AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Mar 21, 2024 | 9:51 AM

Share

ಬೆಂಗಳೂರು, ಮಾರ್ಚ್​.21: ಫುಡ್ ಡೆಲಿವರಿ ಬಾಯ್​​ನಿಂದ (Food Delivery Boy) ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹೆಚ್​​ಎಎಲ್ ಪೊಲೀಸ್ ಠಾಣಾ (HAL Police Station) ವ್ಯಾಪ್ತಿಯಲ್ಲಿ ಮಾ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್ ಆಕಾಶ್ ಬಿ ಎಂಬುವಾತ ಕುಡಿಯಲು ನೀರು ಕೇಳಿ ಮನೆಗೆ ನುಗ್ಗಿ ಯುವತಿಯ ಕೈಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ. ಸದ್ಯ ಯುವತಿ ದೂರಿನನ್ವಯ ಹೆಚ್​​ಎಎಲ್​​ ಪೊಲೀಸ್​ ಠಾಣೆಯಲ್ಲಿ FIR​ ದಾಖಲಾಗಿದೆ.

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ಆಕಾಶ್, ಫುಡ್ ಡೆಲಿವೆರಿ ನೀಡಲು ಬಂದಿದ್ದ. ಈ ವೇಳೆ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿದ್ದ. ಯುವತಿ ನೀರು ತರಲು ಹೋದಾಗ ಒಳಗೆ ನುಗ್ಗಿದ ಆಕಾಶ್ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಆಗ ಯುವತಿ ಯುವಕನನ್ನು ತಳ್ಳಿ ಗಲಾಟೆ ಮಾಡಿದ್ದಾರೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಹೊಯ್ಸಳ ಪೊಲೀಸರಿಗೆ ಬಂದೂಕು ಕಡ್ಡಾಯ: ಕಾರಣ ಇಲ್ಲಿದೆ

ಬಸ್​ನಲ್ಲಿ ಆ್ಯಸಿಡ್ ಬಾಟಲ್​ಗಳು ಸ್ಫೋಟ

ಬಸ್​ನಲ್ಲಿ ಶೌಚಾಲಯಕ್ಕೆ ಬಳಸುವ ಌಸಿಡ್ ಬಾಟಲ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದಾರೆ. ತುಮಕೂರಿನ ಗೂಳೂರು ಬಳಿ‌ ಕುಣಿಗಲ್​ನಿಂದ ತುಮಕೂರು ಕಡೆ ಬರುತ್ತಿದ್ದ ಗಣಪತಿ ಬಸ್ ಘಟನೆ ನಡೆದಿದೆ. ಶಕೀಲಾ ಬಾನು ಎಂಬಾಕೆ ಌಸಿಡ್ ಬಾಟಲ್​ಗಳನ್ನು ತಂದಿದ್ದಳು. ಈ ವೇಳೆ ಬಾಟಲ್​​ಗಳು ಸ್ಫೋಟಗೊಂಡು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಹಾಗೂ FSL ಟೀಂ ಭೇಟಿ ನೀಡಿ ಪರಿಶೀಲಿಸಿವೆ.

ಹುಲಿ ದಾಳಿಗೆ ಐದು ಹಸುಗಳು ಬಲಿ

ಹುಲಿ ದಾಳಿಗೆ ಐದು ಹಸುಗಳು ಬಲಿಯಾಗಿವೆ. ಚಿಕ್ಕಮಗಳೂರು ತಾಲೂಕಿನ ಕಠಾರದಹಳ್ಳಿಯಲ್ಲಿ ಘಟನೆ ನಡೆದಿದ್ದು, ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಬಲಿಯಾಗಿವೆ. ಮೇಯಲು ಹೋಗಿದ್ದ ಹಸುಗಳು ಮನೆಗೆ ಬಂದಿರಲಿಲ್ಲ. ಹೋಗಿ ನೋಡಿದಾಗ ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿದೆ. ಆನೆ ದಾಳಿಯಿಂದ ಕಂಗಾಲಾಗಿದ್ದ ಜನರಿಗೆ ಈಗ ಹುಲಿ ದಾಳಿಯಿಂದ ಆತಂಕ ಎದುರಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:49 am, Thu, 21 March 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ