AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ

Govind Karjol: ತಮ್ಮ ಪಕ್ಷದ ಪ್ರಚಲಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ  ಅವರು ನಮ್ಮಲ್ಲಿ ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿಯವರು ಸ್ವಂತ ಕೆಲಸದ ಮೇಲೆ ದೆಹಲಿಗೆ ಹೊರಟಿದ್ದಾರೆ. ರಾಜೀನಾಮೆ ಬಗ್ಗೆ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು. 

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಸಹ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ
TV9 Web
| Edited By: |

Updated on:Jun 22, 2021 | 4:36 PM

Share

ಧಾರವಾಡ: ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೂ ಮುಕ್ಕಾಲು ವರ್ಷ ಇದೆ.  ಚುನಾವಣೆ ಬಳಿಕ ಬಹುಮತ ಬಂದವರು ಮುಖ್ಯಮಂತ್ರಿ ಆಗುತ್ತಾರೆ. ಆದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಮಧ್ಯೆ ಕುಸ್ತಿ ಶುರುವಾಗಿದೆ ಎಂದು ಧಾರವಾಡದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. 

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​  ಮಧ್ಯದಲ್ಲಿ ಒಬ್ಬರು ಇಣುಕು ಹಾಕುತ್ತಿದ್ದಾರೆ. ಡಾ. ಜಿ. ಪರಮೇಶ್ವರ್​ ಕಷ್ಟದ ದಿನಗಳಲ್ಲಿ ಅಧ್ಯಕ್ಷರಾಗಿದ್ದವರು. ಇನ್ನೇನು ಮುಖ್ಯಮಂತ್ರಿ ಆಗಬೇಕು ಎನ್ನುವಾಗಲೇ ಅವರನ್ನು ಸೋಲಿಸಿದ್ದರು. ಈಗ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗುವ ಚಿಂತನೆಯಲ್ಲಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಸದ್ಯದ ಪರಿಸ್ಥಿತಿ ಬಗ್ಗೆ ವ್ಯಂಗ್ಯವಾಡಿದರು. ​

ಇನ್ನು ತಮ್ಮ ಪಕ್ಷದ ಪ್ರಚಲಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ  ಅವರು ನಮ್ಮಲ್ಲಿ ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿಯವರು ಸ್ವಂತ ಕೆಲಸದ ಮೇಲೆ ದೆಹಲಿಗೆ ಹೊರಟಿದ್ದಾರೆ. ರಾಜೀನಾಮೆ ಬಗ್ಗೆ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇದ್ರ ಫಡ್ನವೀಸ್​ ಅವರು  ರಮೇಶ ಜಾರಕಿಹೊಳಿಗೆ ಮೊದಲಿನಿಂದಲೂ ಪರಿಚಯ. ಆಗಾಗ ಭೇಟಿ ಆಗುತ್ತಲೇ ಇರುತ್ತಾರೆ. ಬೆಳಗಾವಿಯಲ್ಲಿದ್ದವರಿಗೆ ಮಹಾರಾಷ್ಟ್ರ ಸಂಪರ್ಕ ಜಾಸ್ತಿ. ಬೆಳಗಾವಿ ರಾಜಕೀಯ ನಾಯಕರು ಮಹಾರಾಷ್ಟ್ರ ರಾಜಕೀಯ ನಾಯಕರನ್ನು ಆಗಾಗ ಭೇಟಿಯಾಗುತ್ತಾ ಇರುತ್ತಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ  ಸಮಜಾಯಿಷಿ ನೀಡಿದರು.

(Fight for chief minister among siddaramaiah, dk shivakumar and g parameshwara says dcm govind karjol)

Published On - 4:35 pm, Tue, 22 June 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ