AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ

Govind Karjol: ತಮ್ಮ ಪಕ್ಷದ ಪ್ರಚಲಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ  ಅವರು ನಮ್ಮಲ್ಲಿ ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿಯವರು ಸ್ವಂತ ಕೆಲಸದ ಮೇಲೆ ದೆಹಲಿಗೆ ಹೊರಟಿದ್ದಾರೆ. ರಾಜೀನಾಮೆ ಬಗ್ಗೆ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು. 

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಸಹ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ
TV9 Web
| Updated By: ಸಾಧು ಶ್ರೀನಾಥ್​|

Updated on:Jun 22, 2021 | 4:36 PM

Share

ಧಾರವಾಡ: ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೂ ಮುಕ್ಕಾಲು ವರ್ಷ ಇದೆ.  ಚುನಾವಣೆ ಬಳಿಕ ಬಹುಮತ ಬಂದವರು ಮುಖ್ಯಮಂತ್ರಿ ಆಗುತ್ತಾರೆ. ಆದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಮಧ್ಯೆ ಕುಸ್ತಿ ಶುರುವಾಗಿದೆ ಎಂದು ಧಾರವಾಡದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. 

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​  ಮಧ್ಯದಲ್ಲಿ ಒಬ್ಬರು ಇಣುಕು ಹಾಕುತ್ತಿದ್ದಾರೆ. ಡಾ. ಜಿ. ಪರಮೇಶ್ವರ್​ ಕಷ್ಟದ ದಿನಗಳಲ್ಲಿ ಅಧ್ಯಕ್ಷರಾಗಿದ್ದವರು. ಇನ್ನೇನು ಮುಖ್ಯಮಂತ್ರಿ ಆಗಬೇಕು ಎನ್ನುವಾಗಲೇ ಅವರನ್ನು ಸೋಲಿಸಿದ್ದರು. ಈಗ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗುವ ಚಿಂತನೆಯಲ್ಲಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಸದ್ಯದ ಪರಿಸ್ಥಿತಿ ಬಗ್ಗೆ ವ್ಯಂಗ್ಯವಾಡಿದರು. ​

ಇನ್ನು ತಮ್ಮ ಪಕ್ಷದ ಪ್ರಚಲಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ  ಅವರು ನಮ್ಮಲ್ಲಿ ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿಯವರು ಸ್ವಂತ ಕೆಲಸದ ಮೇಲೆ ದೆಹಲಿಗೆ ಹೊರಟಿದ್ದಾರೆ. ರಾಜೀನಾಮೆ ಬಗ್ಗೆ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇದ್ರ ಫಡ್ನವೀಸ್​ ಅವರು  ರಮೇಶ ಜಾರಕಿಹೊಳಿಗೆ ಮೊದಲಿನಿಂದಲೂ ಪರಿಚಯ. ಆಗಾಗ ಭೇಟಿ ಆಗುತ್ತಲೇ ಇರುತ್ತಾರೆ. ಬೆಳಗಾವಿಯಲ್ಲಿದ್ದವರಿಗೆ ಮಹಾರಾಷ್ಟ್ರ ಸಂಪರ್ಕ ಜಾಸ್ತಿ. ಬೆಳಗಾವಿ ರಾಜಕೀಯ ನಾಯಕರು ಮಹಾರಾಷ್ಟ್ರ ರಾಜಕೀಯ ನಾಯಕರನ್ನು ಆಗಾಗ ಭೇಟಿಯಾಗುತ್ತಾ ಇರುತ್ತಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ  ಸಮಜಾಯಿಷಿ ನೀಡಿದರು.

(Fight for chief minister among siddaramaiah, dk shivakumar and g parameshwara says dcm govind karjol)

Published On - 4:35 pm, Tue, 22 June 21

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ