AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Mar 21, 2024 | 9:51 AM

Share

ಬೆಂಗಳೂರು, ಮಾರ್ಚ್​.21: ಫುಡ್ ಡೆಲಿವರಿ ಬಾಯ್​​ನಿಂದ (Food Delivery Boy) ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹೆಚ್​​ಎಎಲ್ ಪೊಲೀಸ್ ಠಾಣಾ (HAL Police Station) ವ್ಯಾಪ್ತಿಯಲ್ಲಿ ಮಾ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್ ಆಕಾಶ್ ಬಿ ಎಂಬುವಾತ ಕುಡಿಯಲು ನೀರು ಕೇಳಿ ಮನೆಗೆ ನುಗ್ಗಿ ಯುವತಿಯ ಕೈಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ. ಸದ್ಯ ಯುವತಿ ದೂರಿನನ್ವಯ ಹೆಚ್​​ಎಎಲ್​​ ಪೊಲೀಸ್​ ಠಾಣೆಯಲ್ಲಿ FIR​ ದಾಖಲಾಗಿದೆ.

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ಆಕಾಶ್, ಫುಡ್ ಡೆಲಿವೆರಿ ನೀಡಲು ಬಂದಿದ್ದ. ಈ ವೇಳೆ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿದ್ದ. ಯುವತಿ ನೀರು ತರಲು ಹೋದಾಗ ಒಳಗೆ ನುಗ್ಗಿದ ಆಕಾಶ್ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಆಗ ಯುವತಿ ಯುವಕನನ್ನು ತಳ್ಳಿ ಗಲಾಟೆ ಮಾಡಿದ್ದಾರೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಹೊಯ್ಸಳ ಪೊಲೀಸರಿಗೆ ಬಂದೂಕು ಕಡ್ಡಾಯ: ಕಾರಣ ಇಲ್ಲಿದೆ

ಬಸ್​ನಲ್ಲಿ ಆ್ಯಸಿಡ್ ಬಾಟಲ್​ಗಳು ಸ್ಫೋಟ

ಬಸ್​ನಲ್ಲಿ ಶೌಚಾಲಯಕ್ಕೆ ಬಳಸುವ ಌಸಿಡ್ ಬಾಟಲ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದಾರೆ. ತುಮಕೂರಿನ ಗೂಳೂರು ಬಳಿ‌ ಕುಣಿಗಲ್​ನಿಂದ ತುಮಕೂರು ಕಡೆ ಬರುತ್ತಿದ್ದ ಗಣಪತಿ ಬಸ್ ಘಟನೆ ನಡೆದಿದೆ. ಶಕೀಲಾ ಬಾನು ಎಂಬಾಕೆ ಌಸಿಡ್ ಬಾಟಲ್​ಗಳನ್ನು ತಂದಿದ್ದಳು. ಈ ವೇಳೆ ಬಾಟಲ್​​ಗಳು ಸ್ಫೋಟಗೊಂಡು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಹಾಗೂ FSL ಟೀಂ ಭೇಟಿ ನೀಡಿ ಪರಿಶೀಲಿಸಿವೆ.

ಹುಲಿ ದಾಳಿಗೆ ಐದು ಹಸುಗಳು ಬಲಿ

ಹುಲಿ ದಾಳಿಗೆ ಐದು ಹಸುಗಳು ಬಲಿಯಾಗಿವೆ. ಚಿಕ್ಕಮಗಳೂರು ತಾಲೂಕಿನ ಕಠಾರದಹಳ್ಳಿಯಲ್ಲಿ ಘಟನೆ ನಡೆದಿದ್ದು, ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಬಲಿಯಾಗಿವೆ. ಮೇಯಲು ಹೋಗಿದ್ದ ಹಸುಗಳು ಮನೆಗೆ ಬಂದಿರಲಿಲ್ಲ. ಹೋಗಿ ನೋಡಿದಾಗ ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿದೆ. ಆನೆ ದಾಳಿಯಿಂದ ಕಂಗಾಲಾಗಿದ್ದ ಜನರಿಗೆ ಈಗ ಹುಲಿ ದಾಳಿಯಿಂದ ಆತಂಕ ಎದುರಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:49 am, Thu, 21 March 24

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ