AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ಲವ ಹೆಣ್ಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಕೇಸ್ ಬುಕ್: ಆಡಿಯೋದಲ್ಲೇನಿದೆ?

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ದೂರು ನೀಡಿದರೂ ಪ್ರಕರಣ ದಾಖಲಿಸಿರಲಿಲ್ಲ. ಹೀಗಾಗಿ ಹಿಂದೂ ಜಾಗರಣ ವೇದಿಕೆ ನಾಳೆ ಪ್ರತಿಭಟನೆಗೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಬಿಸಿ ಬೆನ್ನಲ್ಲೇ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. 

ಬಿಲ್ಲವ ಹೆಣ್ಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಕೇಸ್ ಬುಕ್: ಆಡಿಯೋದಲ್ಲೇನಿದೆ?
ಬಿಲ್ಲವ ಹೆಣ್ಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಕೇಸ್ ಬುಕ್: ಆಡಿಯೋದಲ್ಲೇನಿದೆ?
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 17, 2024 | 10:33 PM

Share

ಮಂಗಳೂರು, ಅಕ್ಟೋಬರ್​ 17: ಬಿಲ್ಲವ ಸಮುದಾಯದ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಕೊನೆಗೂ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್​ಐಆರ್ (FIR)​ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಠಾಣೆಯಲ್ಲಿ ಎಫ್​ಐಆರ್ ಹಾಕಲಾಗಿದ್ದು, ಬಿಎನ್ಎಸ್ ಕಾಯ್ದೆ 79ರಡಿ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ದೂರು ನೀಡಿದರೂ ಪ್ರಕರಣ ದಾಖಲಿಸಿರಲಿಲ್ಲ. ಹೀಗಾಗಿ ಹಿಂದೂ ಜಾಗರಣ ವೇದಿಕೆ ನಾಳೆ ಪ್ರತಿಭಟನೆಗೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಬಿಸಿ ಬೆನ್ನಲ್ಲೇ ಇದೀಗ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಹಿಂದೂ ಧರ್ಮದ ಒಂದು ಸಮಾಜದ ಹೆಣ್ಣುಮಕ್ಕಳನ್ನು ವೇಶ್ಯೆಯರು ಎಂದ ಸರ್ಕಾರಿ ಅಧಿಕಾರಿ: ಆಕ್ರೋಶ

ಪಂಜ ಉಪವಲಯದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಮಕ್ಕಳ ಬಗ್ಗೆ ನಾಲಗೆ ಹರಿಬಿಟ್ಟಿದ್ದರು. ಸುರೇಶ್ ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಸರ್ಕಾರಿ ಅಧಿಕಾರಿಯ ಆಡಿಯೋ ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿತ್ತು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂ…. ಆಗಿದ್ದಾರೆ’‌ ‘ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ’ ‘ಹಿಂದುತ್ವದ ಹುಡುಗರು ಸೂ…ನ್ನಾಗಿ ಮಾಡಿದ್ದಾರೆ’ ‘ಬಿಲ್ಲವ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ’ ‘ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದ್ದರು’ ಎಂದು ಫೋನ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಈ ಹಿಂದೆ ಕೂಡ ವಿವಾದದಿಂದಾಗಿ ಸೇವೆಯಿಂದ ಅಮಾನತ್ತಾಗಿದ್ದರು. ಇದೀಗ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Thu, 17 October 24

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ