AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ ಎಫ್​ಐಆರ್!

ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ನಡೆದ ಕಾಲು ತುಳಿತ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಆರ್​ಸಿಬಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಬಗ್ಗೆ ಹಲವು ಅನುಮಾನಗಳು, ಪ್ರಶ್ನೆಗಳು ಹುಟ್ಟಿಕೊಂಡಿವೆ. ಇದಕ್ಕೆ ಕಾರಣವೇನು? ಎಫ್ಐಆರ್​ನಲ್ಲಿ ಏನಿದೆ? ಅನುಮಾನಕ್ಕೆ ಕಾರಣವಾದ ಅಂಶಗಳು ಯಾವುವು? ಮಾಹಿತಿ ಇಲ್ಲಿದೆ.

ಬೆಂಗಳೂರು ಕಾಲ್ತುಳಿತ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ ಎಫ್​ಐಆರ್!
Rcb (2)
ಗಂಗಾಧರ​ ಬ. ಸಾಬೋಜಿ
| Updated By: ಡಾ. ಭಾಸ್ಕರ ಹೆಗಡೆ|

Updated on:Jun 06, 2025 | 3:41 PM

Share

ಬೆಂಗಳೂರು, ಜೂನ್​ 06: ನಗರದಲ್ಲಿ ನಡೆದ ಘೋರ ಕಾಲ್ತುಳಿತ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. 11 ಆರ್​ಸಿಬಿ (RCB) ಅಭಿಮಾನಿಗಳು ಸಾವನ್ನಪ್ಪಿದ್ದರು. ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದ್ದು, ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆದರೆ ಇದೀಗ ಕರ್ನಾಟಕ ಪೊಲೀಸರು ದಾಖಲಿಸಿರುವ ಎಫ್​ಐಆರ್​ ವಿರುದ್ಧ ಕೆಲ ಪ್ರಶ್ನೆ ಮತ್ತು ಅನುಮಾನಗಳು ಹುಟ್ಟಿಕೊಂಡಿವೆ.

ಕಾಲ್ತುಳಿತದ ಬಗ್ಗೆ ಕೇವಲ ಯುಡಿಆರ್​ ದಾಖಲಿಸಿ ಪೊಲೀಸ್ ಇಲಾಖೆ ಕೈತೊಳೆದುಕೊಂಡಿತ್ತು. ಆದರೆ ವ್ಯಾಪಕ ಆರೋಪ ವ್ಯಕ್ತವಾಗಿದ್ದರಿಂದ‌ ಎಚ್ಚೆತ್ತ ಪೊಲೀಸರು ಕೊನೆಗೆ ಘಟನೆ ಬಗ್ಗೆ ಎಫ್​ಐಆರ್​ ದಾಖಲಿಸಿದ್ದರು. ಆದರೆ ಈಗ ದಾಖಲಾಗಿರುವ ಎಫ್​ಐಆರ್​ ಹಲವು ಅನುಮಾಗಳಿಗೆ ಕಾರಣವಾಗಿದೆ.

ಎಫ್​ಐಆರ್​ ವಿರುದ್ಧ ಎದ್ದಿರುವ ಅನುಮಾನಗಳು?

ಎಫ್​ಐಆರ್: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ ಪ್ರಕಾರ, ಜೂನ್ 3ರಂದು ಸಂಜೆ 6 ಗಂಟೆಗೆ KSCA ಎಕ್ಸಿಕ್ಯೂಟಿವ್ ಆಫೀಸರ್ ಶುಭೇಂದು ಘೋಷ್, ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​​ಸಿಬಿ ಸಂಭ್ರಮಾಚರಣೆ ಇರಲಿದೆ. ಇದಕ್ಕೆ ಸೂಕ್ತ ಭದ್ರತೆ ನೀಡುವಂತೆ ಮನವಿ ಪತ್ರ ನೀಡಿರುತ್ತಾರೆ.

ಇದನ್ನೂ ಓದಿ
Image
ಸರ್ಕಾರ ಸ್ಥಿಮಿತ ತಪ್ಪಿದೆ, ಸಿಎಂ ಹೇಡಿಯಂತೆ ವರ್ತಿಸಿದ್ದಾರೆ: ಭಾಸ್ಕರ ರಾವ್
Image
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಎಫ್ಐಆರ್​ನಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಶ್ನೆ: ಅಂದರೆ, ಐಪಿಎಲ್ ಫೈನಲ್ ಪಂದ್ಯ ಪ್ರಾರಂಭಗೊಳ್ಳುವ ಮೊದಲೇ ಕೆಎಸ್​ಸಿಎಸಿಗೆ ಆರ್​ಸಿಬಿ ಗೆಲ್ಲುತ್ತೆ ಎನ್ನುವುದು ಗೊತ್ತಿತ್ತಾ. ಇದು ಹೇಗೆ ಸಾಧ್ಯ ಎಂಬ ಅನುಮಾನ ಮೂಡಿದೆ.

ಎಫ್​ಐಆರ್: ಜೂನ್​ 4ರಂದು ಬೆಳಿಗ್ಗೆ 9 ಗಂಟೆ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆದು ಬಂದೋಬಸ್ಥ್​ ವ್ಯವಸ್ಥೆ ಮಾಡಿಕೊಳ್ಳಲಾಯಿತು ಎಂದು ಉಲ್ಲೇಖಿಸಲಾಗಿದೆ.

ಪ್ರಶ್ನೆ: ಅಂದರೆ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಯಿತು ಎನ್ನುವುದೇ ಸುಳ್ಳು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಎಫ್​ಐಆರ್: ಇನ್ನು ಎಫ್​​ಐಆರ್​ನಲ್ಲಿ ಉಲ್ಲೇಖಿಸಿರುವಂತೆ ಮಧ್ಯಾಹ್ನ 03.10ರ ಸಮಯಕ್ಕೆ ಕಾಲ್ತುಳಿತಕ್ಕೆ ಒಳಗಾಗಿ 11 ಜನ ಮೃತಪಟ್ಟಿರುತ್ತಾರೆ.

ಪ್ರಶ್ನೆ: ಹಾಗಾದರೆ ಕೃತ್ಯ ನಡೆದದ್ದು, ಸಂಜೆ 4ರಿಂದ 5 ಗಂಟೆ ಎನ್ನುವುದೇ ಸುಳ್ಳು.

ಇದನ್ನೂ ಓದಿ: Bengaluru Stampede: ಪೊಲೀಸರು ಯಾಕೆ ಬಲಿಪಶು ಅಂತ ಕೇಳಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಂಮಜಸ ಉತ್ತರ

ಪ್ರಶ್ನೆ: ಸಂಜೆ 05.45ಕ್ಕೆ ಕಾರ್ಯಕ್ರಮ ಶುರುವಾಯಿತು. 9 ನೇ ನಂಬರ್​ ಗೇಟ್​ ಬಳಿ ಕಾಲ್ತುಳಿತಕ್ಕೆ ಒಳಗಾಗಿದ್ದು, ಯಾವ ಯಾವ ಗೇಟ್​ಗಳಲ್ಲಿ ಯಾರು ಯಾರ ಮೃತ ದೇಹ ಸಿಕ್ಕಿದ್ದು ವಿವರವಿಲ್ಲ. ಜೂನ್​ 4ರಂದು ಆ ಜಾಗಗಳ ಮಹಜರು ನಡೆಸಿದ ಬಗ್ಗೆ ವಿವರವಿಲ್ಲ. ಜೊತೆಗೆ ಅನುಮಾನಿಸಿದ ವ್ಯಕ್ತಿಗಳ ಹೆಸರು ಪಟ್ಟಿಯಲ್ಲಿ ಇಲ್ಲ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ದಾಖಲಿಸಿರುವ ಎಫ್​ಐಆರ್​ನ ಈ ಅಂಶಗಳು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:25 pm, Fri, 6 June 25

ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​