Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ

ಪುಲ್ವಾಮದಲ್ಲಿ ಹೋರಾಡುತ್ತಾ ಹುತಾತ್ಮನಾದ ಯೋಧ ಕಾಶಿರಾಯ ಅವರ ಅಂತ್ಯಕ್ರಿಯೆ ನಡೆಯಿತು. ಅಪಾರ ಜನಸ್ತೋಮ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿತು. ಪತಿ ಕಾಶೀರಾಯ ಅವರನ್ನು ಕಳೆದುಕೊಂಡು ಅಪಾರ ದುಃಖದಲ್ಲಿದ್ದರೂ ಅವರ ಪತ್ನಿ ಸಂಗೀತಾ, ಮಗ ಭಗತ್ ಸಿಂಗ್​ನನ್ನು ಸೇನೆಗೆ ಸೇರಿಸುತ್ತೇನೆ ಎಂದಿದ್ದಾರೆ

ವಿಜಯಪುರ: ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ
ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿಗೆ ಗೌರವ ಸಮರ್ಪಣೆ
Follow us
TV9 Web
| Updated By: ganapathi bhat

Updated on:Jul 04, 2021 | 6:44 PM

ವಿಜಯಪುರ: ಪುಲ್ವಾಮಾದಲ್ಲಿ ಉಗ್ರರು ಹಾಗೂ ಸೇನೆ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದ ಯೋಧ ಕಾಶೀರಾಯ ಅವರ ಅಂತ್ಯಕ್ರಿಯೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ಯರನಾಳ ಮಠದ ಶ್ರೀ ಸಂಗನಬಸವ ಸ್ವಾಮೀಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಗ್ರಾಮದ ಸಾವಿರಾರು ಜನರು ಭಾಗಿಯಾಗಿ ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧನಿಗೆ ಗೌರವ ಸಮರ್ಪಿಸಿದರು.

ಪತ್ನಿ ಹಾಗೂ ತಾಯಿಗೆ ಯೋಧನ ಪಾರ್ಥಿವ ಶರೀರದ ಮೇಲೆ ಹಾಕಿದ್ದ ರಾಷ್ಟ್ರ ಧ್ವಜ ಹಸ್ತಾಂತರ ಮಾಡಲಾಯಿತು.ಯೋಧನ ಕುಟುಂಬಸ್ಥರು ಪಾರ್ಥೀವ ಶರೀರಕ್ಕೆ ಸೆಲ್ಯೂಟ್ ಹೊಡೆದು ಗೌರವ ಸಲ್ಲಿಸಿದರು. ಸೇನೆ ಹಾಗೂ ಸ್ಥಳಿಯ ಪೊಲೀಸರಿಂದ  ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಲಾಯಿತು.

ಪತಿ ಕಾಶೀರಾಯ ಅವರನ್ನು ಕಳೆದುಕೊಂಡು ಅಪಾರ ದುಃಖದಲ್ಲಿದ್ದರೂ ಅವರ ಪತ್ನಿ ಸಂಗೀತಾ, ಮಗ ಭಗತ್ ಸಿಂಗ್​ನನ್ನು ಸೇನೆಗೆ ಸೇರಿಸುತ್ತೇನೆ ಎಂದಿದ್ದಾರೆ. ಪುತ್ರನಿಗೆ ಸ್ವಾತಂತ್ರ ಹೋರಾಟಗಾರ ಭಗತ್ ಸಿಂಗ್ ಹೆಸರಿಟ್ಟಿದ್ದು, ಆತ ಕೂಡ ದೇಶದ ಸೇವೆ ಮಾಡಲಿ ಎಂದು ಆಕೆ ಆಶಿಸಿದ್ದಾರೆ. ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಪತಿಯ ಮೂರ್ತಿ ಸ್ಥಾಪನೆಗೆ ಸುನಂದಾ ಮನವಿ ಮಾಡಿದ್ದಾರೆ.

ಸೇನಾಧಿಕಾರಿಗಳು, ಮಾಜಿ ಸಚಿವರುಗಳಾದ ಶಿವಾನಂದ ಪಾಟೀಲ್, ಎಸ್.ಕೆ ಬೆಳ್ಳುಬ್ಬಿ‌ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಅಂತಿಮ ನಮನದಲ್ಲಿ ಭಾಗಿಯಾಗಿದ್ದರು.

(Final rites to Martyr Kashiraya Bommanahalli)

ಇದನ್ನೂ ಓದಿ: ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ

ದೇಸಿ ಗೋತಳಿ ಹೆಚ್ಚಿಸಲು ವೀರ ಮರಣ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ಹೆಣ್ಣುಕರು ವಿತರಣೆ

Published On - 6:41 pm, Sun, 4 July 21

ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್
ಔರಂಗಜೇಬನ ಸಮಾಧಿ ವಿವಾದ, ಸುತ್ತಲೂ ತಾತ್ಕಾಲಿಕ ಗೋಡೆ ನಿರ್ಮಾಣ
ಔರಂಗಜೇಬನ ಸಮಾಧಿ ವಿವಾದ, ಸುತ್ತಲೂ ತಾತ್ಕಾಲಿಕ ಗೋಡೆ ನಿರ್ಮಾಣ
ನಮಸ್ಕಾರದ ಮಹತ್ವವೇನು? ಯಾರಿಗೆ, ಹೇಗೆ ನಮಸ್ಕಾರ ಮಾಡಬೇಕು, ಇಲ್ಲಿದೆ ವಿವರ
ನಮಸ್ಕಾರದ ಮಹತ್ವವೇನು? ಯಾರಿಗೆ, ಹೇಗೆ ನಮಸ್ಕಾರ ಮಾಡಬೇಕು, ಇಲ್ಲಿದೆ ವಿವರ