AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ ಎಫ್​ಐಆರ್!

ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ನಡೆದ ಕಾಲು ತುಳಿತ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಆರ್​ಸಿಬಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಬಗ್ಗೆ ಹಲವು ಅನುಮಾನಗಳು, ಪ್ರಶ್ನೆಗಳು ಹುಟ್ಟಿಕೊಂಡಿವೆ. ಇದಕ್ಕೆ ಕಾರಣವೇನು? ಎಫ್ಐಆರ್​ನಲ್ಲಿ ಏನಿದೆ? ಅನುಮಾನಕ್ಕೆ ಕಾರಣವಾದ ಅಂಶಗಳು ಯಾವುವು? ಮಾಹಿತಿ ಇಲ್ಲಿದೆ.

ಬೆಂಗಳೂರು ಕಾಲ್ತುಳಿತ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ ಎಫ್​ಐಆರ್!
Rcb (2)
ಗಂಗಾಧರ​ ಬ. ಸಾಬೋಜಿ
| Edited By: |

Updated on:Jun 06, 2025 | 3:41 PM

Share

ಬೆಂಗಳೂರು, ಜೂನ್​ 06: ನಗರದಲ್ಲಿ ನಡೆದ ಘೋರ ಕಾಲ್ತುಳಿತ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 11 ಆರ್​ಸಿಬಿ (RCB) ಅಭಿಮಾನಿಗಳು ಸಾವನ್ನಪ್ಪಿದ್ದರು. ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದ್ದು, ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆದರೆ ಇದೀಗ ಕರ್ನಾಟಕ ಪೊಲೀಸರು ದಾಖಲಿಸಿರುವ ಎಫ್​ಐಆರ್​ ವಿರುದ್ಧ ಕೆಲ ಪ್ರಶ್ನೆ ಮತ್ತು ಅನುಮಾನಗಳು ಹುಟ್ಟಿಕೊಂಡಿವೆ.

ಕಾಲ್ತುಳಿತದ ಬಗ್ಗೆ ಕೇವಲ ಯುಡಿಆರ್​ ದಾಖಲಿಸಿ ಪೊಲೀಸ್ ಇಲಾಖೆ ಕೈತೊಳೆದುಕೊಂಡಿತ್ತು. ಆದರೆ ವ್ಯಾಪಕ ಆರೋಪ ವ್ಯಕ್ತವಾಗಿದ್ದರಿಂದ‌ ಎಚ್ಚೆತ್ತ ಪೊಲೀಸರು ಕೊನೆಗೆ ಘಟನೆ ಬಗ್ಗೆ ಎಫ್​ಐಆರ್​ ದಾಖಲಿಸಿದ್ದರು. ಆದರೆ ಈಗ ದಾಖಲಾಗಿರುವ ಎಫ್​ಐಆರ್​ ಹಲವು ಅನುಮಾಗಳಿಗೆ ಕಾರಣವಾಗಿದೆ.

ಎಫ್​ಐಆರ್​ ವಿರುದ್ಧ ಎದ್ದಿರುವ ಅನುಮಾನಗಳು?

ಎಫ್​ಐಆರ್: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ ಪ್ರಕಾರ, ಜೂನ್ 3ರಂದು ಸಂಜೆ 6 ಗಂಟೆಗೆ KSCA ಎಕ್ಸಿಕ್ಯೂಟಿವ್ ಆಫೀಸರ್ ಶುಭೇಂದು ಘೋಷ್, ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​​ಸಿಬಿ ಸಂಭ್ರಮಾಚರಣೆ ಇರಲಿದೆ. ಇದಕ್ಕೆ ಸೂಕ್ತ ಭದ್ರತೆ ನೀಡುವಂತೆ ಮನವಿ ಪತ್ರ ನೀಡಿರುತ್ತಾರೆ.

ಇದನ್ನೂ ಓದಿ
Image
ಸರ್ಕಾರ ಸ್ಥಿಮಿತ ತಪ್ಪಿದೆ, ಸಿಎಂ ಹೇಡಿಯಂತೆ ವರ್ತಿಸಿದ್ದಾರೆ: ಭಾಸ್ಕರ ರಾವ್
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಎಫ್ಐಆರ್​ನಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಶ್ನೆ: ಅಂದರೆ, ಐಪಿಎಲ್ ಫೈನಲ್ ಪಂದ್ಯ ಪ್ರಾರಂಭಗೊಳ್ಳುವ ಮೊದಲೇ ಕೆಎಸ್​ಸಿಎಸಿಗೆ ಆರ್​ಸಿಬಿ ಗೆಲ್ಲುತ್ತೆ ಎನ್ನುವುದು ಗೊತ್ತಿತ್ತಾ. ಇದು ಹೇಗೆ ಸಾಧ್ಯ ಎಂಬ ಅನುಮಾನ ಮೂಡಿದೆ.

ಎಫ್​ಐಆರ್: ಜೂನ್​ 4ರಂದು ಬೆಳಿಗ್ಗೆ 9 ಗಂಟೆ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆದು ಬಂದೋಬಸ್ಥ್​ ವ್ಯವಸ್ಥೆ ಮಾಡಿಕೊಳ್ಳಲಾಯಿತು ಎಂದು ಉಲ್ಲೇಖಿಸಲಾಗಿದೆ.

ಪ್ರಶ್ನೆ: ಅಂದರೆ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಯಿತು ಎನ್ನುವುದೇ ಸುಳ್ಳು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಎಫ್​ಐಆರ್: ಇನ್ನು ಎಫ್​​ಐಆರ್​ನಲ್ಲಿ ಉಲ್ಲೇಖಿಸಿರುವಂತೆ ಮಧ್ಯಾಹ್ನ 03.10ರ ಸಮಯಕ್ಕೆ ಕಾಲ್ತುಳಿತಕ್ಕೆ ಒಳಗಾಗಿ 11 ಜನ ಮೃತಪಟ್ಟಿರುತ್ತಾರೆ.

ಪ್ರಶ್ನೆ: ಹಾಗಾದರೆ ಕೃತ್ಯ ನಡೆದದ್ದು, ಸಂಜೆ 4ರಿಂದ 5 ಗಂಟೆ ಎನ್ನುವುದೇ ಸುಳ್ಳು.

ಇದನ್ನೂ ಓದಿ: Bengaluru Stampede: ಪೊಲೀಸರು ಯಾಕೆ ಬಲಿಪಶು ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಂಮಜಸ ಉತ್ತರ

ಪ್ರಶ್ನೆ: ಸಂಜೆ 05.45ಕ್ಕೆ ಕಾರ್ಯಕ್ರಮ ಶುರುವಾಯಿತು. 9 ನೇ ನಂಬರ್​ ಗೇಟ್​ ಬಳಿ ಕಾಲ್ತುಳಿತಕ್ಕೆ ಒಳಗಾಗಿದ್ದು, ಯಾವ ಯಾವ ಗೇಟ್​ಗಳಲ್ಲಿ ಯಾರು ಯಾರ ಮೃತ ದೇಹ ಸಿಕ್ಕಿದ್ದು ವಿವರವಿಲ್ಲ. ಜೂನ್​ 4ರಂದು ಆ ಜಾಗಗಳ ಮಹಜರು ನಡೆಸಿದ ಬಗ್ಗೆ ವಿವರವಿಲ್ಲ. ಜೊತೆಗೆ ಅನುಮಾನಿಸಿದ ವ್ಯಕ್ತಿಗಳ ಹೆಸರು ಪಟ್ಟಿಯಲ್ಲಿ ಇಲ್ಲ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ದಾಖಲಿಸಿರುವ ಎಫ್​ಐಆರ್​ನ ಈ ಅಂಶಗಳು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:25 pm, Fri, 6 June 25

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್