಷದ ಬಲಾಬಲವನ್ನು ಈ ಫಲಿತಾಂಶವೇ ಹೇಳಲಿರೋದ್ರಿಂದ, ಬಿಜೆಪಿ, ಕಾಂಗ್ರೆಸ್ ನಡುವೆ ನಾನಾ ಲೆಕ್ಕಾಚಾರಗಳು ಶುರುವಾಗಿವೆ. ಆದ್ರೆ ಜೆಡಿಎಸ್ ಮಾತ್ರ ಈ ಬಾರಿಯೂ ತನ್ನದೇ ಆದ ಗೇಮ್ ಪ್ಲ್ಯಾನ್ನಲ್ಲಿದೆ.

ಲೋಕಲ್ವಾರ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಯಾರ ಕೈ ಮೇಲಾಗುತ್ತೆ, ಯಾರು ಮಕಾಡೆ ಮಲಗ್ತಾರೇ ಅನ್ನೋ ಲೆಕ್ಕಾಚಾರ ನಡೀತಿದೆ. ಪರಿಷತ್ ಕದನದ ಬಳಿಕ ನಡೆದಿರೋ ಸ್ಥಳೀಯ ಸಂಸ್ಥೆಗಳ ಫಲಿತಾಂಶದತ್ತ ಪಕ್ಷಗಳ ಗಮನ ಕೇಂದ್ರೀಕೃತವಾಗಿದೆ.

‘ಲೋಕಲ್ ಲಡಾಯಿ’ಯಲ್ಲಿ ಯಾರಿಗೆ ಬೀಳುತ್ತೆ ವಿಜಯ ಮಾಲೆ? ಇಂದು ಹೊರಬೀಳಲಿರೋ ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದತ್ತಲೇ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಸ್ಥಳೀಯ ಸಂಸ್ಥೆಗಳ ಪಲಿತಾಂಶ ನೇರ ಪರಿಣಾಮ ಬೀರದಿದ್ರೂ, ಸ್ಥಳೀಯ ಮಟ್ಟದಲ್ಲಿ ಪಕ್ಷದ ಬಲಾಬಲ ಇದರ ಆಧಾರದಲ್ಲೇ ನಿರ್ಧಾರವಾಗಲಿದೆ. ಹೀಗಾಗಿ ಲೋಕಲ್ ಫೈಟ್ನ ರಿಸಲ್ಟ್ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರೂ ಪಕ್ಷಗಳಿಗೂ ಪ್ರತಿಷ್ಠೆ ಪ್ರಶ್ನೆಯಾಗಿದೆ.

‘ಲೋಕಲ್ ಸಮರ’ದಲ್ಲಿ ಯಾರಿಗೆ ಜಯ? ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಡುವೆ ಚುನಾವಣೆ ನಡೆದಿದ್ದ ಕಾರಣ ಪ್ರಚಾರದಲ್ಲಿ ಪಕ್ಷಗಳ ಪ್ರಮುಖ ನಾಯಕರೇ ಭಾಗಿಯಾಗಿರಲಿಲ್ಲ. ಕೇವಲ 3-4 ಸಚಿವರಿಂದಷ್ಟೇ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ರು. ಹೀಗಾಗಿ ಸ್ಥಳೀಯ ನಾಯಕರ ಮುತುವರ್ಜಿಯಲ್ಲೇ ಚುನಾವಣೆ ನಡೆದಿತ್ತು. ಇನ್ನು ರಾಜ್ಯದಲ್ಲಿ ಆಡಳಿತ ಪಕ್ಷವಾಗಿರೋ ಬಿಜೆಪಿ, ಸಹಜವಾಗಿ ಹೆಚ್ಚು ಸ್ಥಾನ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ವಿಪಕ್ಷ ಕಾಂಗ್ರೆಸ್ ಕೂಡ ಹೆಚ್ಚು ಸ್ಥಾನ ಗೆದ್ದು ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಪ್ಲ್ಯಾನ್ ಮಾಡಿಕೊಳ್ತಿದೆ. ಜೆಡಿಎಸ್ ಮಾತ್ರ ಈ ಬಾರಿಯೂ ಅಧಿಕಾರ ಹಿಡಿಯುವಲ್ಲಿ ಕಿಂಗ್ಮೇಕರ್ ಆಗೋ ಲೆಕ್ಕಾಚಾರದಲ್ಲಿದೆ ಎನ್ನಲಾಗ್ತಿದೆ.

ಒಟ್ನಲ್ಲಿ ಇಂದಿನ ಚುನಾವಣಾ ಫಲಿತಾಂಶದ ಮೇಲೆ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಯಾರ ಪಾರಮ್ಯ ಎಂಬುದಕ್ಕಷ್ಟೇ ಸೀಮಿತವಾಗಲಿರೋ ಚುನಾವಣೆಯಲ್ಲಿ, ಯಾರಿಗೆ ವಿಜಯ ಮಾಲೆ ಬೀಳುತ್ತೆ ಅನ್ನೋದು ಇನ್ನು ಕೆಲ ಸಮಯದಲ್ಲಿಯೇ ಗೊತ್ತಾಗಲಿದೆ.

ಇದನ್ನೂ ಓದಿ: Happiness Strategies: ಸದಾ ಖುಷಿಯಾಗಿರಲು ಈ ಮೂರು ನಿಯಮಗಳನ್ನು ಅಳವಡಿಸಿಕೊಳ್ಳಿ: ನಗುತ್ತಿರಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ