AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ ಎಫ್​ಐಆರ್!

ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ನಡೆದ ಕಾಲು ತುಳಿತ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಆರ್​ಸಿಬಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಬಗ್ಗೆ ಹಲವು ಅನುಮಾನಗಳು, ಪ್ರಶ್ನೆಗಳು ಹುಟ್ಟಿಕೊಂಡಿವೆ. ಇದಕ್ಕೆ ಕಾರಣವೇನು? ಎಫ್ಐಆರ್​ನಲ್ಲಿ ಏನಿದೆ? ಅನುಮಾನಕ್ಕೆ ಕಾರಣವಾದ ಅಂಶಗಳು ಯಾವುವು? ಮಾಹಿತಿ ಇಲ್ಲಿದೆ.

ಬೆಂಗಳೂರು ಕಾಲ್ತುಳಿತ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ ಎಫ್​ಐಆರ್!
Rcb (2)
ಗಂಗಾಧರ​ ಬ. ಸಾಬೋಜಿ
| Updated By: ಡಾ. ಭಾಸ್ಕರ ಹೆಗಡೆ|

Updated on:Jun 06, 2025 | 3:41 PM

Share

ಬೆಂಗಳೂರು, ಜೂನ್​ 06: ನಗರದಲ್ಲಿ ನಡೆದ ಘೋರ ಕಾಲ್ತುಳಿತ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 11 ಆರ್​ಸಿಬಿ (RCB) ಅಭಿಮಾನಿಗಳು ಸಾವನ್ನಪ್ಪಿದ್ದರು. ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದ್ದು, ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆದರೆ ಇದೀಗ ಕರ್ನಾಟಕ ಪೊಲೀಸರು ದಾಖಲಿಸಿರುವ ಎಫ್​ಐಆರ್​ ವಿರುದ್ಧ ಕೆಲ ಪ್ರಶ್ನೆ ಮತ್ತು ಅನುಮಾನಗಳು ಹುಟ್ಟಿಕೊಂಡಿವೆ.

ಕಾಲ್ತುಳಿತದ ಬಗ್ಗೆ ಕೇವಲ ಯುಡಿಆರ್​ ದಾಖಲಿಸಿ ಪೊಲೀಸ್ ಇಲಾಖೆ ಕೈತೊಳೆದುಕೊಂಡಿತ್ತು. ಆದರೆ ವ್ಯಾಪಕ ಆರೋಪ ವ್ಯಕ್ತವಾಗಿದ್ದರಿಂದ‌ ಎಚ್ಚೆತ್ತ ಪೊಲೀಸರು ಕೊನೆಗೆ ಘಟನೆ ಬಗ್ಗೆ ಎಫ್​ಐಆರ್​ ದಾಖಲಿಸಿದ್ದರು. ಆದರೆ ಈಗ ದಾಖಲಾಗಿರುವ ಎಫ್​ಐಆರ್​ ಹಲವು ಅನುಮಾಗಳಿಗೆ ಕಾರಣವಾಗಿದೆ.

ಎಫ್​ಐಆರ್​ ವಿರುದ್ಧ ಎದ್ದಿರುವ ಅನುಮಾನಗಳು?

ಎಫ್​ಐಆರ್: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ ಪ್ರಕಾರ, ಜೂನ್ 3ರಂದು ಸಂಜೆ 6 ಗಂಟೆಗೆ KSCA ಎಕ್ಸಿಕ್ಯೂಟಿವ್ ಆಫೀಸರ್ ಶುಭೇಂದು ಘೋಷ್, ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​​ಸಿಬಿ ಸಂಭ್ರಮಾಚರಣೆ ಇರಲಿದೆ. ಇದಕ್ಕೆ ಸೂಕ್ತ ಭದ್ರತೆ ನೀಡುವಂತೆ ಮನವಿ ಪತ್ರ ನೀಡಿರುತ್ತಾರೆ.

ಇದನ್ನೂ ಓದಿ
Image
ಸರ್ಕಾರ ಸ್ಥಿಮಿತ ತಪ್ಪಿದೆ, ಸಿಎಂ ಹೇಡಿಯಂತೆ ವರ್ತಿಸಿದ್ದಾರೆ: ಭಾಸ್ಕರ ರಾವ್
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಎಫ್ಐಆರ್​ನಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಶ್ನೆ: ಅಂದರೆ, ಐಪಿಎಲ್ ಫೈನಲ್ ಪಂದ್ಯ ಪ್ರಾರಂಭಗೊಳ್ಳುವ ಮೊದಲೇ ಕೆಎಸ್​ಸಿಎಸಿಗೆ ಆರ್​ಸಿಬಿ ಗೆಲ್ಲುತ್ತೆ ಎನ್ನುವುದು ಗೊತ್ತಿತ್ತಾ. ಇದು ಹೇಗೆ ಸಾಧ್ಯ ಎಂಬ ಅನುಮಾನ ಮೂಡಿದೆ.

ಎಫ್​ಐಆರ್: ಜೂನ್​ 4ರಂದು ಬೆಳಿಗ್ಗೆ 9 ಗಂಟೆ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆದು ಬಂದೋಬಸ್ಥ್​ ವ್ಯವಸ್ಥೆ ಮಾಡಿಕೊಳ್ಳಲಾಯಿತು ಎಂದು ಉಲ್ಲೇಖಿಸಲಾಗಿದೆ.

ಪ್ರಶ್ನೆ: ಅಂದರೆ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಯಿತು ಎನ್ನುವುದೇ ಸುಳ್ಳು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಎಫ್​ಐಆರ್: ಇನ್ನು ಎಫ್​​ಐಆರ್​ನಲ್ಲಿ ಉಲ್ಲೇಖಿಸಿರುವಂತೆ ಮಧ್ಯಾಹ್ನ 03.10ರ ಸಮಯಕ್ಕೆ ಕಾಲ್ತುಳಿತಕ್ಕೆ ಒಳಗಾಗಿ 11 ಜನ ಮೃತಪಟ್ಟಿರುತ್ತಾರೆ.

ಪ್ರಶ್ನೆ: ಹಾಗಾದರೆ ಕೃತ್ಯ ನಡೆದದ್ದು, ಸಂಜೆ 4ರಿಂದ 5 ಗಂಟೆ ಎನ್ನುವುದೇ ಸುಳ್ಳು.

ಇದನ್ನೂ ಓದಿ: Bengaluru Stampede: ಪೊಲೀಸರು ಯಾಕೆ ಬಲಿಪಶು ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಂಮಜಸ ಉತ್ತರ

ಪ್ರಶ್ನೆ: ಸಂಜೆ 05.45ಕ್ಕೆ ಕಾರ್ಯಕ್ರಮ ಶುರುವಾಯಿತು. 9 ನೇ ನಂಬರ್​ ಗೇಟ್​ ಬಳಿ ಕಾಲ್ತುಳಿತಕ್ಕೆ ಒಳಗಾಗಿದ್ದು, ಯಾವ ಯಾವ ಗೇಟ್​ಗಳಲ್ಲಿ ಯಾರು ಯಾರ ಮೃತ ದೇಹ ಸಿಕ್ಕಿದ್ದು ವಿವರವಿಲ್ಲ. ಜೂನ್​ 4ರಂದು ಆ ಜಾಗಗಳ ಮಹಜರು ನಡೆಸಿದ ಬಗ್ಗೆ ವಿವರವಿಲ್ಲ. ಜೊತೆಗೆ ಅನುಮಾನಿಸಿದ ವ್ಯಕ್ತಿಗಳ ಹೆಸರು ಪಟ್ಟಿಯಲ್ಲಿ ಇಲ್ಲ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ದಾಖಲಿಸಿರುವ ಎಫ್​ಐಆರ್​ನ ಈ ಅಂಶಗಳು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:25 pm, Fri, 6 June 25

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ