AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Tech Summit ಕೇಂದ್ರೀಕೃತ UPI ಗ್ರಾಮೀಣ ಜನರನ್ನು ಆರ್ಥಿಕವಾಗಿ ಬಲಗೊಳಿಸುತ್ತಿದೆ

ಬೆಂಗಳೂರು: “ಕೇಂದ್ರೀಕೃತ ಯುಪಿಐ ಜನಸಾಮಾನ್ಯರ ಕೈಗಳನ್ನು ಆರ್ಥಿಕವಾಗಿ ಬಲಗೊಳಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಹೊಸ ಉದ್ದಿಮೆಗಳು ಹುಟ್ಟಲು ಕಾರಣವಾಗಿದೆ” ಎಂದು ಬೆಂಗಳೂರು ಟೆಕ್ ಸಮ್ಮಿಟ್ನ ಫಿನ್ಟೆಕ್- ದ ನೆಕ್ಸ್ಟ್ ಯುಪಿಐ- ಹಣಕಾಸು ವಹಿವಾಟಿಗೆ ಮುಕ್ತ ವೇದಿಕೆ ಗೋಷ್ಠಿಯಲ್ಲಿ Bengaluru Tech Summit 2020 ವಿವಿಧ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಿರು, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳಿಗೆ ಸವಾಲಾಗಿರುವ ಹಣಕಾಸಿನ ನಿರ್ವಹಣೆಗೆ ಕೇಂದ್ರೀಕೃತ ಪಾವತಿ ವ್ಯವಸ್ಥೆ ಸೂಕ್ತ ಪರಿಹಾರ. 25 ಟ್ರಿಲಿಯನ್ ವಾರ್ಷಿಕ ವಹಿವಾಟನ್ನು ದೇಶದ ಎಂಎಸ್ಎಂಇಗಳು ದಾಖಲಿಸಿವೆ. […]

Bengaluru Tech Summit ಕೇಂದ್ರೀಕೃತ UPI ಗ್ರಾಮೀಣ ಜನರನ್ನು ಆರ್ಥಿಕವಾಗಿ ಬಲಗೊಳಿಸುತ್ತಿದೆ
ಬೆಂಗಳೂರು ಟೆಕ್ ಸಮ್ಮಿಟ್
ಸಾಧು ಶ್ರೀನಾಥ್​
| Edited By: |

Updated on:Nov 24, 2020 | 9:10 AM

Share

ಬೆಂಗಳೂರು: “ಕೇಂದ್ರೀಕೃತ ಯುಪಿಐ ಜನಸಾಮಾನ್ಯರ ಕೈಗಳನ್ನು ಆರ್ಥಿಕವಾಗಿ ಬಲಗೊಳಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಹೊಸ ಉದ್ದಿಮೆಗಳು ಹುಟ್ಟಲು ಕಾರಣವಾಗಿದೆ” ಎಂದು ಬೆಂಗಳೂರು ಟೆಕ್ ಸಮ್ಮಿಟ್ನ ಫಿನ್ಟೆಕ್- ದ ನೆಕ್ಸ್ಟ್ ಯುಪಿಐ- ಹಣಕಾಸು ವಹಿವಾಟಿಗೆ ಮುಕ್ತ ವೇದಿಕೆ ಗೋಷ್ಠಿಯಲ್ಲಿ Bengaluru Tech Summit 2020 ವಿವಿಧ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಿರು, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳಿಗೆ ಸವಾಲಾಗಿರುವ ಹಣಕಾಸಿನ ನಿರ್ವಹಣೆಗೆ ಕೇಂದ್ರೀಕೃತ ಪಾವತಿ ವ್ಯವಸ್ಥೆ ಸೂಕ್ತ ಪರಿಹಾರ. 25 ಟ್ರಿಲಿಯನ್ ವಾರ್ಷಿಕ ವಹಿವಾಟನ್ನು ದೇಶದ ಎಂಎಸ್ಎಂಇಗಳು ದಾಖಲಿಸಿವೆ. ಕೇವಲ ಶೇ.16 ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ಮಾತ್ರ ಈಗಲೂ ಸಾಂಪ್ರದಾಯಿಕ ವಹಿವಾಟಿನಲ್ಲಿ ಆಸಕ್ತಿ ಹೊಂದಿವೆ. ಯುಪಿಐ ತಂತ್ರಜ್ಞಾನಾಧಾರಿತ ವ್ಯವಸ್ಥೆಗೆ ಸಾಮಾನ್ಯರೂ ವ್ಯವಹರಿಸಬಲ್ಲ ಪ್ರೊಟೋಕಾಲ್​ ಅವಶ್ಯಕತೆಯಿದೆ.

ಭಾರತದ ಒಂದೊಂದು ರಾಜ್ಯವೂ ಒಂದೊಂದು ದೇಶದಷ್ಟೇ ವೈವಿಧ್ಯಮಯವಾಗಿದೆ. ಪ್ರತೀ 10 ಕಿಮೀಗೆ ಹವಾಮಾನ, ಜನರ ಮನಸ್ಥಿತಿ, ಸಂಪ್ರದಾಯಗಳು ಬದಲಾಗುತ್ತವೆ. ಯುಪಿಐ ಮೂಲಕ ಪ್ರತಿಯೊಂದು ಗ್ರಾಮವೂ ದೇಶದ ಆರ್ಥಿಕತೆಗೆ ಕೊಡುಗೆ ನೀಡಬಹುದು. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪರಿಣಾಮಕಾರಿ ಬದಲಾವಣೆ ತರಬಹುದು ಎಂದು ತಜ್ಞರಾದ ಪ್ರಮೋದ್ ವರ್ಮಾ, ಅರುಂಧತಿ ಭಟ್ಟಾಚಾರ್ಯ, ಸ್ಮಿತಾ ಭಗತ್, ರಾಹುಲ್ ಮಲ್ಲಿಕ್ ವಿವರಿಸಿದರು.

ನವೋದ್ಯಮ ಮತ್ತು ಬ್ಯಾಂಕ್ಗಳ ನಡುವೆ ಹಣಕಾಸಿನ ವಹಿವಾಟು ಸರಾಗವಾಗಿ ನಡೆಯಲು ತಂತ್ರಜ್ಞಾನದ ಮೇಲೆ ನಂಬಿಕೆ ಇರಿಸಬೇಕು. ವಹಿವಾಟಿನಲ್ಲಿ ಉಂಟಾಗುವ ತೊಡಕು, ಖರ್ಚು ವೆಚ್ಚ, ಸಮಯದ ಕೊರತೆಗೆ ಕೇಂದ್ರೀಕೃತ ವಹಿವಾಟು ಪದ್ಧತಿ ಒಂದೇ ಚಿಟಿಕೆಯಲ್ಲಿ ಪರಿಹಾರ ಒದಗಿಸುತ್ತದೆ. ಸಾಮಾನ್ಯ ಪ್ರೋಟೋಕಾಲ್ ಬಳಕೆಯ ನಂತರ ಯುಪಿಐ ಇನ್ನಷ್ಟು ಜನಪ್ರಿಯಗೊಳ್ಳಲಿದೆ ಎಂದು ತಜ್ಞರು ವಿವರಿಸಿದರು.

Published On - 5:35 pm, Fri, 20 November 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!