Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು
ಸಾಂದರ್ಭಿಕ ಚಿತ್ರ
Follow us
Shivaprasad
| Updated By: ಆಯೇಷಾ ಬಾನು

Updated on:Mar 21, 2024 | 9:51 AM

ಬೆಂಗಳೂರು, ಮಾರ್ಚ್​.21: ಫುಡ್ ಡೆಲಿವರಿ ಬಾಯ್​​ನಿಂದ (Food Delivery Boy) ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹೆಚ್​​ಎಎಲ್ ಪೊಲೀಸ್ ಠಾಣಾ (HAL Police Station) ವ್ಯಾಪ್ತಿಯಲ್ಲಿ ಮಾ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್ ಆಕಾಶ್ ಬಿ ಎಂಬುವಾತ ಕುಡಿಯಲು ನೀರು ಕೇಳಿ ಮನೆಗೆ ನುಗ್ಗಿ ಯುವತಿಯ ಕೈಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ. ಸದ್ಯ ಯುವತಿ ದೂರಿನನ್ವಯ ಹೆಚ್​​ಎಎಲ್​​ ಪೊಲೀಸ್​ ಠಾಣೆಯಲ್ಲಿ FIR​ ದಾಖಲಾಗಿದೆ.

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ಆಕಾಶ್, ಫುಡ್ ಡೆಲಿವೆರಿ ನೀಡಲು ಬಂದಿದ್ದ. ಈ ವೇಳೆ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿದ್ದ. ಯುವತಿ ನೀರು ತರಲು ಹೋದಾಗ ಒಳಗೆ ನುಗ್ಗಿದ ಆಕಾಶ್ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಆಗ ಯುವತಿ ಯುವಕನನ್ನು ತಳ್ಳಿ ಗಲಾಟೆ ಮಾಡಿದ್ದಾರೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಹೊಯ್ಸಳ ಪೊಲೀಸರಿಗೆ ಬಂದೂಕು ಕಡ್ಡಾಯ: ಕಾರಣ ಇಲ್ಲಿದೆ

ಬಸ್​ನಲ್ಲಿ ಆ್ಯಸಿಡ್ ಬಾಟಲ್​ಗಳು ಸ್ಫೋಟ

ಬಸ್​ನಲ್ಲಿ ಶೌಚಾಲಯಕ್ಕೆ ಬಳಸುವ ಌಸಿಡ್ ಬಾಟಲ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದಾರೆ. ತುಮಕೂರಿನ ಗೂಳೂರು ಬಳಿ‌ ಕುಣಿಗಲ್​ನಿಂದ ತುಮಕೂರು ಕಡೆ ಬರುತ್ತಿದ್ದ ಗಣಪತಿ ಬಸ್ ಘಟನೆ ನಡೆದಿದೆ. ಶಕೀಲಾ ಬಾನು ಎಂಬಾಕೆ ಌಸಿಡ್ ಬಾಟಲ್​ಗಳನ್ನು ತಂದಿದ್ದಳು. ಈ ವೇಳೆ ಬಾಟಲ್​​ಗಳು ಸ್ಫೋಟಗೊಂಡು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಹಾಗೂ FSL ಟೀಂ ಭೇಟಿ ನೀಡಿ ಪರಿಶೀಲಿಸಿವೆ.

ಹುಲಿ ದಾಳಿಗೆ ಐದು ಹಸುಗಳು ಬಲಿ

ಹುಲಿ ದಾಳಿಗೆ ಐದು ಹಸುಗಳು ಬಲಿಯಾಗಿವೆ. ಚಿಕ್ಕಮಗಳೂರು ತಾಲೂಕಿನ ಕಠಾರದಹಳ್ಳಿಯಲ್ಲಿ ಘಟನೆ ನಡೆದಿದ್ದು, ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಬಲಿಯಾಗಿವೆ. ಮೇಯಲು ಹೋಗಿದ್ದ ಹಸುಗಳು ಮನೆಗೆ ಬಂದಿರಲಿಲ್ಲ. ಹೋಗಿ ನೋಡಿದಾಗ ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿದೆ. ಆನೆ ದಾಳಿಯಿಂದ ಕಂಗಾಲಾಗಿದ್ದ ಜನರಿಗೆ ಈಗ ಹುಲಿ ದಾಳಿಯಿಂದ ಆತಂಕ ಎದುರಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:49 am, Thu, 21 March 24

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್