AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSHDCL ಅಧ್ಯಕ್ಷ-ಎಂಡಿ ಕಿತ್ತಾಟದ ವೀಡಿಯೊ: ತಾನು ಆತ್ಮಹತ್ಯೆ ಮಾಡಿಕೊಂಡರೆ ಡಿ. ರೂಪಾ ಕಾರಣ ಎಂದಿರುವ ಅಧ್ಯಕ್ಷ ರಾಘವೇಂದ್ರ ಶೆಟ್ಟಿ

KSHDCL ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮತ್ತು ಎಂ.ಡಿ. ರೂಪಾ ಮೌದ್ಗಿಲ್ ಫೈಟ್​​ ತಾರಕಕ್ಕೇರಿದೆ. ಮೇ 27ರಂದು ನಡೆದಿದ್ದ ನಿಗಮದ ವಾರ್ಷಿಕ ಸಭೆಯಲ್ಲಿ ಕಿತ್ತಾಟ ಜೋರಾಗಿಯೆ ನಡೆದಿದೆ. ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆ ಎಂ.ಡಿ. ರೂಪಾ ಮೌದ್ಗಿಲ್ ಕಾರಣ ಎಂದು ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಪದೇ ಪದೇ ಹೇಳುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವೇಳೆ ಎಂಡಿ ರೂಪಾ ಸಭೆಯಿಂದ ಎದ್ದು ಹೋಗಿರುವುದೂ ಕಾಣಬರುತ್ತದೆ.

KSHDCL ಅಧ್ಯಕ್ಷ-ಎಂಡಿ ಕಿತ್ತಾಟದ ವೀಡಿಯೊ: ತಾನು ಆತ್ಮಹತ್ಯೆ ಮಾಡಿಕೊಂಡರೆ ಡಿ. ರೂಪಾ ಕಾರಣ ಎಂದಿರುವ ಅಧ್ಯಕ್ಷ ರಾಘವೇಂದ್ರ ಶೆಟ್ಟಿ
KSHDCL ಅಧ್ಯಕ್ಷ, ಎಂಡಿ ಕಿತ್ತಾಟದ ವೀಡಿಯೊ: ತಾನು ಆತ್ಮಹತ್ಯೆ ಮಾಡಿಕೊಂಡರೆ ಡಿ. ರೂಪಾ ಕಾರಣ ಎಂದಿರುವ ಅಧ್ಯಕ್ಷ ರಾಘವೇಂದ್ರ ಶೆಟ್ಟಿ
ಸಾಧು ಶ್ರೀನಾಥ್​
|

Updated on:Jun 02, 2022 | 7:28 PM

Share

ಬೆಂಗಳೂರು: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ಮತ್ತು ನಿಗಮದ ಅಧ್ಯಕ್ಷ ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿದ್ದು, ಎಂಡಿ ರೂಪಾ ಮೌದ್ಗಿಲ್ (IPS D Roopa Moudgil) ಮತ್ತು ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ (Belur Raghavendra Shetty) ನಡುವಣ ಜಟಾಪಟಿ ಮುಂದುವರಿದಿದೆ. ನಿಗಮದ ಆಯಕಟ್ಟಿನ ಜಾಗದಲ್ಲಿ ಕುಳಿತು ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿರುವ ಇಬ್ಬರೂ ತೂ ತೂ ಮೈ ಮೈ ಅನ್ನುತ್ತಿದ್ದಾರೆ (Misappropriation). IPS ರೂಪಾ ಮೌದ್ಗಿಲ್ ಮತ್ತು ಜನಪ್ರತಿನಿಧಿ ಬೇಳೂರು ರಾಘವೇಂದ್ರ ಶೆಟ್ಟಿ ಇಬ್ಬರೂ ಪ್ರತಿಷ್ಠೆಯ ವಿಷಯವಾಗಿಸಿಕೊಂಡಿದ್ದಾರೆ (Karnataka Handicrafts Development Corporation – Cauvery Handicrafts -KSHDCL).

ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ರಾಘವೇಂದ್ರ ಶೆಟ್ಟಿ ಮತ್ತು ಎಂ.ಡಿ. ರೂಪಾ ಮೌದ್ಗಿಲ್ ನಡುವಣ ಫೈಟ್​​ ತಾರಕಕ್ಕೇರಿದೆ. ಮೇ 27ರಂದು ನಡೆದಿದ್ದ ನಿಗಮದ ವಾರ್ಷಿಕ ಆಡಳಿತ ಮಂಡಳಿ ಸಭೆಯಲ್ಲಿ ಕಿತ್ತಾಟ ಜೋರಾಗಿಯೆ ನಡೆದಿದೆ. ಸಭೆಯಲ್ಲಿ ಅಧ್ಯಕ್ಷ ಮತ್ತು ಎಂಡಿ ಕಿತ್ತಾಟದ ವೀಡಿಯೊ ಇದೀಗ ಬಹಿರಂಗಗೊಂಡಿದೆ. ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆ IPS ರೂಪಾ ಮೌದ್ಗಿಲ್ ಕಾರಣ ಎಂದು ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಪದೇ ಪದೇ ಹೇಳುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವೇಳೆ ಎಂಡಿ ರೂಪಾ ಸಭೆಯಿಂದ ಎದ್ದು ಹೋಗಿರುವುದೂ ಕಾಣಬರುತ್ತದೆ.

ಬೇಳೂರು ರಾಘವೇಂದ್ರ ಶೆಟ್ಟಿ ಮಾಡಿರುವ ಇತರೆ ಆರೋಪಗಳು ಏನೇನು:

ಐಪಿಎಸ್​ ಅಧಿಕಾರಿ ಡಿ.ರೂಪಾ 2 ದಿನಕ್ಕೊಮ್ಮೆ ಕಚೇರಿ​ಗೆ ಬರ್ತಾರೆ. ಫೈಲ್​​ಗಳನ್ನು ತರಿಸಿಕೊಂಡು ಮನೆಯಲ್ಲೇ‌ ಕೆಲಸ‌ ಮಾಡ್ತಾರೆ ಎಂದು ವಿಧಾನಸೌಧದಲ್ಲಿ ಬೇಳೂರು ರಾಘವೇಂದ್ರ ಶೆಟ್ಟಿ ಆರೋಪ ಮಾಡಿದ್ದಾರೆ. ನಿಗಮದ ಅಧ್ಯಕ್ಷರಾದ ನನಗೆ ಕಚೇರಿ ದಾಖಲೆಗಳನ್ನು ಕೊಡುವುದಿಲ್ಲ. ನನ್ನ ಕಚೇರಿಯಲ್ಲಿ ಸಿಸಿ ಕ್ಯಾಮರಾ ಕನೆಕ್ಷನ್ ಕಡಿತಗೊಳಿಸಿದ್ದಾರೆ. 5 ಕೋಟಿ ರೂಪಾಯಿ ಅವ್ಯವಹಾರ‌ ನನ್ನ ಅವಧಿಯಲ್ಲಿ ಆಗಿಲ್ಲ. ಇದರಿಂದ ರೂಪಾ ಅವರ ಮುಖವಾಡ ಈಗ ಕಳಚಿ ಬಿದ್ದಿದೆ ಎಂದು ಬೇಳೂರು ರಾಘವೇಂದ್ರ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ನನ್ನ ವಿರುದ್ಧ 5 ಕೋಟಿ ರೂ. ಅವ್ಯವಹಾರ ಆರೋಪ ಮಾಡಿದ್ದಾರೆ. ಡಿ.ರೂಪಾ ಬಳಿ ಒಂದೇ ಒಂದು ದಾಖಲೆಯಿದ್ರೆ ಬಿಡುಗಡೆ ಮಾಡಲಿ. ಮಹಿಳಾ ಸಿಬ್ಬಂದಿ ನೇಮಿಸಲು ಕೇಳಿದ್ದೇನೆ ಅಂತ ಆರೋಪಿಸಿದ್ದಾರೆ. ಕಚೇರಿಗೆ ಟೈಪಿಸ್ಟ್ ನೇಮಕ‌ ಮಾಡುವಂತೆ ಕೇಳಿದ್ದು ತಪ್ಪಾ? ಇದರ‌ ಬಗ್ಗೆಯೂ ಇಷ್ಟು ಕೀಳಾಗಿ ಮಾತಾಡಿರೋದು ಎಷ್ಟು ಸರಿ? ಬೆಲೆಬಾಳುವ ವಸ್ತುಗಳನ್ನು ನಾನು ತೆಗೆದುಕೊಂಡು ಹೋಗಿಲ್ಲ. ಬದಲಿಗೆ ನಾನೇ ನಿಗಮಕ್ಕೆ ಒಂದಷ್ಟು ವಸ್ತುಗಳನ್ನು ಕೊಟ್ಟಿದ್ದೇನೆ. ಅದಕ್ಕೆ ಬೇಕಾದ ಸ್ಲಿಪ್ ಗಳೂ ನನ್ನ ಬಳಿ ಇವೆ ಎಂದು ಬೇಳೂರು ರಾಘವೇಂದ್ರ ಶೆಟ್ಟಿ ಹೇಳಿದ್ದಾರೆ.

Published On - 7:15 pm, Thu, 2 June 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು