ಕಲಾಸಿಪಾಳ್ಯ: ಲಾಕ್​ಡೌನ್ ಉಲ್ಲಂಘನೆ, ಕಾರ್ಪೊರೇಟರ್ ಪತಿ ಮತ್ತು ಮಗ ಸೇರಿ ಹಲವರ ವಿರುದ್ಧ FIR

ಬೆಂಗಳೂರು: ಕಲಾಸಿಪಾಳ್ಯದಲ್ಲಿ ನಡೆದ ಪ್ರತಿಭಟನೆ ಸಂಬಂಧಿಸಿ ಕಾರ್ಪೊರೇಟರ್ ಪತಿ ಹಾಗೂ ಮಗ ಸೇರಿ ಹಲವರ ವಿರುದ್ಧ ಎನ್​ಡಿಎಂಎ ಅಡಿ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ. ಕಲಾಸಿಪಾಳ್ಯದಲ್ಲಿ ತಪಾಸಣೆಗೆಂದು ಬಂದಿದ್ದ ಕಲಾಸಿಪಾಳ್ಯ ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ಮೇಲೆ ಕೆಲವರು ಸಗಣಿ ಎರಚಿದ್ದರು. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧನರಾಜ್ ಬೆಂಬಲಿಗರು ಗುಂಪು ಗುಂಪಾಗಿ ರಸ್ತೆ ಮಧ್ಯೆಯೇ ಪ್ರತಿಭಟನೆ ನಡೆಸಿದ್ದರು. ಧರಣಿ ವೇಳೆ ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೆಕ್ಷನ್ 143 ಉಲ್ಲಂಘಿಸಿದ್ದಾರೆ ಎಂದು ಕಾರ್ಪೊರೇಟರ್ […]

ಕಲಾಸಿಪಾಳ್ಯ: ಲಾಕ್​ಡೌನ್ ಉಲ್ಲಂಘನೆ, ಕಾರ್ಪೊರೇಟರ್ ಪತಿ ಮತ್ತು ಮಗ ಸೇರಿ ಹಲವರ ವಿರುದ್ಧ FIR
ಸಾಧು ಶ್ರೀನಾಥ್​

Updated on: May 15, 2020 | 11:09 AM

ಬೆಂಗಳೂರು: ಕಲಾಸಿಪಾಳ್ಯದಲ್ಲಿ ನಡೆದ ಪ್ರತಿಭಟನೆ ಸಂಬಂಧಿಸಿ ಕಾರ್ಪೊರೇಟರ್ ಪತಿ ಹಾಗೂ ಮಗ ಸೇರಿ ಹಲವರ ವಿರುದ್ಧ ಎನ್​ಡಿಎಂಎ ಅಡಿ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ.

ಕಲಾಸಿಪಾಳ್ಯದಲ್ಲಿ ತಪಾಸಣೆಗೆಂದು ಬಂದಿದ್ದ ಕಲಾಸಿಪಾಳ್ಯ ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ಮೇಲೆ ಕೆಲವರು ಸಗಣಿ ಎರಚಿದ್ದರು. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧನರಾಜ್ ಬೆಂಬಲಿಗರು ಗುಂಪು ಗುಂಪಾಗಿ ರಸ್ತೆ ಮಧ್ಯೆಯೇ ಪ್ರತಿಭಟನೆ ನಡೆಸಿದ್ದರು.

ಧರಣಿ ವೇಳೆ ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೆಕ್ಷನ್ 143 ಉಲ್ಲಂಘಿಸಿದ್ದಾರೆ ಎಂದು ಕಾರ್ಪೊರೇಟರ್ ಪತಿ, ಮಗ ಸೇರಿ ಹಲವರ ವಿರುದ್ಧ ಕಲಾಸಿಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ. ಹಾಗೂ ಧನರಾಜ್ ಮೇಲೆ ಸಗಣಿ ಎಸೆದವರ ಮೇಲೂ FIR ದಾಖಲಿಸಲಾಗಿದೆ.

Published On - 9:40 am, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us