Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ: ಸಚಿವ ಸಿ.ಸಿ. ಪಾಟೀಲ್

ಬೆಂಗಳೂರಿನಲ್ಲಿ ಸೂಕ್ತ ಜಾಗ ಸಿಗದ ಹಿನ್ನೆಲೆ ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ವಿಧಾನ ಪರಿಷತ್‌ನಲ್ಲಿ ಸಚಿವ ಸಿ.ಸಿ. ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ: ಸಚಿವ ಸಿ.ಸಿ. ಪಾಟೀಲ್
ಸಿ.ಸಿ. ಪಾಟೀಲ್
Follow us
preethi shettigar
|

Updated on:Mar 17, 2021 | 7:14 PM

ಬೆಂಗಳೂರು: ಫಿಲ್ಮ್ ಸಿಟಿ ನಿರ್ಮಾಣ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಪರಿಷತ್ ಸದಸ್ಯ ಸಂದೇಶ್ ನಾಗರಾಜ ಪ್ರಶ್ನೆಗೆ ಉತ್ತರಿಸಿದ ಸಚಿವ ಸಿ.ಸಿ.ಪಾಟೀಲ್ ಮೈಸೂರು ಜಿಲ್ಲೆಯ ಹಿಮ್ಮಾವಿನಲ್ಲೇ ಫಿಲ್ಮ್ ಸಿಟಿ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ವಿಧಾನ ಪರಿಷತ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಘೋಷಣೆ ಮಾಡಿ, ಹಿಮ್ಮಾವಿನ 110 ಎಕರೆ ಜಮೀನಿನಲ್ಲಿ ಶಂಕು ಸ್ಥಾಪನೆ ಮಾಡಲಾಗಿತ್ತು. ಬಳಿಕ ಕುಮಾರ ಸ್ವಾಮಿ ಸರ್ಕಾರದಲ್ಲಿ ರಾಮನಗರದಲ್ಲಿ ಫಿಲ್ಮ್ ಸಿಟಿ ಮಾಡಲು ತೀರ್ಮಾನ ಮಾಡಲಾಗಿತ್ತು. ಬಳಿಕ ಯಡಿಯೂರಪ್ಪ ಸರ್ಕಾರದಲ್ಲಿ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಮಾಡಲು ತೀರ್ಮಾನ ಮಾಡಲಾಗಿತ್ತು. ಈಗ ಬೆಂಗಳೂರಿನಲ್ಲಿ ಸೂಕ್ತ ಜಾಗ ಸಿಗದ ಹಿನ್ನೆಲೆ ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ವಿಧಾನಪರಿಷತ್‌ನಲ್ಲಿ ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಸಂತಸ: ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರಮಾಡುವುದಕ್ಕೆ ಸದ್ಯ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಸಂತಸ ವ್ಯಕ್ತಪಡಿಸಿದ್ದು, ಮೈಸೂರಿನಲ್ಲೇ ಚಿತ್ರನಗರಿ ಸ್ಥಾಪನೆ ಮಾಡುವ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಯಡಿಯೂರಪ್ಪ ಹಾಗೂ ಸಿಸಿ ಪಾಟೀಲ್​ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ಕರ್ನಾಟಕದಲ್ಲಿ ಸಿನಿಮಾ ಉದ್ಯಮ ವ್ಯಾಪಕವಾಗಿ ಬೆಳೆದಿದ್ದರೂ ಸಹ ರಾಜ್ಯದಲ್ಲಿ ಈ ವರೆಗೆ ಯಾವುದೇ ಫಿಲ್ಮ್​​ಸಿಟಿ ನಿರ್ಮಾಣವಾಗಿಲ್ಲ.

ಈ ಕೊರತೆಯನ್ನು ಮನಗಂಡು ಮೈಸೂರಿನಿಂದ ಸುಮಾರು 20 ಕಿ.ಮೀ. ದೂರದ ಹಿಮ್ಮಾವು ಸಮೀಪ 110 ಎಕರೆ ಜಾಗದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಯೋಜನೆಯನ್ನು ಕಾರ್ಯಗತಗೊಳಿಸಲು ಕೆ.ಐ.ಎ.ಡಿ.ಬಿ. ವತಿಯಿಂದ ಜಮೀನುಗಳನ್ನು ಸಹ ಗುರುತಿಸಲಾಗಿದೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಸಿನಿಮಾ ರಂಗಕ್ಕೆ ಹಾಗೂ ಸ್ಥಳೀಯವಾಗಿ ಹಲವಾರು ಅನುಕೂಲಗಳಿವೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಸೆಳೆಯಲು, ಕನ್ನಡ ಚಿತ್ರೋದ್ಯಮ ಅಭಿವೃದ್ಧಿಗೆ ಹಾಗೂ ಉದ್ಯೋಗ ಸೃಷ್ಟಿಸಲು ಚಿತ್ರನಗರಿ ನೆರವಾಗಲಿದೆ ಎಂದು ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: 

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ

Published On - 6:16 pm, Wed, 17 March 21

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ