ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Mar 21, 2024 | 9:51 AM

ಬೆಂಗಳೂರು, ಮಾರ್ಚ್​.21: ಫುಡ್ ಡೆಲಿವರಿ ಬಾಯ್​​ನಿಂದ (Food Delivery Boy) ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹೆಚ್​​ಎಎಲ್ ಪೊಲೀಸ್ ಠಾಣಾ (HAL Police Station) ವ್ಯಾಪ್ತಿಯಲ್ಲಿ ಮಾ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್ ಆಕಾಶ್ ಬಿ ಎಂಬುವಾತ ಕುಡಿಯಲು ನೀರು ಕೇಳಿ ಮನೆಗೆ ನುಗ್ಗಿ ಯುವತಿಯ ಕೈಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ. ಸದ್ಯ ಯುವತಿ ದೂರಿನನ್ವಯ ಹೆಚ್​​ಎಎಲ್​​ ಪೊಲೀಸ್​ ಠಾಣೆಯಲ್ಲಿ FIR​ ದಾಖಲಾಗಿದೆ.

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ಆಕಾಶ್, ಫುಡ್ ಡೆಲಿವೆರಿ ನೀಡಲು ಬಂದಿದ್ದ. ಈ ವೇಳೆ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿದ್ದ. ಯುವತಿ ನೀರು ತರಲು ಹೋದಾಗ ಒಳಗೆ ನುಗ್ಗಿದ ಆಕಾಶ್ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಆಗ ಯುವತಿ ಯುವಕನನ್ನು ತಳ್ಳಿ ಗಲಾಟೆ ಮಾಡಿದ್ದಾರೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಹೊಯ್ಸಳ ಪೊಲೀಸರಿಗೆ ಬಂದೂಕು ಕಡ್ಡಾಯ: ಕಾರಣ ಇಲ್ಲಿದೆ

ಬಸ್​ನಲ್ಲಿ ಆ್ಯಸಿಡ್ ಬಾಟಲ್​ಗಳು ಸ್ಫೋಟ

ಬಸ್​ನಲ್ಲಿ ಶೌಚಾಲಯಕ್ಕೆ ಬಳಸುವ ಌಸಿಡ್ ಬಾಟಲ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದಾರೆ. ತುಮಕೂರಿನ ಗೂಳೂರು ಬಳಿ‌ ಕುಣಿಗಲ್​ನಿಂದ ತುಮಕೂರು ಕಡೆ ಬರುತ್ತಿದ್ದ ಗಣಪತಿ ಬಸ್ ಘಟನೆ ನಡೆದಿದೆ. ಶಕೀಲಾ ಬಾನು ಎಂಬಾಕೆ ಌಸಿಡ್ ಬಾಟಲ್​ಗಳನ್ನು ತಂದಿದ್ದಳು. ಈ ವೇಳೆ ಬಾಟಲ್​​ಗಳು ಸ್ಫೋಟಗೊಂಡು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಹಾಗೂ FSL ಟೀಂ ಭೇಟಿ ನೀಡಿ ಪರಿಶೀಲಿಸಿವೆ.

ಹುಲಿ ದಾಳಿಗೆ ಐದು ಹಸುಗಳು ಬಲಿ

ಹುಲಿ ದಾಳಿಗೆ ಐದು ಹಸುಗಳು ಬಲಿಯಾಗಿವೆ. ಚಿಕ್ಕಮಗಳೂರು ತಾಲೂಕಿನ ಕಠಾರದಹಳ್ಳಿಯಲ್ಲಿ ಘಟನೆ ನಡೆದಿದ್ದು, ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಬಲಿಯಾಗಿವೆ. ಮೇಯಲು ಹೋಗಿದ್ದ ಹಸುಗಳು ಮನೆಗೆ ಬಂದಿರಲಿಲ್ಲ. ಹೋಗಿ ನೋಡಿದಾಗ ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿದೆ. ಆನೆ ದಾಳಿಯಿಂದ ಕಂಗಾಲಾಗಿದ್ದ ಜನರಿಗೆ ಈಗ ಹುಲಿ ದಾಳಿಯಿಂದ ಆತಂಕ ಎದುರಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:49 am, Thu, 21 March 24

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’