AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಪಡೆದ ಪ್ರಕರಣ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ FIR

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆಯಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಈ ಸಂಬಂಧ ಬೆಸ್ಕಾಂ ಜಾಗೃತ ದಳ ತನಿಖೆ ಆರಂಭಿಸಿದ್ದು, ವಿದ್ಯುತ್ ಕಳವು ಮಾಡಿರುವ ಆರೋಪದಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಿಸಿದೆ.

ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಪಡೆದ ಪ್ರಕರಣ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ FIR
ಹೆಚ್​ಡಿ ಕುಮಾರಸ್ವಾಮಿImage Credit source: PTI
Poornima Agali Nagaraj
| Updated By: Rakesh Nayak Manchi|

Updated on:Nov 14, 2023 | 7:22 PM

Share

ಬೆಂಗಳೂರು, ನ.14: ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದಡಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 71ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಬೆಸ್ಕಾಂ ಜಾಗೃತ ದಳದ ಸಿಬ್ಬಂದಿ ಎಫ್​ಐಆರ್ ಪ್ರತಿಯನ್ನು ಸಲ್ಲಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದಕ್ಕೆ ಕಾಂಗ್ರೆಸ್ ವಿಡಿಯೋವೊಂದರನ್ನು ಬಿಡುಗಡೆ ಮಾಡಿದೆ. ದೀಪಾವಳಿ ಪ್ರಯುಕ್ತ ಬೆಂಗಳೂರಿನ ಜೆಪಿ ನಗರದಲ್ಲಿರುವ ನಿವಾಸಕ್ಕೆ ದೀಪಾಲಂಕಾರ ಸಲುವಾಗಿ ಅಕ್ರಮವಾಗಿ ಬೀದಿ ಕಂಬದ ಮೂಲಕ ವಿದ್ಯುತ್​ ಸಂಪರ್ಕ ಪಡೆಯಲಾಗಿದೆ.

ಇದನ್ನೂ ಓದಿ: ವಿದ್ಯುತ್ ಕಳ್ಳತನದ ಆರೋಪ; ಹೆಚ್ ಡಿ ಕುಮಾರಸ್ವಾಮಿ ಮನೆಯಲ್ಲಿ ಮಹಜರ್ ನಡೆಸಿದ ಬೆಸ್ಕಾಂ ಅಧಿಕಾರಿಗಳು!

ಇದನ್ನು ಸ್ವತಃ ಕುಮಾರಸ್ವಾಮಿ ತಪ್ಪೊಪ್ಪಿಕೊಂಡಿದ್ದಾರೆ. ಇದಕ್ಕೆ ಇದೀಗ ಕಾಂಗ್ರೆಸ್​ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಅಕ್ರಮ ವಿದ್ಯುತ್​ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​ ನಡುವೆ ಹೊತ್ತಿ ಉರಿಯುತ್ತಿದೆ. ಇದರ ಮಧ್ಯೆ ಇದೀಗ ಬೆಸ್ಕಾಂ ಸಹ ಪ್ರವೇಶಿಸಿದ್ದು, ತನಿಖೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Tue, 14 November 23

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ