AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಅಧರ್ಮದ ಆರೋಪ-ಪ್ರತ್ಯಾರೋಪ.. ಕರಗದ ಹೆಸರಿನಲ್ಲಿ ಅಕ್ರಮ, ಸಮಿತಿ ಅಧ್ಯಕ್ಷನ ವಿರುದ್ಧ ಎಫ್ಐಆರ್

ದೇವಸ್ಥಾನದ ಸಮಿತಿ ಅಧ್ಯಕ್ಷ ರಾಜಗೋಪಾಲ್ 21 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಎಂದು ದೇಗುಲದ ಆಡಳಿತಾಧಿಕಾರಿ ವೆಂಕಟರಮಣ ಗುರುಪ್ರಸಾದ್ ಆರೋಪಿಸಿದ್ದಾರೆ. ಹಾಗೂ ಈ ಸಂಬಂಧ ವೆಂಕಟರಮಣ ದೂರು ದಾಖಲಿಸಿದ್ದು ದೂರು ಆಧರಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ರಾಜಗೋಪಾಲ್ ವಿರುದ್ಧ FIR ದಾಖಲಾಗಿದೆ.

ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಅಧರ್ಮದ ಆರೋಪ-ಪ್ರತ್ಯಾರೋಪ.. ಕರಗದ ಹೆಸರಿನಲ್ಲಿ ಅಕ್ರಮ, ಸಮಿತಿ ಅಧ್ಯಕ್ಷನ ವಿರುದ್ಧ ಎಫ್ಐಆರ್
ಸಂಗ್ರಹ ಚಿತ್ರ
TV9 Web
| Edited By: |

Updated on: Jul 01, 2021 | 10:10 AM

Share

ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ನಡೆಯುವ ಧರ್ಮರಾಯಸ್ವಾಮಿ ದೇವಸ್ಥಾನ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಧರ್ಮರಾಯಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇಗುಲದ 21 ಲಕ್ಷ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ದೇವಸ್ಥಾನದ ಸಮಿತಿ ಅಧ್ಯಕ್ಷ ರಾಜಗೋಪಾಲ್ 21 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಎಂದು ದೇಗುಲದ ಆಡಳಿತಾಧಿಕಾರಿ ವೆಂಕಟರಮಣ ಗುರುಪ್ರಸಾದ್ ಆರೋಪಿಸಿದ್ದಾರೆ. ಹಾಗೂ ಈ ಸಂಬಂಧ ವೆಂಕಟರಮಣ ದೂರು ದಾಖಲಿಸಿದ್ದು ದೂರು ಆಧರಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ರಾಜಗೋಪಾಲ್ ವಿರುದ್ಧ FIR ದಾಖಲಾಗಿದೆ.

ಇನ್ನು ರಾಜಗೋಪಾಲ್ ವಿರುದ್ಧ ದೂರು ನೀಡುತ್ತಿದ್ದಂತೆ ಮತ್ತೊಂದು ಹಗರಣ ಬಯಲಾಗಿದೆ. ಸಹಾಯಕ ಆಯುಕ್ತ ವೆಂಕಟರಮಣ ಗುರುಪ್ರಸಾದ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕೊರೊನಾ ಹಿನ್ನೆಲೆ ಈ ಬಾರಿ ಸರಳವಾಗಿ ಕೇವಲ 50 ಜನರು ಮಾತ್ರ ಸೇರಿಕೊಂಡು ಕರಗ ಆಚರಣೆ ಮಾಡಿದ್ದರು. ಸರಳವಾಗಿ ಕರಗ ಆಚರಣೆಗೆ ವೆಂಕಟರಮಣ ಗುರುಪ್ರಸಾದ್ ₹39 ಲಕ್ಷ ಖರ್ಚು ಮಾಡಿದ್ದಾರೆ. ಸಮಿತಿಯವರನ್ನು ಕೇಳದೆ ಬಿಬಿಎಂಪಿಗೆ ಬಿಲ್ ಕಳುಹಿಸಿದ್ದಾರೆ. ಕೇವಲ 50 ಜನರಿದ್ದ ಕರಗ ಆಚರಣೆಗೆ 10 ಲಕ್ಷ ಸಹ ಖರ್ಚು ಆಗಿಲ್ಲ. ಆದರೆ ₹21 ಲಕ್ಷ ಹೂವಿಗೆ ಖರ್ಚು ಆಗಿದೆ ಎಂದು ವೆಂಕಟರಮಣ ಬಿಬಿಎಂಪಿಗೆ ಸುಳ್ಳು ಲೆಕ್ಕವನ್ನು ನೀಡಿದ್ದಾರೆ. ಶಾಸಕರ ಶಿಷ್ಯ, ಅಧಿಕಾರಿಗಳು ಸೇರಿ ಸುಳ್ಳು ಲೆಕ್ಕ ಕೊಟ್ಟಿದ್ದಾರೆ ಎಂದು ವೆಂಕಟರಮಣ ವಿರುದ್ಧ ಅಧ್ಯಕ್ಷ ರಾಜಗೋಪಾಲ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಟಿವಿ9ಗೆ ಧರ್ಮರಾಯಸ್ವಾಮಿ ದೇವಸ್ಥಾನದ ಅಧ್ಯಕ್ಷ ರಾಜಗೋಪಾಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಳೆದ ವರ್ಷದಂತೆ.. ಈ ಬಾರಿಯೂ ಬೆಂಗಳೂರು ಕರಗದ ಸಂಭ್ರಮಕ್ಕೆ ಕೊರೊನಾ ಬ್ರೇಕ್

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್