AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR

ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 27, 2020 | 7:06 PM

Share

ಬೆಂಗಳೂರು: ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೆಸರು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚು ಬಡ್ಡಿ ನೀಡದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದ ಮೇಲೆ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ವೆಸ್ಟ್​​ ಆಫ್​​ ಕಾರ್ಡ್​​ ರೋಡ್​ ನಿವಾಸಿ ವೈ.ಕೆ. ದೇವನಾಥ್​ ಎಂಬುವವರು ಪ್ರಶಾಂತ್​ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರಂತೆ. ಶ್ಯೂರಿಟಿಗಾಗಿ ತಮ್ಮ ಆಸ್ತಿ ಪತ್ರಗಳನ್ನ ದೇವನಾಥ್​​ ಅಡವಿಟ್ಟಿದ್ದರು. ಬಡ್ಡಿ ಸಮೇತ ಹಣ ನೀಡಿದ್ದರೂ ಪ್ರಶಾಂತ್​ ಸಂಬರಗಿ ದಾಖಲೆ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಸಾಲವನ್ನು ಬಡ್ಡಿ ಸಮೇತ ಹಣ ಹಿಂದಿರುಗಿಸಿದ ನಂತರವೂ, ತೆಗೆದುಕೊಂಡ ಸಾಲಕ್ಕೆ ಶೇ 10ರಷ್ಟು ಬಡ್ಡಿ ನೀಡುವಂತೆ ಸಂಬರಗಿ ಬೇಡಿಕೆ ಇಟ್ಟಿದ್ದಾರೆ. ಬಡ್ಡಿ ಕೊಡಲು ಒಪ್ಪದಿದ್ದಾಗ ದೇವನಾಥ್​​ ವಿರುದ್ಧ ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ಮೊದಲ ಬಾರಿಗೆ ಸುದ್ದಿಯಾದಾಗ ಪ್ರಶಾಂತ್​ ಸಂಬರಗಿ ಮುನ್ನಲೆಗೆ ಬಂದಿದ್ದರು. ಸಾಕಷ್ಟು ನಟ-ನಟಿಯರ ವಿರುದ್ಧ ಡ್ರಗ್​ ಸೇವನೆಯ ಆರೋಪ ಮಾಡಿದ್ದರು. ಸರ್ಜಾ ಕುಟುಂಬಕ್ಕೆ ಸಂಬರಗಿ ಆಪ್ತರಾಗಿದ್ದಾರೆ.

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ