AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್​ ಬುಕ್ ಮಾಡಿದ ಪ್ರಜ್ವಲ್, ಯಾವಾಗ ಬರ್ತಾರೆ ಗೊತ್ತಾ?

Prajwal Revanna Video Case: ಹಾಸನ ಪೆನ್​ಡ್ರೈವ್​ ಪ್ರಕರಣದ ಆರೋಪಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಕೊನೆಗೂ ಬೆಂಗಳೂರಿಗೆ ವಾಪಸ್ ಆಗಲು ನಿರ್ಧರಿಸಿದ್ದಾರೆ. ಇದಕ್ಕೆ ಪೂಕರವೆಂತೆ ಜರ್ಮನಿಯಿಂದ ಬೆಂಗಳೂರಿಗೆ ವಿಮಾನ ಟಿಕೆಟ್​ ಬುಕ್ ಮಾಡಿದ್ದಾರೆ. ಹಾಗಾದ್ರೆ, ಜರ್ಮನಿಯಿಂದ ಬೆಂಗಳೂರಿಗೆ ಯಾವಾಗ ತಲುಪಲಿದ್ದಾರೆ ಎನ್ನುವ ವಿವರ ಇಲ್ಲಿದೆ.

ಕೊನೆಗೂ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್​ ಬುಕ್ ಮಾಡಿದ ಪ್ರಜ್ವಲ್, ಯಾವಾಗ ಬರ್ತಾರೆ ಗೊತ್ತಾ?
ಪ್ರಜ್ವಲ್ ರೇವಣ್ಣ
TV9 Web
| Edited By: ವಿವೇಕ ಬಿರಾದಾರ|

Updated on:May 29, 2024 | 11:10 AM

Share

ಬೆಂಗಳೂರು, (ಮೇ 28): ಅಶ್ಲೀಲ ವಿಡಿಯೀ ಪ್ರಕರಣದಲ್ಲಿ (Prajwal Revanna Video Case) ವಿದೇಶದಲ್ಲಿ ತಲೆಮರೆಸಿಕೊಂಡಿದ್ದ  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ  ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್​ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

ಮೇ 31ರ ಬೆಳಗ್ಗೆ 10:30ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಂತೆ ಮೇ 31ರಂದು ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಪ್ರಜ್ವಲ್​ ರೇವಣ್ಣ ಅವರ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 30ರ ಮಧ್ಯರಾತ್ರಿ 12:30ಕ್ಕೆ (AM) ಬಂದಿಳಿಯಲಿದೆ. ಹೀಗಾಗಿ ಪ್ರಜ್ವಲ್ ಆ ಸಮಯದಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ. ಬದಲಿಗೆ ಮೇ 31ರ ಬೆಳಿಗ್ಗೆ ವಿಚಾರಣೆಗೆ ಹಾಜರಾಗಹುದು.

ಇದನ್ನೂ ಓದಿ: 1 ತಿಂಗ್ಳು ಬಳಿಕ ಪ್ರಜ್ವಲ್ ಪ್ರತ್ಯಕ್ಷ, ಏ.21ರಿಂದ ಮೇ 27ರ ವರೆಗಿನ ಕೇಸ್ ಡಿಟೇಲ್ಸ್​ ಇಲ್ಲಿದೆ

ಇನ್ನು ಪ್ರಜ್ವಲ್​ ರೇವಣ್ಣ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ, ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅಲರ್ಟ್​ ಆಗಿದ್ದು, ಪ್ರಜ್ವಲ್ ರೇವಣ್ಣ ಯಾವ ವಿಮಾನದಲ್ಲಿ ಎಷ್ಟು ಗಂಟೆ ಬೆಂಗಳೂರಿಗೆ ಬರಲಿದೆ ಎಂದು ಇಂಚಿಚು ಮಾಹಿತಿಯನ್ನು ಕಲೆಹಾಕುತ್ತಿದೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಬೆಂಗಳೂರಿಗೆ ಬರಲು ಎರಡು ಬಾರಿ ವಿಮಾನ ಟಿಕೆಟ್​ ಬುಕ್ ಮಾಡಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ವಿಮಾನ ಹೊರಡುವ ಸ್ವಲ್ಪ ಸಮಯದ ಮೊದಲೇ ಟಿಕೆಟ್​ ರದ್ದು ಮಾಡಿದ್ದರು. ಈ ಮೂಲಕ ಎಸ್​ಐಟಿ ಅಧಿಕಾರಿಗಳನ್ನು ಆಟವಾಡಿಸಿದ್ದರು. ಇದೀಗ ಪ್ರಜ್ವಲ್ ರೇವಣ್ಣ ಹೇಳಿದಂತೆಯೇ ಮೇ 31ರಂದು ಬೆಂಗಳೂರಿಗೆ ಬರುವುದಾಗಿ ಹೇಳಿದ್ದು, ಇದಕ್ಕಾಗಿ ಎಸ್​ಐಟಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ: Prajwal Revanna Video: ಪ್ರಜ್ವಲ್​ ವಿಡಿಯೋ ಹೇಳಿಕೆ ಬೆನ್ನಲ್ಲೇ ಎಸ್​ಐಟಿ ಅಲರ್ಟ್, ಗೌಡರ ಕುಟುಂಬ ನಿರಳ

ವಿಚಾರಣೆಗೆ ಹಾಜರಾಗುವ ಮುಂಚೆಯೇ ವಶಕ್ಕೆ

ಮೇ 31ರಂದು ಎಸ್​ಐಟಿ ವಿಚಾರಣೆಗೆ ಹಾಜರಾಗುವುದಾಗಿ ಪ್ರಜ್ವಲ್ ಹೇಳಿದ್ದಾರೆ. ಆದ್ರೆ, ವಿಚಾರಣೆಗೆ ಹಾಜರಾಗುವ ಮುಂಚೆಯೇ ವಶಕ್ಕೆ ಪಡೆಯಲು ಎಸ್​ಐಟಿ ಮುಂದಾಗಿದೆ. ಇದಕ್ಕಾಗಿ ಎಸ್​ಐಟಿ ಅಧಿಕಾರಿಗಳು ಕೆಂಪೇಗೌಡ ವಿಮಾನ ನಿಲ್ದಾನದಲ್ಲಿ ನಿಗಾ ಇಟ್ಟಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮತ್ತು ಅರೆಸ್ಟ್​ ವಾರಂಟ್​ ಸಹ ಜಾರಿಯಾಗಿದೆ. ಹೀಗಾಗಿ ಯಾವ ವಿಮಾನದಲ್ಲಿ ಪ್ರಜ್ವಲ ಬರುತ್ತಾರೆ ಎಂದು ಎಸ್​ಐಟಿ ಮಾಹಿತಿ ಪಡೆದುಕೊಂಡು ವಶಕ್ಕೆ ಪಡೆಯಲಿದೆ. ಅದಕ್ಕೂ ಮೊದಲು ಇಮಿಗ್ರೇಷನ್ ಅಧಿಕಾರಿಗಳು ಪ್ರಜ್ವಲ್​ ವಶಕ್ಕೆ ಪಡೆಯಲಿದ್ದಾರೆ. ಬಳಿಕ ಎಸ್ಐಟಿಗೆ ಒಪ್ಪಿಸಲಿದ್ದಾರೆ. ಅದಾದ ಬಳಿಕ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು ಮೊದಲಿಗೆ ಅವರಿಗೆ ಮೆಡಿಕಲ್ ಚೆಕಪ್ ಮಾಡಿಸಲಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:51 pm, Tue, 28 May 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ