AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ್ದಲ್ಲದೆ, ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದಾತನ ವಿರುದ್ಧ ಎಫ್​ಐಆರ್

ಹಾರುತ್ತಿದ್ದ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪಿ ಉತ್ಕರ್ಷ್ ಗೌತಮ್, ಹೋಗಲಿ ಎಂದು ಬಿಟ್ಟು ಕಳುಹಿಸಿದ ಬೆಂಗಳೂರು ಪೊಲೀಸರನ್ನೇ ‘ಬಸ್ಟರ್ಡ್ಸ್’ ಎಂದು ನಿಂದಿಸಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಎಕ್ಸ್ (X) ಖಾತೆಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಆರೋಪ ಮಾಡಿ ಪೋಸ್ಟ್ ಹಾಕಿದ್ದ ಆರೋಪಿಯ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ್ದಲ್ಲದೆ, ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದಾತನ ವಿರುದ್ಧ ಎಫ್​ಐಆರ್
ಆರೋಪಿ ಉತ್ಕರ್ಷ್ ಗೌತಮ್ ಹಾಗೂ ಇಂಡಿಗೋ ವಿಮಾನದ ಸಾಂದರ್ಭಿಕ ಚಿತ್ರImage Credit source: tv9
ನವೀನ್ ಕುಮಾರ್ ಟಿ
| Edited By: |

Updated on: Mar 31, 2026 | 9:26 AM

Share

ದೇವನಹಳ್ಳಿ, ಮಾರ್ಚ್ 31: ಸಂಚರಿಸುತ್ತಿದ್ದ ವಿಮಾನದಲ್ಲಿ ತುರ್ತು ನಿರ್ಗಮನದ ಬಾಗಿಲು (Emergency Door) ತೆರೆಯಲು ಯತ್ನಿಸಿ ಆತಂಕ ಸೃಷ್ಟಿಸಿದ್ದ ಮಹಾರಾಷ್ಟ್ರ ಮೂಲದ ಪ್ರಯಾಣಿಕನೊಬ್ಬ, ಬುದ್ಧಿಹೇಳಿ ಬಿಟ್ಟು ಕಳುಹಿಸಿದ ಬೆಂಗಳೂರು (Bangalore) ಏರ್​ಪೋರ್ಟ್​ ಪೊಲೀಸರ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಸದ್ಯ ಆರೋಪಿಯ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಅಚಾತುರ್ಯದಿಂದ ತಪ್ಪು ಮಾಡಿರಬಹುದು ಎಂದು ಬೆಂಗಳೂರು ಏರ್​ಪೋರ್ಟ್ ಪೊಲೀಸರು ಆತನ ವಿರುದ್ಧ ಎನ್​​ಸಿಆರ್ (Non-Cognizable Report) ಅಥವಾ ಗಂಭೀರವಲ್ಲದ ಪ್ರಕರಣ ದಾಖಲಿಸಿ ಬಿಟ್ಟು ಕಳುಹಿಸಿದ್ದರು. ಆದರೆ, ಠಾಣೆಯಿಂದ ಹೊರಬರುತ್ತಿದ್ದಂತೆಯೇ ಆತ ಮತ್ತೆ ತನ್ನ ಅಸಲಿ ಬುದ್ಧಿ ಪ್ರದರ್ಶಿಸಿದ್ದ.

ಘಟನೆಯ ವಿವರ

ಮಾರ್ಚ್ 22ರಂದು ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಉತ್ಕರ್ಷ್ ಗೌತಮ್ ಎಂಬ ಪ್ರಯಾಣಿಕ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ. ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಏರ್‌ಲೈನ್ಸ್ ಸಿಬ್ಬಂದಿ ಈತನನ್ನು ಕೆಐಎಬಿ (KIAB) ಪೊಲೀಸರ ವಶಕ್ಕೆ ನೀಡಿದ್ದರು. ಪೊಲೀಸರು ಈತನಿಗೆ ಬುದ್ಧಿವಾದ ಹೇಳಿ ಎನ್‌ಸಿಆರ್ (NCR) ದಾಖಲಿಸಿ ಕಳುಹಿಸಿಕೊಟ್ಟಿದ್ದರು.

ಪೊಲೀಸರ ವಿರುದ್ಧವೇ ಟ್ವೀಟ್

ಪೊಲೀಸ್ ಠಾಣೆಯಿಂದ ಹೊರಬಂದ ಬೆನ್ನಲ್ಲೇ ಆರೋಪಿ ಉತ್ಕರ್ಷ್ ತನ್ನ ಎಕ್ಸ್ (X) ಖಾತೆಯಲ್ಲಿ ಬೆಂಗಳೂರು ಪೊಲೀಸರನ್ನು ನಿಂದಿಸಿದ್ದಾನೆ. ‘Mumbai Police please Arrest @ Blr City Police Bustards’ ಎಂದು ಟ್ವೀಟ್ ಮಾಡಿದ್ದಲ್ಲದೆ, ಪೊಲೀಸರು ತನ್ನನ್ನು 4 ಗಂಟೆಗಳ ಕಾಲ ಸೆಲ್‌ನಲ್ಲಿ ಕೂರಿಸಿ ಹಿಂಸೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದ.

ಇದನ್ನೂ ಓದಿ: ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಟ್ವೀಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಎಫ್‌ಐಆರ್ ಜಡಿಯುತ್ತಲೇ ಆರೋಪಿ ತನ್ನೆಲ್ಲಾ ಟ್ವೀಟ್ ಡಿಲೀಟ್ ಮಾಡಿ ತಲೆಮರೆಸಿಕೊಂಡಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us